Homeಮುಖಪುಟರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

- Advertisement -
- Advertisement -

ಒಂದು ವಾರದೊಳಗೆ ಶಂಭು ಗಡಿಯನ್ನು ತೆರೆಯುವಂತೆ ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ಆದೇಶಿಸಿದೆ ಎಂದು ವರದಿಗಳು ಹೇಳಿವೆ.

ಪ್ರತಿಭಟನಾ ನಿರತ ರೈತರು ದೆಹಲಿಗೆ ಮೆರವಣಿಗೆ ಮಾಡುವುದನ್ನು ತಡೆಯಲು ಫೆಬ್ರವರಿಯಲ್ಲಿ ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯನ್ನು ಮುಚ್ಚಲಾಗಿದೆ.

ಉದಯ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಸಲ್ಲಿಸಿದ್ದ ಮನವಿಗೆ ಮೌಖಿಕವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಜಿಎಸ್ ಸಂಧವಾಲಿಯಾ ಮತ್ತು ವಿಕಾಸ್ ಬಹ್ಲ್ ಅವರ ಪೀಠ, ಶಂಭು ಗಡಿಯನ್ನು ತೆರೆಯುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಹೇರಿರುವ ತಡೆಯ ತೆರವಿಗೆ ಕೋರಿ ಫೆಬ್ರವರಿಯಲ್ಲಿ ಸಿಂಗ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಗಡಿ ತೆರೆಯುವಾಗ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎರಡೂ ರಾಜ್ಯಗಳ ಸರ್ಕಾರಗಳಿಗೆ ನ್ಯಾಯಾಲಯ ಸೂಚಿಸಿದೆ.

ಫೆಬ್ರವರಿಯಲ್ಲಿ, ಪಂಜಾಬ್‌ನಿಂದ ರೈತರ ಗುಂಪುಗಳು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ಆರಂಭಿಸಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಯೂನಿಯನ್‌ಗಳ ನೇತೃತ್ವದಲ್ಲಿ ಸಾವಿರಾರು ಪ್ರತಿಭಟನಾಕಾರರು ಫೆಬ್ರವರಿ 13 ರಿಂದ ಪಂಜಾಬ್-ಹರಿಯಾಣ ಗಡಿಯ ಹಲವು ಸ್ಥಳಗಳಲ್ಲಿ ನೆಲೆಸಿದ್ದಾರೆ. ಹರಿಯಾಣ ರಾಜ್ಯ ಪೊಲೀಸರು ರೈತರು ಗಡಿ ದಾಟಿದಂತೆ ಅವರ ಮೇಲೆ ಬಲ ಪ್ರಯೋಗ ನಡೆಸಿದ್ದಾರೆ.

“ಭದ್ರತೆಯ ದೃಷ್ಠಿಯಿಂದ ರೈತರು ತಮ್ಮ ಧರಣಿಯನ್ನು ರಾಷ್ಟ್ರೀಯ ಹೆದ್ದಾರಿಯಿಂದ ಸ್ಥಳಾಂತರಿಸಿದರೆ ಮತ್ತು ತಮ್ಮ ಟ್ರ್ಯಾಕ್ಟರ್-ಟ್ರಾಲಿಯನ್ನು ರಾಷ್ಟ್ರೀಯ ಹೆದ್ದಾರಿಯಿಂದ ತೆಗೆದರೆ ಮಾತ್ರ ಬ್ಯಾರಿಕೇಡ್ ತೆರವುಗೊಳಿಸುತ್ತೇವೆ” ಎಂದು ಈ ಹಿಂದೆ ಹರಿಯಾಣ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ, ಹರಿಯಾಣದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದೀಪಕ್ ಸಬರ್ವಾಲ್ ಅವರು, “ಪಂಜಾಬ್‌ನಿಂದ ಸುಮಾರು 400 ರಿಂದ 450 ಪ್ರತಿಭಟನಾಕಾರರು ರಾಜ್ಯಕ್ಕೆ ಪ್ರವೇಶಿಸಲು ಮತ್ತು ಅಂಬಾಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಪೊಲೀಸರು ರೈತರಿಗೆ ಭಯಪಡಬೇಕಾದ ಅವಶ್ಯಕತೆಯಿಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ. ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ. ಗಡಿ ಮುಚ್ಚಿರುವುದರಿಂದ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಿದೆ” ಎಂದು ಹೈಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...