Homeಮುಖಪುಟಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ಜುಲೈ ತ್ರೈಮಾಸಿಕದಲ್ಲಿ ಏರ್‌ಟೆಲ್‌ಗೆ 53 ಲಕ್ಷ ಹೊಸ 4ಜಿ ಗ್ರಾಹಕರು ಬಂದರೆ ಜಿಯೋಗೆ ಬಂದಿದ್ದು ಕೇವಲ 45 ಲಕ್ಷ..

- Advertisement -
- Advertisement -

ಮುಖೇಶ್ ಅಂಬಾನಿ ಒಡೆತನದ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿದೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂಬುದು ಜಿಯೋ ವಾದ. ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ಕಂಪನಿಗಳು ಅನೈತಿಕ ಮತ್ತು ಸ್ಪರ್ಧಾತ್ಮಕ ವಿರೋಧಿ ರೀತಿಯಲ್ಲಿ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ (MNP) ಅಭಿಯಾನವನ್ನು ನಡೆಸುತ್ತಿದೆ ಎಂದು ಜಿಯೋ ಆರೋಪಿಸಿದೆ.

ಕಳೆದ ನಾಲ್ಕು ವರ್ಷಗಳಿಂದ ಟೆಲಿಕಾಂ ಕ್ಷೇತ್ರದ ಅನಭಿಕ್ಷಿಕ್ತ ದೊರೆಯಾಗಿ ಮೆರೆಯುತ್ತಿದ್ದ ಜಿಯೋ ಇಂದು ಈ ಪರಿ ಅಳುತ್ತಿರುವುದೇಕೆ? Financial express ವರದಿಯ ಪ್ರಕಾರ ಜಿಯೋ ಭಾರತದಲ್ಲಿ ಒಟ್ಟು 40 ಕೋಟಿ ಗ್ರಾಹಕರನ್ನು ಹೊಂದಿದ್ಧೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ ಅದರಲ್ಲಿ ಸುಮಾರು 8-9 ಕೋಟಿ ಜನರು ರೀಚಾರ್ಜ್ ಮಾಡಿಸದೆ ಸಿಮ್ ಬಿಸಾಡಿದ್ದಾರೆ. ಆದರೂ 31 ಕೋಟಿ ಸಂಪರ್ಕ ಹೊಂದಿರುವ ಭಾರತದ ಅತಿ ದೊಡ್ಡ ನೆಟ್‌ವರ್ಕ್. ಭಾರ್ತಿ ಏರ್‌ಟೆಲ್ 31 ಕೋಟಿ ಗ್ರಾಹಕರೊಂದಿಗೆ 2ನೇ ಸ್ಥಾನದಲ್ಲಿದೆ ಎಂದು ಹೇಳಿಕೊಳ್ಳುತ್ತಿದೆ. ಆನಂತರ ವೊಡೋಫೋನ್ ಐಡಿಯಾ 30 ಕೋಟಿ ಗ್ರಾಹಕರನ್ನು ಹೊಂದಿದ್ದೇವೆ ಎನ್ನುತ್ತಿದೆ. ಇನ್ನು ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ಗೆ ಕೇವಲ‌ 10 ಕೋಟಿ ಗ್ರಾಹಕರಿದ್ದಾರೆ.

ಜುಲೈ ತ್ರೈಮಾಸಿಕದಲ್ಲಿ ಏರ್‌ಟೆಲ್‌ಗೆ 53 ಲಕ್ಷ ಹೊಸ 4ಜಿ ಗ್ರಾಹಕರು ಬಂದರೆ ಜಿಯೋಗೆ ಬಂದಿದ್ದು ಕೇವಲ 45 ಲಕ್ಷ. ಅಷ್ಟು ಮಾತ್ರವಲ್ಲದೆ ಈ ನಾಲ್ಕೈದು ತಿಂಗಳಲ್ಲಿ ಜಿಯೋ ಗ್ರಾಹಕರು ಕುಸಿಯುತ್ತಿರುವುದಲ್ಲದೆ ಆ ಸ್ಥಾನವನ್ನು ಏರ್‌ಟೆಲ್ ಪಡೆದುಕೊಳ್ಳುತ್ತಿದೆ. ದೆಹಲಿಯಲ್ಲಿ ಹೋರಾಟ ನಿರತ ರೈತರು ಬಾಯ್ಕಾಟ್ ಜಿಯೋ ಎಂಬ ಕರೆ ನೀಡಿದ ನಂತರ ಕಳೆದ ಒಂದು ವಾರದಲ್ಲಿಯೇ ಸುಮಾರು 26 ಲಕ್ಷ ಜನ ಜಿಯೋನಿಂದ ಇತರ ಕಂಪನಿಗಳಿಗೆ ಪೋರ್ಟ್ ಆಗಲು ಮುಂದಾಗಿದ್ದಾರೆ. ಇದೇ ಜಿಯೋ ಇಂದು ದೂರು ಕೊಡಲು ಪ್ರಧಾನ ಕಾರಣ.

