Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...