Homeಮುಖಪುಟಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

ಚಳವಳಿ ವೇಳೆ ಪೊಲೀಸರು ಜರುಗಿಸಿದ ಕ್ರಮಗಳಿಂದ ರೈತರು ಸತ್ತಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಕೃಷಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಹೋರಾಟದ ಸಂದರ್ಭದಲ್ಲಿ “ಪೊಲೀಸರು ಜರುಗಿಸಿದ ಕ್ರಮಗಳಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ” ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ.

ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಪ್ರಮುಖ ಬೇಡಿಕೆಗಳನ್ನು ಜಾರಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸರ್ಕಾರ ಲಿಖಿತವಾಗಿ ಭರವಸೆ ನೀಡಿದ ಬಳಿಕ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಹೋರಾಟವನ್ನು ಗುರುವಾರ ಹಿಂಪಡೆದಿದೆ.

ಶುಕ್ರವಾರ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, “ರೈತ ಚಳವಳಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರದ ನೀಡಬೇಕಾದದ್ದು ರಾಜ್ಯ ಸರ್ಕಾರಗಳಿಗೆ ಸಂಬಂಧಿಸಿದೆ” ಎಂದು ತಿಳಿಸಿದ್ದಾರೆ.

ರೈತರ ಆಂದೋಲನದ ಸಂದರ್ಭದಲ್ಲಿ ಪೊಲೀಸರ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದಾರೆ. “ಪ್ರತಿಭಟನೆಯ ಸಂದರ್ಭದಲ್ಲಿ ಸಾವಿಗೀಡಾದ ರೈತರ ಬಗ್ಗೆ ಯಾವುದೇ ಮಾಹಿತಿ ಇಲ್ಲ” ಎಂದು ಕೇಂದ್ರ ಸರ್ಕಾರ ಜೂನ್‌ನಲ್ಲಿ ಸಂಸತ್ತಿನಲ್ಲಿ ಹೇಳಿತ್ತು.

ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ತೋಮರ್ ಈಗ ಪ್ರತಿಕ್ರಿಯಿಸಿದ್ದಾರೆ.

ರೈತರ ಪ್ರತಿಭಟನೆಯ ವೇಳೆ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಜೀವನೋಪಾಯ ಮತ್ತು ಆರ್ಥಿಕ ಪರಿಹಾರವನ್ನು ನೀಡಲು ಸರ್ಕಾರ ಚಿಂತಿಸಿದೆಯೇ ಎಂದು ಸದಸ್ಯರು ಪ್ರಶ್ನಿಸಿದ್ದಾರೆ. ಒಂದು ವರ್ಷದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿಗೀಡಾದ ರೈತರ ಬಗ್ಗೆ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳು ದನಿ ಎತ್ತುತ್ತಲೇ ಇವೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು, ಕೋವಿಡ್-19 ಮತ್ತು ವ್ಯತಿರಿಕ್ತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸಿ ಹೋರಾಟ ನಡೆಸಿದ್ದರು. ನವೆಂಬರ್ 2020ರ ಅಂತ್ಯದಿಂದ ದೆಹಲಿಯ ಗಡಿಯಲ್ಲಿ ಹೋರಾಟ ನಡೆಸಿದರು. ಪ್ರತಿಭಟನೆಯ ಸಂದರ್ಭದಲ್ಲಿ 700 ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ಎಸ್‌ಕೆಎಂ ಹೇಳಿದೆ.

“ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಹಿಂದೆ ‘ಶ್ರೀಮಂತ ರೈತರು’ ಹೆಚ್ಚಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಪಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನವು ನೀಡಿದ ವರದಿ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿತ್ತು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದವರು ಸರಾಸರಿ 2.94 ಎಕರೆಗಿಂತ ಹೆಚ್ಚು ಭೂಮಿಯನ್ನು ಸಾಗುವಳಿ ಮಾಡುತ್ತಿರಲಿಲ್ಲ. ಅವರೆಲ್ಲರೂ ಸಣ್ಣ ಮಟ್ಟದ ರೈತರಾಗಿದ್ದರು” ಎಂದು ‘ದಿ ವೈರ್‌’ ವರದಿ ಮಾಡಿತ್ತು.

ಎಂಎಸ್‌ಪಿ ಕುರಿತ ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸಿದ ತೋಮರ್, “ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸಲು, ದೇಶದ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಬೆಳೆ ಮಾದರಿಯನ್ನು ಬದಲಾಯಿಸಲು, ಎಂಎಸ್‌ಪಿಯನ್ನು ಹೆಚ್ಚು ಪರಿಣಾಮಕಾರಿ ಹಾಗೂ ಪಾರದರ್ಶಕಗೊಳಿಸಲು ಸಮಿತಿಯನ್ನು ರಚಿಸಲಾಗುತ್ತಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ಇದನ್ನೂ ಓದಿರಿ: ಹರಿಯಾಣದ ಹಳ್ಳಿಗಳಿಗೆ ತೆರಳಿ ಧನ್ಯವಾದ ತಿಳಿಸುತ್ತಿರುವ ಪಂಜಾಬ್ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...