Homeಕರ್ನಾಟಕಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಒಕ್ಕಲೆಬ್ಬಿಸುವ, ಬೆದರಿಕೆ ಹಾಕುವ ಮತ್ತು ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಪ್ರಕರಣಗಳು ಮುಂದುವರಿದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸಾಗುವಳಿ ಜಮೀನಿನಲ್ಲಿ ರೈತರು ಕಟ್ಟಿಕೊಂಡಿದ್ದ ಗುಡಿಸಲು ಧ್ವಂಸ, ಬೆಳೆ ನಾಶ ಮಾಡಿದ್ದು ರೈತರ ಮೇಲೆ ಹಲ್ಲೆ, ದೌರ್ಜನ್ಯಗಳು ಕೂಡ ನಡೆಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಮಂದಿ ಬಗರ್ ಹುಕುಂ ಸಾಗುವಳಿದಾರರಿದ್ದು ಸರ್ಕಾರಕ್ಕೆ ಸಾಗುವಳಿ ಚೀಟಿ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ. ಫಾರಂ 57 ಅನ್ನು ಸಲ್ಲಿಸಿದ್ದಾರೆ. ಭೂಮಿ ಇಲ್ಲದೆ ಗೋಮಾಳದಲ್ಲಿ ಉಳುಮೆ ಮಾಡಿಕೊಂಡರೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾಟ ತಪ್ಪಿಲ್ಲ. ಕೊರೊನಾ ಸಂಕಷ್ಟದಲ್ಲಿರುವ ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಲು ಮುಂದಾದರೆ ಅರಣ್ಯ ಇಲಾಖೆ ಬಿಡುತ್ತಿಲ್ಲ.

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಿದೆ. ತುಮಕೂರು ತಾಲೂಕು ಶಂಭೋನಹಳ್ಳಿಯ ಸರ್ವೇ ನಂಬರ್ 39, 40 ಮತ್ತು 41ರಲ್ಲಿ ಸಾಗುವಳಿ ಮಾಡುತ್ತಿದ್ದ 36 ಮಂದಿ ರೈತರ ಮೇಲೆ ಅರಣ್ಯ ಇಲಾಖೆ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂದು ಕೇಸ್ ದಾಖಲಿಸಿದೆ.

ಶಂಭೋನಹಳ್ಳಿಯ ಮೂರು ಸರ್ವೇ ನಂಬರ್‌ಗಳಲ್ಲಿರುವ ಗೋಮಾಳದಲ್ಲಿ 36 ರೈತರು ಕಳೆದ ಮೂರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಡ ರೈತರು ಜೀವನೋಪಾಯಕ್ಕಾಗಿ ಭೂಮಿ ಉಳುಮೆ ಮಾಡಿಕೊಂಡರೆ ಈಗ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಬಡ ರೈತರು ಹೆದರಿಕೊಂಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಬಂದರೆ ರೈತರು ಬಚ್ಚಿಟ್ಟುಕೊಳ್ಳುವಂತಹ ಪರಿಸ್ಥಿತಿ ಬಂದಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ರೈತರೊಬ್ಬರು ಅಳಲು ತೋಡಿಕೊಂಡಿದ್ದಾರೆ. ಸಂಸದ ಜಿ.ಎಸ್. ಬಸವರಾಜು ಕೋರ ಪೊಲೀಸರಿಗೆ ಹೇಳಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 38ರಲ್ಲಿ ಬಲಾಢ್ಯರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಸಾಕಷ್ಟು ಜಮೀನು ಇರುವ ಭೂಮಾಲಿಕರಿಗೆ ಅಧಿಕಾರಿಗಳು ಲಂಚ ಪಡೆದು ಸಾಗುವಳಿ ಚೀಟಿ ನೀಡುತ್ತಿದ್ದಾರೆ. ಸ.ನ. 38ರಲ್ಲಿ ಒಂದೇ ಸಮುದಾಯದ ರೈತರಿಗೆ ಭೂಮಿ ಮಂಜೂರು ಮಾಡಿದೆ. ಹಾಗಾಗಿ ಹಿಂದುಳಿದವರು ಮತ್ತು ಪರಿಶಿಷ್ಟರು ಪಕ್ಕದಲ್ಲಿದ್ದರೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಂಸದರ ಮೇಲೆ ಒತ್ತಡ ತಂದು ಪ್ರಕರಣ ದಾಖಲಿಸುವಂತೆ ಮಾಡಲಾಗಿದೆ ಎಂದು ದೂರಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿರಂತರ ಹೋರಾಟದ ಫಲವಾಗಿ ಕೆಲವು ಕಡೆ ಸಾಗುವಳಿ ಚೀಟಿ ನೀಡಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುತುವರ್ಜಿಯಿಂದ ಕೆಲವು ರೈತರಿಗೆ ಸಾಗುವಳಿ ಚೀಟಿ ದೊರೆತಿವೆ.  ಚಿ.ನಾ.ಹಳ್ಳಿ, ಗುಬ್ಬಿ ಮತ್ತು ತುಮಕೂರು ತಾಲೂಕುಗಳಲ್ಲಿ 6-7 ಸಾವಿರ ಮಂದಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗಿದೆ  ಆದರೆ  ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಗಳಾಗಿರುವ ಪಾವಗಡ, ಮಧುಗಿರಿ, ಶಿರಾ  ಕೊರಟಗೆರೆಯಲ್ಲಿ ಸಾಗುವಳಿ ಚೀಟಿ ನೀಡಿಲ್ಲ. ಜಮೀನು ಇರುವ ರೈತರಿಗೆ ಅಧಿಕಾರಿಗಳು ಸಾಗುವಳಿ ಭೂಮಿ ಮಂಜೂರು ಮಾಡುತ್ತಾರೆ. ಇದರಿಂದ ಭೂರಹಿತರಿಗೆ ಜಮೀನು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರುಶಾಲು ಹೊದ್ದುಕೊಂಡು ರೈತಪರವೆಂದು ಹೇಳಿಕೊಳ್ಳುತ್ತಾರೆ. ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೊರೊನಾ ಸಂದರ್ಭವನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆ ಬ್ಬಿಸುವುದು, ಪ್ರಕರಣ ದಾಖಲಿಸುತ್ತಿದ್ದರೂ ತಡೆಯುವ ಕೆಲಸ ಮಾಡುತ್ತಿಲ್ಲ. ಕೇವಲ ತೋರಿಕೆಗಾಗಿ ಹಸಿರು ಶಾಲು ಹಾಕಿಕೊಂಡರೆ ಅದರಿಂದ ರೈತರಿಗೆ ಏನೂ ಪ್ರಯೋಜನವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳ ದಾಳಿ ಮತ್ತು ಕಿರುಕುಳ ನಿಲ್ಲಿಸಬೇಕು. ಒಕ್ಕಲೆಬ್ಬಿಸುವುದನ್ನು ಬಿಟ್ಟು ಸಾಗುವಳಿ ಚೀಟಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಬಡವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಾಗುವಳಿದಾರರು ಒತ್ತಾಯಿಸಿದ್ದಾರೆ.  ರೌಡಿಗಳು, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು  ಕೈಬಿಡುವ ಸರ್ಕಾರ ಬಡವರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತದೆ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

Also Read: Save India´on Quit India Day: Nationwide Farmers, Trade Unions protests

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...