ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ಇಂದು ರೈತ ದಿನವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, “ರೈತರು ದೇಶದ ಹೆಮ್ಮೆ. ಬಿಜೆಪಿಯವರು ಪ್ರತಿಭಟನಾ ನಿರತ ರೈತರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.
“ರೈತರ ದಿನ”ವೂ (ಕಿಸಾನ್ ದಿವಸ್) ಆಗಿರುವ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುತ್ತಾ ಅಖಿಲೇಶ್ ಯಾದವ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿ, “ಬಿಜೆಪಿ ಆಡಳಿತದಲ್ಲಿ ರೈತರು ಬೀದಿಯಲ್ಲಿ ಕುಳಿತು ‘ರೈತರ ದಿನ‘ವನ್ನು ಆಚರಿಸುವಂತಾಗಿದೆ. ಹೋರಾಟಕ್ಕೆ ಇಳಿದಿರುವ ರೈತರನ್ನು ಬಿಜೆಪಿ ಅವಮಾನಿಸುವುದನ್ನು ನಿಲ್ಲಿಸಬೇಕು. ಏಕೆಂದರೆ, ರೈತರು ಭಾರತದ ಹೆಮ್ಮೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ರಾತ್ರಿ ಕರ್ಫ್ಯೂ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
चौधरी चरण सिंह जी की जयंती पर उन्हें कोटि-कोटि नमन!
आज भाजपा के राज में देश के इतिहास में एक ऐसा ‘किसान दिवस’ आया है, जब उत्सव के स्थान पर देश का किसान सड़कों पर संघर्ष करने पर मजबूर है.
भाजपा किसानों का अपमान करना छोड़े क्योंकि ‘देश का किसान, भारत का है मान’.#किसान_दिवस pic.twitter.com/dHrJAtZPFY
— Akhilesh Yadav (@yadavakhilesh) December 23, 2020
ಇದನ್ನೂ ಓದಿ: ನುಡಿ ನಮನ: ಕೋಮು ಗಲಭೆಯಲ್ಲಿ ತಂದೆಯನ್ನು ಕಳೆದುಕೊಂಡರೂ ಜಾತ್ಯಾತೀತ ಮೌಲ್ಯಗಳನ್ನು ಉಳಿಸಿಕೊಂಡಿದ್ದ ದೇವೇಂದ್ರ ಸಿಂಗ್…
ಉತ್ತರ ಪ್ರದೇಶದ ಮೀರತ್ನಲ್ಲಿ 1902ರಲ್ಲಿ ಜನಿಸಿದ ಚರಣ್ ಸಿಂಗ್ ಅವರು, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ರೈತ ನಾಯಕರಾಗಿ ಹೊರ ಹೊಮ್ಮಿದರು. ಹಲವಾರು ಕೃಷಿ ಸ್ನೇಹಿ ನೀತಿಗಳನ್ನು ರೂಪಿಸಿದ ಸಿಂಗ್ ಅವರು 1987ರಲ್ಲಿ ನಿಧನರಾದರು.
ಭಾರತದ 5 ನೇ ಪ್ರಧಾನಿಯಾಗಿದ್ದ ಇವರ ಜನ್ಮದಿನದ ಅಂಗವಾಗಿ ಇಂದು ದೇಶದಾದ್ಯಂತ ಉಪವಾಸ ಸತ್ಯಾಗ್ರಹ ಆಚರಿಸಲು ಕರೆ ನೀಡಲಾಗಿತ್ತು.
ಇದನ್ನೂ ಓದಿ: ಕರ್ತವ್ಯದ ನಡುವೆ ಮದ್ಯ ಸೇವಿಸಿದ್ದ ಪೊಲೀಸರ ವೀಡಿಯೋ ವೈರಲ್: ಅಮಾನತು