Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...