Homeಮುಖಪುಟರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

- Advertisement -
- Advertisement -

ಒಂದು ವಾರದೊಳಗೆ ಶಂಭು ಗಡಿಯನ್ನು ತೆರೆಯುವಂತೆ ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ಆದೇಶಿಸಿದೆ ಎಂದು ವರದಿಗಳು ಹೇಳಿವೆ.

ಪ್ರತಿಭಟನಾ ನಿರತ ರೈತರು ದೆಹಲಿಗೆ ಮೆರವಣಿಗೆ ಮಾಡುವುದನ್ನು ತಡೆಯಲು ಫೆಬ್ರವರಿಯಲ್ಲಿ ಪಂಜಾಬ್-ಹರಿಯಾಣ ನಡುವಿನ ಶಂಭು ಗಡಿಯನ್ನು ