Homeಕರ್ನಾಟಕರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ...

ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

- Advertisement -
- Advertisement -

ರೈತ ಸಂಘಟನೆಗಳ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಮೂಲಕವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿರುವುದಾಗಿ ಮಂಗಳವಾರ (ಫೆ.4) ವರದಿಯಾಗಿದೆ.

ಈ ಬೆನ್ನಲ್ಲೇ ರಾಜ್ಯದ ರೈತ ಸಂಘಟನೆಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರ ಬರೆದಿರುವ ಸಂಯುಕ್ತ ಹೋರಾಟ ಸಮಿತಿ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿದೆ. ಹೋರಾಟದ ಎಚ್ಚರಿಕೆ ನೀಡಿದೆ.

ಪತ್ರಿಕೆಯ ವರದಿಯನ್ನು ಓದಿ ನಾವು ಆಘಾತಕ್ಕೊಳಗಾಗಿದ್ದೇವೆ. ಸರ್ಕಾರದ ನಿಲುವು ಇದೇ ಆಗಿದ್ದರೆ, ಇದು ರೈತ ಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗೆ ಇಳಿಯಬೇಕಾಗುತ್ತದೆ. ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ ಎಂದು ಸಮಿತಿಯ ಪ್ರಮುಖರು ಸಿಎಂಗೆ ತಿಳಿಸಿದ್ದಾರೆ.

“ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳೊಂದಿಗೆ ಬಿಜೆಪಿ ಪಕ್ಷ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರ ನಡೆಸುತ್ತಿದೆ. ಅದರ ಭಾಗವಾಗಿ ಮೂರು ಕರಾಳ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ದೇಶದ 562 ರೈತ ಸಂಘಟನೆಗಳು ಒಂದು ವರ್ಷಕ್ಕೂ ಹೆಚ್ಚು ಸಮಯ ನಿರಂತರ ಹೋರಾಟ ನಡೆಸಿದ ಪರಿಣಾಮವಾಗಿ ಕೇಂದ್ರ ಸರ್ಕಾರ ಮೂರು ಕಾನೂನುಗಳನ್ನು ವಾಪಸ್ ಪಡೆಯಿತು. ಈ ಹೋರಾಟದ ಸಂದರ್ಭದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

“ರೈತರ ಹೋರಾಟಕ್ಕೆ ಮಣಿದ ಸರ್ಕಾರ ಮೂರು ಕಾನೂನುಗಳನ್ನು ಹಿಂಪಡೆಯುದಾಗಿ ಹೇಳಿತ್ತು. ಆದರೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹಿಂಬಾಗಿಲ ಮೂಲಕ ಅದನ್ನು ಜಾರಿಗೊಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದು ಅದರ ಭಾಗವಾಗಿಯೇ. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿತ್ತು. ಇಬ್ಬರೂ ಸೇರಿ ಹೋರಾಡೋಣ ಎಂದಿತ್ತು. 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆ, ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ, ಎಂಎಸ್‌ಪಿ ಜಾರಿಗೊಳಿಸುತ್ತೇವೆ ಮತ್ತು ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುತ್ತೇವೆ ಎಂಬುವುದಾಗಿ ಭರವಸೆ ನೀಡಿತ್ತು” ಎಂದು ನೆನಪಿಸಲಾಗಿದೆ.

“ಬಿಜೆಪಿಯ ಕಾಯ್ದೆಗಳನ್ನು ಹಾಗೆಯೇ ಮುಂದುವರಿಸಿದ್ದೀರಿ, ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದ್ದೀರಿ, ಬಿಜೆಪಿ ನೀಡಿದ್ದ ಮಾರ್ಗಸೂಚಿಗಳನ್ನೇ ನಿಮ್ಮ ಸರ್ಕಾರವೂ ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮಾಡಿದ್ದ, ರೈತ ಹೋರಾಟದಿಂದ ಹಿಂಪಡೆದಿರುವ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ, ಇವುಗಳನ್ನು ಅನುಷ್ಠಾನ ಮಾಡಲು ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದು ಕೇಳಿದ್ದೀರಿ. ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ” ಎಂದು ಸಂಯುಕ್ತ ಹೋರಾಟ ಸಮಿತಿಯ ಪತ್ರದಲ್ಲಿ ಒತ್ತಾಯಿಸಲಾಗಿದೆ.

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...