Homeಚಳವಳಿಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!

ಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!

ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನನ್ನು ವಾಪಾಸು ಪಡೆಯದೆ ತಾವು ಕದಲುವುದಿಲ್ಲ ಎಂಬ ಸಂದೇಶವನ್ನು ರೈತರು ಈ ಮೂಲಕ ರವಾನಿಸಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ದ 106 ದಿನಗಳಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಹೋರಾಟಗಾರರು, ಇದೀಗ ಬಿಸಿಲಿನಿಂದ ರಕ್ಷಣೆ ಪಡೆಯಲು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಇಟ್ಟಿಗೆಗಳಿಂದ ಎರಡು ಅಂತಸ್ತಿನ ಮನೆಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ.

ಸಿಂಘು ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕಿಂತ ಕೆಲವೆ ಕಿಲೋಮೀಟರ್ ಮುಂದಕ್ಕೆ ಚಲಿಸಿದಾಗ ಈ ಮನೆಗಳನ್ನು ನೋಡಬಹುದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಈ ಹಿಂದೆ ಅಲ್ಲಿ ರೈತರು ಡೇರೆಗಳನ್ನು ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಈಗ ಅದೇ ಸ್ಥಳಗಳಲ್ಲಿ ಇಟ್ಟಿಗೆಗಳನ್ನು ಬಳಸಿಕೊಂಡು ಮನೆಗಳನ್ನು ನಿರ್ಮಿಸಲಾಗುತ್ತಿದೆ. ಈ ಇಟ್ಟಿಗೆಗಳನ್ನು ಪಂಜಾಬ್‌ನಿಂದ ತರಿಸಲಾಗುತ್ತಿದೆ.

ಸಂಯುಕ್ತಾ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಮಾಧ್ಯಮ ಸೆಲ್‌ನ ಮುಖ್ಯಸ್ಥರಾದ ಕರಮ್‌ಜಿತ್ ಸಿಂಗ್, “ಶುಕ್ರವಾರ ಪಂಜಾಬ್‌ನ ರೈತ ಮುಖಂಡರು ಸಿಂಘು ಗಡಿಯಲ್ಲಿ ಬೇಸಿಗೆಯ ಬಿಸಿಲಿನಿಂದ ರಕ್ಷಣೆ ಪಡೆಯಲು ಇಟ್ಟಿಗೆಗಳ ಮನೆಗಳನ್ನು ನಿರ್ಮಿಸುವ ಬಗ್ಗೆ ಚರ್ಚಿಸಿದ್ದರು. ಗಡಿಯಲ್ಲಿ ಈಗಾಗಲೆ ನಾಲ್ಕು ಮನೆಗಳನ್ನು ನಿರ್ಮಿಸಲಾಗಿದ್ದು, ಅವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಎಲ್ಲಾ ಮನೆಗಳು ಎರಡು ಅಂತಸ್ತಿನವುಗಳಾಗಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ದಿನ: ರೈತ ಹೋರಾಟದಲ್ಲಿ ಮಹಿಳೆಯರು – ಇಲ್ಲಿವೆ ಗಮನ ಸೆಳೆದ ಚಿತ್ರಗಳು

“ಗಡಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರು ಇರುವುದರಿಂದ, ಎರಡು ಅಂತಸ್ತಿನ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಆಂದೋಲನವು ಒಂದು ವೇಳೆ ಮತ್ತಷ್ಟು ದೀರ್ಘ ಕಾಲ ನಡೆಯುವ ಸಾಧ್ಯತೆಯಿದ್ದರೆ, ನಮ್ಮ ಸಿದ್ಧತೆಗಳು ಕೂಡಾ ಅದಕ್ಕೆ ತಕ್ಕದಾಗಿರಬೇಕು” ಎಂದು ಅವರು ತಿಳಿಸಿದ್ದಾರೆ.

ರೈತ ಹೋರಾಟವು ಚಳಿಗಾಲದ ಸಮಯದಲ್ಲಿ ಪ್ರಾರಂಭವಾಗಿರುವುರಿಂದ, ರೈತರು ಮೊದಲಿಗೆ ಪ್ಲಾಸ್ಟಿಕ್ ಡೇರೆಗಳನ್ನು ಮಾತ್ರ ನಿರ್ಮಿಸಿದ್ದರು. ಇದೀಗ ಬೇಸಿಗೆ ಪ್ರಾರಂಭವಾಗಿರುವುದರಿಂದ ಅಂತಹ ಡೇರೆಗಳಲ್ಲಿ ಉಳಿಯುವುದು ಕಷ್ಟವಾಗುತ್ತದೆ.

ರಾತ್ರಿಯಲ್ಲಿ ಸೊಳ್ಳೆಗಳು ಮತ್ತು ಹಗಲಿನಲ್ಲಿ ಸುಡುವ ಬಿಸಿಲು ಇರುವುದರಿಂದ ರೈತರು ಇಟ್ಟಿಗೆಯ ಮನೆಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಮನೆಗಳನ್ನು ನಿರ್ಮಿಸುತ್ತಿರುವ ರೈತರ ತಯಾರಿಯು ಕೇಂದ್ರ ಸರ್ಕಾರ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ತಮ್ಮ ಮನೆಗಳಿಗೆ ವಾಪಾಸಾಗುವುದಿಲ್ಲ ಎಂಬ ಬದ್ದತೆಯನ್ನು ಎತ್ತಿ ತೋರಿಸುತ್ತಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...