Homeಚಳವಳಿಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ಮಾಧ್ಯಮಗಳು ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಿರುವುದು ಹೋರಾಟಗಾರರ ಆಕ್ರೋಶವನ್ನು ಹೆಚ್ಚಿಸಿದೆ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ’ದೆಹಲಿ ಚಲೋ’ ಆಂದೋಲನ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಹಿಂದಿ ಮಾಧ್ಯಮ ’ಆಜ್‌ತಕ್’ ರೈತ ಹೋರಾಟಗಾರರನ್ನು ಮಾತನಾಡಿಸಲು ಹೋಗಿ ’ಗೋದಿ ಮಿಡಿಯಾ’ ಎಂದು ಬೈಸಿಕೊಂಡಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಕೇಂದ್ರ ಸರ್ಕಾರ ತಂದಿರುವ ಕಾನೂನಿನ ವಿರುದ್ದ ಸೆಪ್ಟೆಂಬರ್‌ನಿಂದಲೂ ರೈತರು ಹೋರಾಟ ನಡೆಸುತ್ತಿದ್ದು ಮಾಧ್ಯಮಗಳು ಈ ಐತಿಹಾಸಿಕ ಹೋರಾಟವನ್ನು ನಿರ್ಲಕ್ಷ್ಯ ವಹಿಸುತ್ತಲೇ ಬಂದಿದೆ. ಪ್ರಸ್ತುತ ’ದೆಹಲಿ ಚಲೋ’ ಹೋರಟದ ಬಗ್ಗೆ ನಕರತ್ಮಕವಾಗಿ ಬಿಂಬಿಸಿರುವುದು ಕೂಡಾ ರೈತರ ಆಕ್ರೋಶವನ್ನು ಇನ್ನೂ ಹೆಚ್ಚಿಸಿದೆ.

ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ಇದೀಗ ಹಿಂದಿ ಸುದ್ದಿ ಮಾಧ್ಯಮ ಆಜ್‌ತಕ್ ವರದಿಗಾರರೊಬ್ಬರು ಹೋರಾಟ ನಿರತ ರೈತರೊಬ್ಬರನ್ನು ಮಾತನಾಡಿಸಿದಾಗ, “ಸತ್‌ಸ್ರೀ ಅಕಾಲ್ ಗೋದಿ ಮೀಡಿಯಾ” ಎಂದು ಅವರನ್ನು ಸ್ವಾಗತಿಸಿದ್ದಾರೆ. ವಿಡಿಯೋದಲ್ಲಿ, “ನಾವು ಪಂಜಾಬ್‌‌ನಲ್ಲಿ ಎರಡು ತಿಂಗಳಿನಿಂದ ಪ್ರತಿಭನೆ ಮಾಡುತ್ತಿದ್ದೇವೆ ನೀವು ಎಲ್ಲಿ ಹೋಗಿದ್ದೀರಿ” ಎಂದು ಪ್ರಶ್ನಿಸಿದ್ದು ಇದರಿಂದ ಮುಜುಗರಕ್ಕೊಳಗಾದ ಅವರು ಅಲ್ಲಿಂದ ತೆರಳಿದ್ದಾರೆ. ಜೊತೆಗೆ “ಗೋದಿ ಮೀಡಿಯಾ ಮುರ್ದಾಬಾದ್” ಎಂದು ದಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರದ ಪರವಾಗಿ ನಿಂತು ನಿರಂತರ ಹೊಗಳುವ ಮಾಧ್ಯಮಗಳಿಗೆ ಬಳಸುವ ಪದವಾಗಿ ’ಗೋದಿ ಮೀಡಿಯಾ’ ಪದವನ್ನು ಬಳಸಲಾಗುತ್ತಿದೆ. ಈ ಹಿಂದೆ ಜೆಎನ್‌ಯುನಲ್ಲಿ ಕೂಡಾ ಕೇಂದ್ರ ಸರ್ಕಾರದ ಪರವಾಗಿರುವ ಮಾಧ್ಯಮಗಳನ್ನು ಇದೇ ರೀತಿ ಕರೆಯಲಾಗಿತ್ತು. ಸಿಎಎ ವಿರುದ್ದದ ಹೋರಾಟದ ಪ್ರತಿಭಟನಾಕಾರರು ಕೂಡಾ ”ಗೋದಿ ಮೀಡಿಯಾ” ಎಂದು ಕರೆದು ಹೋರಾಟವನ್ನು ನಿರ್ಲಕ್ಷ್ಯವಹಿಸುತ್ತಿರುವುದರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ದೆಹಲಿಯ ಗಡಿಗಳಲ್ಲಿ ಜಮಾಯಿಸಿದ್ದರಾದರೂ ಹಲವು ರಾಷ್ಟ್ರೀಯ ಮಾಧ್ಯಮಗಳು ಆಂದೋಲನವನ್ನು ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಅದನ್ನೂ ಮೀರಿ ದೇಶದ ಹಲವು ರಾಜ್ಯದ ರೈತರು ದೆಹಲಿ ಚಲೋಗೆ ಹೊರಟಿದ್ದಾರೆ. ಚಳುವಳಿ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ನಿನ್ನೆ ತಿರಸ್ಕರಿಸಿದ ಹೋರಾಟಗಾರರು, ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...