Homeಚಳವಳಿಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಸುಪ್ರೀಂ ವಿಚಾರಣೆಯ ಮುನ್ನ ದೆಹಲಿ ಚಲೋಕ್ಕೆ ರೈತರ ಕರೆ

ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

- Advertisement -
- Advertisement -

ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಾಪಸ್‌ ತೆಗೆದುಕೊಳ್ಳುವಂತೆ ದೆಹಲಿಯ ಹೊರಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ.

ಸುಪ್ರೀಂ ಕೋರ್ಟ್ ಈ ಹೋರಾಟಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಕೈಗೆತ್ತುಕೊಳ್ಳಲಿದ್ದು, ರೈತರು ತಮ್ಮ ಬಲವರ್ಧನೆಗೆ ಮುಂದಾಗಿದ್ದಾರೆ. ಇದರ ಭಾಗವಾಗಿ ‘ದೆಹಲಿ ಚಲೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ. ಒಂದು ವರ್ಷದ ದಿಗ್ಬಂಧನದ ಅಂತ್ಯವೂ ಇದಾಗಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಿಂದ ರೈತರು ಬಂದು ದೆಹಲಿಯ ಗಡಿಗಳಲ್ಲಿ ಚಳವಳಿಯಲ್ಲಿ ಭಾಗವಹಿಸುವಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಪ್ರತಿಭಟನೆಯ ಹಕ್ಕು ಸಂಪೂರ್ಣವಾದ್ದದ್ದೇ ಎಂಬುದನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಕಾಯ್ದೆಗಳಿಗೆ ಕೋರ್ಟ್ ತಡೆ ನೀಡಿದ್ದು, ವಿಚಾರಣೆ ನಡೆಯುತ್ತಿರುವುದರಿಂದ ರೈತರು ಬೀದಿಗೆ ಇಳಿಯುವ ಹಕ್ಕನ್ನು ಹೊಂದಿದ್ದಾರೆಯೇ ಎಂದು ಸುಪ್ರೀಂ ಪರಿಶೀಲಿಸಲಿದೆ ಎನ್ನಲಾಗಿದೆ. ಮೂರು ಹೊಸ ಕೃಷಿ ಕಾನೂನುಗಳ ಕುರಿತ ದಾವೆ ಸುಪ್ರೀಂಕೋರ್ಟ್‌ ನಡೆಯುತ್ತಿದೆ.

ಅಕ್ಟೋಬರ್‌ 3ರಂದು ನಾಲ್ಕು ಜನರ ರೈತರ ಹತ್ಯೆ ಸೇರಿದಂತೆ ಎಂಟು ಜನರ ಸಾವಿನ ಸಂಬಂಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು. ಉತ್ತರ ಪ್ರದೇಶದ ಲಖಿಂಪುರ್‌ನಲ್ಲಿ ನಡೆದ ಘಟನೆಯನ್ನು ಖಂಡಿಸಲಾಗಿತ್ತು.

ಲಖಿಂಪುರ್ ಖೇರಿಯಂತಹ ಘಟನೆಗಳನ್ನು ಅನುಮತಿಸಲಾಗದ ಕಾರಣ “ಇನ್ನು ಮುಂದೆ ರೈತ ಪ್ರತಿಭಟನೆಗಳು ಇರಬಾರದು” ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಈ ಮೂಲಕ ರೈತ ಚಳವಳಿಯನ್ನು ದಮನ ಮಾಡಲು ಸರ್ಕಾರ ಯತ್ನಿಸುತ್ತಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಬಯಸಿರುವ ರೈತರ ಗುಂಪಿನ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ನೀಡಿದೆ. ಕೇಂದ್ರ ಸರ್ಕಾರವು ಅದನ್ನು ವಿರೋಧಿಸುತ್ತಿರುವಾಗ, ಉತ್ತರ ಪ್ರದೇಶದ ಹಿಂಸೆಯನ್ನು ಉಲ್ಲೇಖಿಸಿದೆ.

ಇದನ್ನೂ ಓದಿರಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

“ನಿನ್ನೆ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನೆಗಳು ಈ ರೀತಿ ನಡೆಯಲು ಸಾಧ್ಯವಿಲ್ಲ” ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ. “ಕಾನೂನುಗಳನ್ನು ಈಗಾಗಲೇ ಕೋರ್ಟ್‌ ವ್ಯವಹರಿಸುತ್ತಿರುವಾಗ ಪ್ರತಿಭಟನೆಗೆ ಹೋಗಲು ಸಾಧ್ಯವಿಲ್ಲ ಎಂದು ದಯವಿಟ್ಟು ಹೇಳಿ” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಪ್ರತಿಕ್ರಿಯಿಸಿ, “ಇಂತಹ ಘಟನೆಗಳು ಸಂಭವಿಸಿದಾಗ ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ಜೀವ ಮತ್ತು ಆಸ್ತಿ ನಷ್ಟ. ಯಾರೂ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ” ಎಂದಿತ್ತು.

