Homeಚಳವಳಿಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಕೇಂದ್ರ ಸರ್ಕಾರದ "ಹೊಸ" ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಖಂಡಿಸಿ, ತಿರಸ್ಕರಿಸಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೀಡಿದ್ದ ಪ್ರಸ್ತಾಪವನ್ನು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (AIKSCC) ತಿರಸ್ಕರಿಸಿದ್ದು, ರೈತರ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ ತಿಳಿಸಿದೆ.

ಮೋದಿ ಸರ್ಕಾರವು ಹಳೆಯ ಪ್ರಸ್ತಾಪಗಳನ್ನೇ ಹೊಸ ಬಟ್ಟೆ ಧರಿಸಿದಂತೆ ಮಾಡಿ ಅವುಗಳನ್ನೆ ಮತ್ತೆ ಕೊಟ್ಟಿದೆ. ಇವುಗಳನ್ನು ಎಲ್ಲಾ ರೈತ ಸಂಘಟನೆಗಳು ಒಮ್ಮತವಾಗಿ ತಿರಸ್ಕರಿಸಿವೆ ಎಂದು ಮಾಧ್ಯಮ ಬುಲೆಟಿನ್‌ನಲ್ಲಿ AIKSCC ಹೇಳಿದೆ.

AIKSCC ಮತ್ತು ಎಲ್ಲಾ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಮತ್ತು ವಿದ್ಯತ್ ಕಾಯ್ದೆ 2020 ಅನ್ನು ರದ್ದುಗೊಳಿಸುವ ತಮ್ಮ ಬೇಡಿಕೆಯನ್ನು ಮತ್ತೆ ಸರ್ಕಾರದ ಮುಂದಿಡುತ್ತಿವೆ ಎಂದಿದೆ. ಜೊತೆಗೆ ಪ್ರತಿಭಟನೆಗೆ ದೆಹಲಿಯಲ್ಲಿ ಹೆಚ್ಚಿನ ರೈತರು ಸೇರಬೇಕು ಎಂದು ಕರೆ ನೀಡಿದೆ. ಇಲ್ಲವಾದಲ್ಲಿ ಎಲ್ಲಾ ರಾಜ್ಯಗಳಲ್ಲಿ ಜಿಲ್ಲಾ ಮಟ್ಟದ ರೈತ ಧರಣಿಗಳನ್ನುಪ್ರಾರಂಭಿಸಲು ಕರೆ ನೀಡಿದೆ.

ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ಎಐಸಿಸಿಸಿಯ ರಾಷ್ಟ್ರೀಯ ಕಾರ್ಯನಿರತ ಸಂಘವು ಸಭೆ ಸೇರಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ.

೧. ಎಐಕೆಎಸ್‌ಸಿಸಿ ಕೇಂದ್ರ ಸರ್ಕಾರದ “ಹೊಸ” ಪ್ರಸ್ತಾಪವನ್ನು ರೈತ ಸಂಘಟನೆಗಳು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದು ಕರೆದು ಅದನ್ನು ಖಂಡಿಸಿ, ತಿರಸ್ಕರಿಸಿದ್ದಾರೆ.

೨. ರೈತ ಸಂಘಟನೆ ಎಐಕೆಎಸ್‌ಸಿಸಿ ಮೋದಿ ಸರ್ಕಾರವನ್ನು ಬಹಿರಂಗ ಪಡಿಸಲು, ರಾಷ್ಟ್ರವ್ಯಾಪಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ (ಸರ್ಕಾರದ ನಿಜವಾದ ಅಸಹಾಯಕತೆ-ಅದಾನಿ, ಅಂಬಾನಿ, ಜಮಾಖೋರಿ) ಎಂಬ ಅಭಿಯಾನವನ್ನು ಪ್ರಾರಂಭಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಪ.ಬಂಗಾಳ: ಬಿಜೆಪಿ ನಾಯಕರ ಮೇಲೆ ಜಾಮೀನು ರಹಿತ ಪ್ರಕರಣದಲ್ಲಿ ಎಫ್‌ಐಆರ್ ದಾಖಲು!

೩. ಎಐಕೆಎಸ್‌ಸಿಸಿ ಎಲ್ಲಾ ಜಿಲ್ಲೆಗಳು ಮತ್ತು ರಾಜ್ಯ ರಾಜಧಾನಿಗಳಲ್ಲಿ ನಿರಂತರ ರೈತ ಪ್ರತಿಭಟನೆ ಆಯೋಜಿಸಲು ರೈತ ಸಂಘಟನೆಗಳಿಗೆ ಕರೆ ನೀಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ರೈತರಿಗೆ ಬೆಂಬಲ ನೀಡುವ ಇತರ ಸಂಸ್ಥೆಗಳೊಂದಿಗೆ ಜಂಟಿಯಾಗಿ ಧರಣಿ ಆರಂಭಿಸಲು ಕರೆ ನೀಡಿದೆ.

೪. ಡಿಸೆಂಬರ್ 8 ರ ’ಭಾರತ್ ಬಂದ್’ ಜನಪ್ರಿಯ ರೈತರ ಪ್ರತಿಭಟನೆಯಾಗಿ ಯಶಸ್ವಿಯಾಗಿದೆ. ರೈತ ಸಂಘಟನೆ ಎಲ್ಲಾ ವರ್ಗದವರ ಬೆಂಬಲವನ್ನು ಅಭಿನಂದಿಸುತ್ತದೆ ಎಂದಿದೆ.

೫. ಭಾರತ್ ಬಂದ್‌ನಲ್ಲಿ ಸಾಮೂಹಿಕ ಭಾಗವಹಿಸುವಿಕೆಯನ್ನು ಗಮನಿಸಿದ ರೈತ ಸಂಘವು ಪ್ರತಿಭಟನೆ ತೀವ್ರಗೊಳಿಸಲು ದೆಹಲಿಗೆ “ಫಾರ್ಮರ್ಸ್ ಮಾರ್ಚ್” ಆಯೋಜಿಸಲು ಎಲ್ಲಾ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳಿಗೆ ಕರೆ ನೀಡಿದೆ.

ಇನ್ನೂ, ಡಿಸೆಂಬರ್ 12 ರಂದು ಪ್ರತಿಭಟನೆ ನಡೆಸಿ ದೆಹಲಿ-ಜೈಪುರ ಮತ್ತು ದೆಹಲಿ-ಆಗ್ರಾ ಹೆದ್ದಾರಿಗಳನ್ನು ನಿರ್ಬಂಧಿಸುತ್ತೇವೆ ಎಂದು ಸಿಂಘ ಗಡಿಯಲ್ಲಿ ರೈತ ಮುಖಂಡರು ಹೇಳಿಕೆ ನೀಡಿದ್ದಾರೆ.


ಇದನ್ನೂ ಓದಿ: ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಪಟ್ಟು: ರೈತರೊಂದಿಗೆ ಅಮಿತ್ ಶಾ ಮಾತುಕತೆ ವಿಫಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...