Homeಚಳವಳಿಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಮಾಧ್ಯಮಗಳು ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಿರುವುದು ಹೋರಾಟಗಾರರ ಆಕ್ರೋಶವನ್ನು ಹೆಚ್ಚಿಸಿದೆ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ’ದೆಹಲಿ ಚಲೋ’ ಆಂದೋಲನ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಹಿಂದಿ ಮಾಧ್ಯಮ ’ಆಜ್‌ತಕ್’ ರೈತ ಹೋರಾಟಗಾರರನ್ನು ಮಾತನಾಡಿಸಲು ಹೋಗಿ ’ಗೋದಿ ಮಿಡಿಯಾ’ ಎಂದು ಬೈಸಿಕೊಂಡಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಕೇಂದ್ರ ಸರ್ಕಾರ ತಂದಿರುವ ಕಾನೂನಿನ ವಿರುದ್ದ ಸೆಪ್ಟೆಂಬರ್‌ನಿಂದಲೂ ರೈತರು ಹೋರಾಟ ನಡೆಸುತ್ತಿದ್ದು ಮಾಧ್ಯಮಗಳು ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಲೇ ಬಂದಿದೆ. ಪ್ರಸ್ತುತ ’ದೆಹಲಿ ಚಲೋ’ ಹೋರಟದ ಬಗ್ಗೆ ನಕರತ್ಮಕವಾಗಿ ಬಿಂಬಿಸಿರುವುದು ಕೂಡಾ ರೈತರ ಆಕ್ರೋಶವನ್ನು ಇನ್ನೂ ಹೆಚ್ಚಿಸಿದೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಇದೀಗ ಹಿಂದಿ ಸುದ್ದಿ ಮಾಧ್ಯಮ ಆಜ್‌ತಕ್ ವರದಿಗಾರರೊಬ್ಬರು ಹೋರಾಟ ನಿರತ ರೈತರೊಬ್ಬರನ್ನು ಮಾತನಾಡಿಸಿದಾಗ, “ಸತ್‌ಸ್ರೀ ಅಕಾಲ್ ಗೋದಿ ಮೀಡಿಯಾ” ಎಂದು ಅವರನ್ನು ಸ್ವಾಗತಿಸಿದ್ದಾರೆ. ವಿಡಿಯೋದಲ್ಲಿ, “ನಾವು ಪಂಜಾಬ್‌‌ನಲ್ಲಿ ಎರಡು ತಿಂಗಳಿನಿಂದ ಪ್ರತಿಭನೆ ಮಾಡುತ್ತಿದ್ದೇವೆ ನೀವು ಎಲ್ಲಿ ಹೋಗಿದ್ದೀರಿ” ಎಂದು ಪ್ರಶ್ನಿಸಿದ್ದು ಇದರಿಂದ ಮುಜುಗರಕ್ಕೊಳಗಾದ ಅವರು ಅಲ್ಲಿಂದ ತೆರಳಿದ್ದಾರೆ. ಜೊತೆಗೆ “ಗೋದಿ ಮೀಡಿಯಾ ಮುರ್ದಾಬಾದ್” ಎಂದು ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಪರವಾಗಿ ನಿಂತು ನಿರಂತರ ಹೊಗಳುವ ಮಾಧ್ಯಮಗಳಿಗೆ ಬಳಸುವ ಪದವಾಗಿ ’ಗೋದಿ ಮೀಡಿಯಾ’ ಪದವನ್ನು ಬಳಸಲಾಗುತ್ತಿದೆ. ಈ ಹಿಂದೆ ಜೆಎನ್‌ಯುನಲ್ಲಿ ಕೂಡಾ ಕೇಂದ್ರ ಸರ್ಕಾರದ ಪರವಾಗಿರುವ ಮಾಧ್ಯಮಗಳನ್ನು ಇದೇ ರೀತಿ ಕರೆಯಲಾಗಿತ್ತು. ಸಿಎಎ ವಿರುದ್ದದ ಹೋರಾಟದ ಪ್ರತಿಭಟನಾಕಾರರು ಕೂಡಾ ”ಗೋದಿ ಮೀಡಿಯಾ” ಎಂದು ಕರೆದು ಹೋರಾಟವನ್ನು ನಿರ್ಲಕ್ಷ್ಯವಹಿಸುತ್ತಿರುವುದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ದೆಹಲಿಯ ಗಡಿಗಳಲ್ಲಿ ಜಮಾಯಿಸಿದ್ದರಾದರೂ ಹಲವು ರಾಷ್ಟ್ರೀಯ ಮಾಧ್ಯಮಗಳು ಆಂದೋಲನವನ್ನು ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಅದನ್ನೂ ಮೀರಿ ದೇಶದ ಹಲವು ರಾಜ್ಯದ ರೈತರು ದೆಹಲಿ ಚಲೋಗೆ ಹೊರಟಿದ್ದಾರೆ. ಚಳುವಳಿ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ನಿನ್ನೆ ತಿರಸ್ಕರಿಸಿದ ಹೋರಾಟಗಾರರು, ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...