ಆಗಸ್ಟ್ ತಿಂಗಳಿನಲ್ಲಿ ರೈತ ಹೋರಾಟ ಭುಗಿಲೆದ್ದಿತು. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ 3 ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಅಂಗೀಕರಿಸಿತು. ಈ ಕಾಯ್ದೆಗಳು ಕಾರ್ಪೊರೇಟ್‌ಗಳ ಹಿತಾಸಕ್ತಿ ಕಾಯುತ್ತವೆ ಎಂಬುದು ರೈತರ ಆರೋಪ. ಅದರಲ್ಲಿಯೂ ಅಂಬಾನಿ ಮತ್ತು ಅದಾನಿ ಕಂಪನಿಗಳ ಅನುಕೂಲಕ್ಕಾಗಿಯೇ ಈ ಕೃ‍ಷಿ ಕಾಯ್ದೆಗಳನ್ನು ಮೋದಿ ತಂದಿದ್ದಾರೆ ಎಂದು ಆರೋಪಿಸಿರುವು ರೈತರು ಅಂಬಾನಿ-ಅದಾನಿ ಕಂಪನಿಗಳ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಅದರಲ್ಲಿಯೂ ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಜಿಯೋ ಮಾರ್ಟ್‌ ವಸ್ತುಗಳನ್ನು ಖರೀದಿಸುವುದಿಲ್ಲ ಎಂದು ರೈತರು ಪ್ರತಿಜ್ಞೆ ಮಾಡಿದ್ದಾರೆ. ಇದಕ್ಕೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಲಕ್ಷಾಂತರ ಯುವಜರನು ಜಿಯೋ ಸಿಮ್ ಅನ್ನು ಕಿತ್ತೆಸೆದಿದ್ದಾರೆ.

ಇನ್ನು ತೀವ್ರ ಆಂದೋಲನವಾದರೆ ತಾವು ಮುಳುಗುವುದು ಗ್ಯಾರಂಟಿ ಎಂಬುದನ್ನು ಅರಿತ ಜಿಯೋ ನೇರವಾಗಿ ರೈತರನ್ನು ದೂರಲಾರದೆ ಏರ್‌ಟೆಲ್ ವೋಡೋಪೋನ್‌ ಮೇಲೆ ಮುಗಿಬಿದ್ದಿದೆ. ಆದರೆ ಏರ್‌ಟೆಲ್ ಮತ್ತು ವೋಡಾಫೋನ್ ಪ್ರತಿಕ್ರಿಯೆ ನೀಡಿ ಜಿಯೋ ಆರೋಪವನ್ನು ತಳ್ಳಿ ಹಾಕಿವೆ. ಇದೇ ಸಂದರ್ಭದಲ್ಲಿ “2016ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜಾಹೀರಾತಿನೊಂದಿಗೆ 3 ತಿಂಗಳ ಉಚಿತ ಕರೆ ಮತ್ತು ಡಾಟಾ ಫ್ರೀ ಎಂದು ಹೇಳಿ ಅನಧಿಕೃತವಾಗಿ ಸ್ಪರ್ಧಿಸಿದ್ದು ಯಾರು? ನೀವೇ ತಾನೇ ಈಗ ಅನುಭವಿಸಿ” ಎಂದು ಜಿಯೋ ವಿರುದ್ಧ ಸಾಮಾಜಿಕ ಜಾಲತಾಣಿಗರು ಕಿಡಿಕಾರಿದ್ದಾರೆ.

