Homeಕರ್ನಾಟಕರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ...

ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

- Advertisement -
- Advertisement -

ರೈತ ಸಂಘಟನೆಗಳ ತೀವ್ರ ಪ್ರತಿರೋಧದಿಂದಾಗಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಿಂಪಡೆದಿದ್ದ ಮೂರು ಕೃಷಿ ಕಾಯ್ದೆಗಳ ಮೂಲಕವೇ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚಿಸಿರುವುದಾಗಿ ಮಂಗಳವಾರ (ಫೆ.4) ವರದಿಯಾಗಿದೆ.

ಈ ಬೆನ್ನಲ್ಲೇ ರಾಜ್ಯದ ರೈತ ಸಂಘಟನೆಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರ ಬರೆದಿರುವ ಸಂಯುಕ್ತ ಹೋರಾಟ ಸಮಿತಿ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಒತ್ತಾಯಿಸಿದೆ. ಹೋರಾಟದ ಎಚ್ಚರಿಕೆ ನೀಡಿದೆ.

ಪತ್ರಿಕೆಯ ವರದಿಯನ್ನು ಓದಿ ನಾವು ಆಘಾತಕ್ಕೊಳಗಾಗಿದ್ದೇವೆ. ಸರ್ಕಾರದ ನಿಲುವು ಇದೇ ಆಗಿದ್ದರೆ, ಇದು ರೈತ ಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗೆ ಇಳಿಯಬೇಕಾಗುತ್ತದೆ. ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ ಎಂದು ಸಮಿತಿಯ ಪ್ರಮುಖರು ಸಿಎಂಗೆ ತಿಳಿಸಿದ್ದಾರೆ.

“ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳೊಂದಿಗೆ ಬಿಜೆಪಿ ಪಕ್ಷ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರ ನಡೆಸುತ್ತಿದೆ. ಅದರ ಭಾಗವಾಗಿ ಮೂರು ಕರಾಳ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ದೇಶದ 562 ರೈತ ಸಂಘಟನೆಗಳು ಒಂದು ವರ್ಷಕ್ಕೂ ಹೆಚ್ಚು ಸಮಯ ನಿರಂತರ ಹೋರಾಟ ನಡೆಸಿದ ಪರಿಣಾಮವಾಗಿ ಕೇಂದ್ರ ಸರ್ಕಾರ ಮೂರು ಕಾನೂನುಗಳನ್ನು ವಾಪಸ್ ಪಡೆಯಿತು. ಈ ಹೋರಾಟದ ಸಂದರ್ಭದಲ್ಲಿ 700ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.

“ರೈತರ ಹೋರಾಟಕ್ಕೆ ಮಣಿದ ಸರ್ಕಾರ ಮೂರು ಕಾನೂನುಗಳನ್ನು ಹಿಂಪಡೆಯುದಾಗಿ ಹೇಳಿತ್ತು. ಆದರೆ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹಿಂಬಾಗಿಲ ಮೂಲಕ ಅದನ್ನು ಜಾರಿಗೊಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಭೂ ಸುಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವುದು ಅದರ ಭಾಗವಾಗಿಯೇ. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ರೈತರ ಹೋರಾಟಕ್ಕೆ ಬೆಂಬಲ ಕೊಟ್ಟಿತ್ತು. ಇಬ್ಬರೂ ಸೇರಿ ಹೋರಾಡೋಣ ಎಂದಿತ್ತು. 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆ, ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಪ್ರಕರಣಗಳನ್ನು ವಾಪಸ್ ಪಡೆಯುತ್ತೇವೆ, ಎಂಎಸ್‌ಪಿ ಜಾರಿಗೊಳಿಸುತ್ತೇವೆ ಮತ್ತು ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುತ್ತೇವೆ ಎಂಬುವುದಾಗಿ ಭರವಸೆ ನೀಡಿತ್ತು” ಎಂದು ನೆನಪಿಸಲಾಗಿದೆ.

“ಬಿಜೆಪಿಯ ಕಾಯ್ದೆಗಳನ್ನು ಹಾಗೆಯೇ ಮುಂದುವರಿಸಿದ್ದೀರಿ, ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನು ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದ್ದೀರಿ, ಬಿಜೆಪಿ ನೀಡಿದ್ದ ಮಾರ್ಗಸೂಚಿಗಳನ್ನೇ ನಿಮ್ಮ ಸರ್ಕಾರವೂ ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮಾಡಿದ್ದ, ರೈತ ಹೋರಾಟದಿಂದ ಹಿಂಪಡೆದಿರುವ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ, ಇವುಗಳನ್ನು ಅನುಷ್ಠಾನ ಮಾಡಲು ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದು ಕೇಳಿದ್ದೀರಿ. ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ” ಎಂದು ಸಂಯುಕ್ತ ಹೋರಾಟ ಸಮಿತಿಯ ಪತ್ರದಲ್ಲಿ ಒತ್ತಾಯಿಸಲಾಗಿದೆ.

ತೆಲಂಗಾಣ | ಎಸ್‌ಸಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದ ಸಿಎಂ ರೇವಂತ್ ರೆಡ್ಡಿ : ಕೆನೆಪದರ ಪ್ರಸ್ತಾವನೆ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...