Homeಕರ್ನಾಟಕಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಒಕ್ಕಲೆಬ್ಬಿಸುವ, ಬೆದರಿಕೆ ಹಾಕುವ ಮತ್ತು ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಪ್ರಕರಣಗಳು ಮುಂದುವರಿದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸಾಗುವಳಿ ಜಮೀನಿನಲ್ಲಿ ರೈತರು ಕಟ್ಟಿಕೊಂಡಿದ್ದ ಗುಡಿಸಲು ಧ್ವಂಸ, ಬೆಳೆ ನಾಶ ಮಾಡಿದ್ದು ರೈತರ ಮೇಲೆ ಹಲ್ಲೆ, ದೌರ್ಜನ್ಯಗಳು ಕೂಡ ನಡೆಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಮಂದಿ ಬಗರ್ ಹುಕುಂ ಸಾಗುವಳಿದಾರರಿದ್ದು ಸರ್ಕಾರಕ್ಕೆ ಸಾಗುವಳಿ ಚೀಟಿ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ. ಫಾರಂ 57 ಅನ್ನು ಸಲ್ಲಿಸಿದ್ದಾರೆ. ಭೂಮಿ ಇಲ್ಲದೆ ಗೋಮಾಳದಲ್ಲಿ ಉಳುಮೆ ಮಾಡಿಕೊಂಡರೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾಟ ತಪ್ಪಿಲ್ಲ. ಕೊರೊನಾ ಸಂಕಷ್ಟದಲ್ಲಿರುವ ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಲು ಮುಂದಾದರೆ ಅರಣ್ಯ ಇಲಾಖೆ ಬಿಡುತ್ತಿಲ್ಲ.

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಿದೆ. ತುಮಕೂರು ತಾಲೂಕು ಶಂಭೋನಹಳ್ಳಿಯ ಸರ್ವೇ ನಂಬರ್ 39, 40 ಮತ್ತು 41ರಲ್ಲಿ ಸಾಗುವಳಿ ಮಾಡುತ್ತಿದ್ದ 36 ಮಂದಿ ರೈತರ ಮೇಲೆ ಅರಣ್ಯ ಇಲಾಖೆ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂದು ಕೇಸ್ ದಾಖಲಿಸಿದೆ.

ಶಂಭೋನಹಳ್ಳಿಯ ಮೂರು ಸರ್ವೇ ನಂಬರ್‌ಗಳಲ್ಲಿರುವ ಗೋಮಾಳದಲ್ಲಿ 36 ರೈತರು ಕಳೆದ ಮೂರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಡ ರೈತರು ಜೀವನೋಪಾಯಕ್ಕಾಗಿ ಭೂಮಿ ಉಳುಮೆ ಮಾಡಿಕೊಂಡರೆ ಈಗ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಬಡ ರೈತರು ಹೆದರಿಕೊಂಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಬಂದರೆ ರೈತರು ಬಚ್ಚಿಟ್ಟುಕೊಳ್ಳುವಂತಹ ಪರಿಸ್ಥಿತಿ ಬಂದಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ರೈತರೊಬ್ಬರು ಅಳಲು ತೋಡಿಕೊಂಡಿದ್ದಾರೆ. ಸಂಸದ ಜಿ.ಎಸ್. ಬಸವರಾಜು ಕೋರ ಪೊಲೀಸರಿಗೆ ಹೇಳಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 38ರಲ್ಲಿ ಬಲಾಢ್ಯರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಸಾಕಷ್ಟು ಜಮೀನು ಇರುವ ಭೂಮಾಲಿಕರಿಗೆ ಅಧಿಕಾರಿಗಳು ಲಂಚ ಪಡೆದು ಸಾಗುವಳಿ ಚೀಟಿ ನೀಡುತ್ತಿದ್ದಾರೆ. ಸ.ನ. 38ರಲ್ಲಿ ಒಂದೇ ಸಮುದಾಯದ ರೈತರಿಗೆ ಭೂಮಿ ಮಂಜೂರು ಮಾಡಿದೆ. ಹಾಗಾಗಿ ಹಿಂದುಳಿದವರು ಮತ್ತು ಪರಿಶಿಷ್ಟರು ಪಕ್ಕದಲ್ಲಿದ್ದರೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಂಸದರ ಮೇಲೆ ಒತ್ತಡ ತಂದು ಪ್ರಕರಣ ದಾಖಲಿಸುವಂತೆ ಮಾಡಲಾಗಿದೆ ಎಂದು ದೂರಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿರಂತರ ಹೋರಾಟದ ಫಲವಾಗಿ ಕೆಲವು ಕಡೆ ಸಾಗುವಳಿ ಚೀಟಿ ನೀಡಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುತುವರ್ಜಿಯಿಂದ ಕೆಲವು ರೈತರಿಗೆ ಸಾಗುವಳಿ ಚೀಟಿ ದೊರೆತಿವೆ.  ಚಿ.ನಾ.ಹಳ್ಳಿ, ಗುಬ್ಬಿ ಮತ್ತು ತುಮಕೂರು ತಾಲೂಕುಗಳಲ್ಲಿ 6-7 ಸಾವಿರ ಮಂದಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗಿದೆ  ಆದರೆ  ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಗಳಾಗಿರುವ ಪಾವಗಡ, ಮಧುಗಿರಿ, ಶಿರಾ  ಕೊರಟಗೆರೆಯಲ್ಲಿ ಸಾಗುವಳಿ ಚೀಟಿ ನೀಡಿಲ್ಲ. ಜಮೀನು ಇರುವ ರೈತರಿಗೆ ಅಧಿಕಾರಿಗಳು ಸಾಗುವಳಿ ಭೂಮಿ ಮಂಜೂರು ಮಾಡುತ್ತಾರೆ. ಇದರಿಂದ ಭೂರಹಿತರಿಗೆ ಜಮೀನು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರುಶಾಲು ಹೊದ್ದುಕೊಂಡು ರೈತಪರವೆಂದು ಹೇಳಿಕೊಳ್ಳುತ್ತಾರೆ. ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೊರೊನಾ ಸಂದರ್ಭವನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆ ಬ್ಬಿಸುವುದು, ಪ್ರಕರಣ ದಾಖಲಿಸುತ್ತಿದ್ದರೂ ತಡೆಯುವ ಕೆಲಸ ಮಾಡುತ್ತಿಲ್ಲ. ಕೇವಲ ತೋರಿಕೆಗಾಗಿ ಹಸಿರು ಶಾಲು ಹಾಕಿಕೊಂಡರೆ ಅದರಿಂದ ರೈತರಿಗೆ ಏನೂ ಪ್ರಯೋಜನವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳ ದಾಳಿ ಮತ್ತು ಕಿರುಕುಳ ನಿಲ್ಲಿಸಬೇಕು. ಒಕ್ಕಲೆಬ್ಬಿಸುವುದನ್ನು ಬಿಟ್ಟು ಸಾಗುವಳಿ ಚೀಟಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಬಡವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಾಗುವಳಿದಾರರು ಒತ್ತಾಯಿಸಿದ್ದಾರೆ.  ರೌಡಿಗಳು, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು  ಕೈಬಿಡುವ ಸರ್ಕಾರ ಬಡವರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತದೆ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

Also Read: Save India´on Quit India Day: Nationwide Farmers, Trade Unions protests

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...