ಇನ್ನು ಏರ್‌ಟೆಲ್ ಸತತ ಮೂರು ವರ್ಷದ ನಷ್ಟದ ನಂತರ ಲಾಭದತ್ತು ಮುಖಮಾಡಿದೆ. ಅದು ಇತ್ತೀಚೆಗೆ ತನ್ನ 4ಜಿ ಯಲ್ಲಿ ಉತ್ತಮ ಸೇವೆ ನೀಡುತ್ತಿದೆ ಎಂದು ಕೇಳಿಬಂದಿದೆ. ನೆಟ್‌ವರ್ಕ್ ಸಮಸ್ಯೆಗಳನ್ನು ನಿವಾರಿಸಿಕೊಂಡಿದ್ದರಿಂದ ಬಹಳಷ್ಟು 4ಜಿ ಗ್ರಾಹಕರು ಏರ್‌ಟೆಲ್ ನತ್ತ ಬರುತ್ತಿದ್ದಾರೆ. ಇದೇ ಸಮಯದಲ್ಲಿ ಜಿಯೋದಲ್ಲಿಯೂ ಸಹ ನೆಟ್‌ವರ್ಕ್ ಸಮಸ್ಯೆ ಎದುರಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ರೈತರು ಬಾಯ್ಕಾಟ್ ಜಿಯೋ ಎಂದಿದ್ದಾರೆ. ಅದಕ್ಕೆ ಯುವಜನರು ಕೈಗೂಡಿಸಿದ್ದಾರೆ. ಹಾಗಾಗಿ ಜಿಯೋಗೆ ಕಂಟಕ ಎದುರಾಗಿದೆ.

ಬಿಎಸ್‌ಎನ್‌ಎಲ್ ಕಥೆಯೇನು?

2004-05ರಲ್ಲಿ ಇದೇ ಬಿಸ್ಸೆನ್ನೆಲ್ 10,000 ಕೋಟಿ ನಿವ್ವಳ ಲಾಭ ಗಳಿಸಿತ್ತು. ಆನಂತರ ಸರ್ಕಾರಗಳ ಮುನ್ನೋಟದ ಕೊರತೆ, ಮೂಲಭೂತ ಸೌಲಭ್ಯಗಳ ಕಡೆಗಣನೆ, ಟೆಂಡರ್ ವಿಳಂಬ, ಹಸ್ತಕ್ಷೇಪ ಭ್ರಷ್ಟಾಚಾರದಿಂದಾಗಿ ಬಿಎಸ್ಎನ್ಎಲ್ ಕುಸಿಯುತ್ತಾ ಸಾಗಿದರೆ ಖಾಸಗಿ ಕಂಪನಿಗಳು ಬೆಳೆಯುತ್ತಾ ಹೋದವು.
ಒಂದು ರೀತಿಯಲ್ಲಿ ಜಿಯೋ ಕೊಬ್ಬಿಸುವುದಕ್ಕಾಗಿಯೇ ಬಿಎಸ್‌ಎನ್‌ಎಲ್‌ ಮುಳುಗಿಸಲಾಯಿತು ಎಂಬ ಆರೋಪ ಸರ್ಕಾರದ ಮೇಲಿದೆ.

70 ವರ್ಷಗಳ ಭಾರತ ರಾಷ್ಟ್ರ ನಿರ್ಮಾಣದ ಇತಿಹಾಸದಲ್ಲಿ BSNL ಗೆ ತನ್ನದೇ ಆದ ಮಹತ್ವದ ಪಾತ್ರವಿದೆ. ಲಕ್ಷಾಂತರ ಉದ್ಯೋಗಗಳನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ, ದೇಶದ ಒಟ್ಟಾರೆ ಆರ್ಥಿಕ ವಾಣಿಜ್ಯ ವಹಿವಾಟುಗಳಿಗೆ ಬಿಸ್ಸೆನ್ನೆಲ್ ನೀಡಿದ ಕೊಡುಗೆ ಅಪಾರವಾದದ್ದು. ಮೂಲೆಮೂಲೆಯ ಹಳ್ಳಿಗಾಡುಗಳನ್ನೂ ಒಳಗೊಂಡು ಇಡೀ ದೇಶಕ್ಕೆ ಸಂಪರ್ಕ ಸೇತುವಾಗಿ ದುಡಿದ ಸಂಸ್ಥೆಯ ಸೇವೆಯನ್ನು ರೂಪಾಯಿಗಳಲ್ಲಿ ಲೆಕ್ಕ ಹಾಕಲಾಗದು. ಇಂಥಾ ಸಂಸ್ಥೆಯನ್ನು ಮಣ್ಣುಗೂಡಿಸಲು ಇದೀಗ ರಂಗ ಸಜ್ಜಾಗಿದೆ.

