Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...