ರಾಜಸ್ಥಾನ ಮೂಲದ ರೈತ ಸಮೂಹವು ಜಂತರ್ ಮಂತರ್‌‌ನಲ್ಲಿ 200 ರೈತರೊಂದಿಗೆ “ಸತ್ಯಾಗ್ರಹ” ಆರಂಭಿಸಲು ಅನುಮತಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಈ ಹಿಂದೆ ನಡೆದ ಅಹಿತಕರ ಘಟನೆಗಳನ್ನು ಸುಪ್ರೀಂ ಉಲ್ಲೇಖಿಸಿದೆ. ಹೆದ್ದಾರಿಗಳನ್ನು ನಿರ್ಬಂಧಿಸುವುದು ಗುಂಪುಗಳ ಭಾಗವಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಅರ್ಜಿದಾರರಿಗೆ ಹೇಳಲಾಗಿತ್ತು.

ಕೃಷಿ ಕಾನೂನುಗಳ ವಿರುದ್ಧ ಜಂತರ್‌ಮಂತರ್‌‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಕೋರಿ ರಾಜಸ್ಥಾನ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಕ್ಷೇಪಿಸಿದೆ.

“ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೂ ತನಗೂ ಯಾವ ರೀತಿಯಲ್ಲೂ ಸಂಬಂಧವಿಲ್ಲ, ತಾನು ಆ ಹೋರಾಟದ ಭಾಗವಾಗಿಲ್ಲ, ಹಾಗಾಗಿ ಜಂತರ್ ಮಂತರ್ ಅನುಮತಿ ಕೇಳುತ್ತಿದ್ದೇವೆ ಎಂದು ಅಫಿದಾವಿತ್ ಸಲ್ಲಿಸಿ” ಎಂದು ಆ ಸಂಘಟನೆಯನ್ನು ಸುಪ್ರೀಂ ಕೇಳಿದೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆಗಳ ಸಂಪೂರ್ಣ ರದ್ಧತಿಗೆ ಆಗ್ರಹಿಸಿ ರೈತರು ಕೋರ್ಟ್ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ.

ದಮನಕಾರಿ ಪ್ರವೃತ್ತಿ: ಕೇಸರಿ ಹರವು

ರೈತ ಚಳವಳಿಯನ್ನು ದಮನ ಮಾಡಲು ಯತ್ನಿಸುತ್ತಿರುವ ಸಾಲು ಸಾಲು ಘಟನೆಗಳನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಚಿಂತಕ ಕೇಸರಿ ಹರವು ಅವರು, “ಕೇಂದ್ರ ಸರ್ಕಾರ ಮೂರನ್ನು ಆರು ಮಾಡಿ, ಆರನ್ನು ಒಂಭತ್ತು ಮಾಡಿಯಾದರೂ ಸರಿ, ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಸತ್ಯಾಗ್ರಹವನ್ನು ಕೊನೆಗಾಣಿಸಬೇಕು ಎನ್ನುವ ಹವಣಿಕೆಯಲ್ಲಿದೆ” ಎಂದಿದ್ದಾರೆ.

ಮುಂದುವರಿದು, “ಈ ವಾರ ಸುಪ್ರೀಂ ಕೋರ್ಟು ‘ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ಅನುಮತಿ ನೀಡಬೇಕೋ ಬೇಡವೋ’ ಎನ್ನುವ ಬಗ್ಗೆ ಮತ್ತೆ ವಿಚಾರಣೆ ನಡೆಸುತ್ತದೆ. ಅಂದೇ ತೀರ್ಪು ಬಂದರೂ ಬರಬಹುದು. ರಾಜಸ್ಥಾನದ ಒಂದು ರೈತ ಸಂಘಟನೆ ತಾನು ಸುಮಾರು ಇನ್ನೂರು ರೈತರನ್ನು ಸೇರಿಸಿ ಈ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡಬೇಕೆಂದು ಅರ್ಜಿ ಹಾಕಿಕೊಂಡಿತ್ತು. ಅಲ್ಲದೇ, ಆ ಸಂಘಟನೆ ರಾಜಾಸ್ಥಾನದ ಹೈಕೋರ್ಟಿನಲ್ಲೂ ಈ ಕಾಯ್ದೆಗಳನ್ನು ಪ್ರಶ್ನಿಸಿದೆ. ಕಾಯ್ದೆಗಳನ್ನು ಕೋರ್ಟಿನಲ್ಲಿ ಪ್ರಶ್ನಿಸಿದ ಮೇಲೆ ನೀವು ಹೊರಗೆ ಪ್ರತಿಭಟನೆ ಏಕೆ ನಡೆಸಬೇಕು ಎನ್ನುತ್ತೀರಿ? ಅದಕ್ಕೆ ಅವಕಾಶ ನೀಡಬಹುದೇ? ಎಂದು ಕೋರ್ಟು ಕೇಳಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ರೈಲ್ ರೋಕೋ ಚಳವಳಿ: ನೂರಾರು ರೈತರ ವಿರುದ್ದ FIR ದಾಖಲಿಸಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...