BSNL‌ ಕುಸಿತ ದಿಢೀರ್ ಸಂಭವಿಸಿದ್ದಲ್ಲ. ಬಹಳ ವ್ಯವಸ್ಥಿತವಾಗಿ ಹಂತಹಂತವಾಗಿ ನಡೆಸಿದ ಷಡ್ಯಂತ್ರ. ಖಾಸಗಿ ಕಂಪನಿಗಳು 4ಜಿ, 5ಜಿ ಸೇವೆ ಒದಗಿಸುತ್ತಿರುವ ಸಂದರ್ಭದಲ್ಲಿ ಬಿಎಸ್ಸೆನ್ನೆಲ್‍ಗೆ ಹಲವು ವರ್ಷಗಳ ಕಾಲ 4ಜಿ ಸ್ಪೆಕ್ಟ್ರಮ್ ಮಂಜೂರಾತಿಯೇ ಸಿಗಲಿಲ್ಲವೆಂದರೆ ನಿಮಗೆ ಆಶ್ಚರ್ಯ ಎನಿಸಬಹುದು. ಕುಸಿಯುತ್ತಿರುವ ಸಂಸ್ಥೆಯನ್ನು ಉಳಿಸಿಕೊಳ್ಳಲು ಬಿಸ್ಸೆನ್ನೆಲ್ ನೌಕರರು ಹಲವು ಬಾರಿ ಮುಷ್ಕರ ಹೂಡಿದ್ದಾರೆ. ಮುಷ್ಕರ ಎಂದರೆ ಸಂಬಳ ಭತ್ಯೆ ಜಾಸ್ತಿ ಮಾಡಿ ಎಂದು ಕೇಳುವುದು ಮಾಮೂಲಿ. ಆದರೆ ಬಿಸ್ಸೆನ್ನೆಲ್ ನೌಕರರ ಪ್ರಧಾನ ಬೇಡಿಕೆ ‘4ಜಿ ಸ್ಪೆಕ್ಟ್ರಮ್ ಹಂಚಿಕೆ ಮಾಡಿ – ಬಿಸ್ಸೆನ್ನೆಲ್ ಉಳಿಸಿ’ ಎಂಬುದಾಗಿತ್ತು. ಮುಷ್ಕರ ತೀವ್ರಗೊಂಡ ಸಂದರ್ಭದಲ್ಲಿ ಕೇಂದ್ರದ ಮಂತ್ರಿಗಳು ಹಾಜರಾಗಿ 4ಜಿ ಕೊಡುವುದಾಗಿ ಭರವಸೆ ನೀಡಿದ್ದು, ನಂತರದಲ್ಲಿ ಬೇಡಿಕೆಯನ್ನು ಕಸದಬುಟ್ಟಿಗೆ ಹಾಕಿದ್ದು ಹಳೆ ಸಂಗತಿ.

ಇದೀಗ ರೈತರು ಮತ್ತು ಯುವಜನರು ಬಿಎಸ್‌ಎನ್‌ಎಲ್‌ ಉಳಿಸಿ, 4ಜಿ ಸೇವೆ ನೀಡಿ ಎಂದು ದನಿಯೆತ್ತಿದ್ದಾರೆ. ಜಿಯೋ ಬಳಸುವುದಿಲ್ಲ ಬಿಎಸ್‌ಎನ್‌ಎಲ್‌ ಬೇಕು ಎನ್ನುತ್ತಿದ್ದಾರೆ. ಇದಕ್ಕೆ ಸರ್ಕಾರ  ಸ್ಪಂದಿಸುವುದೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...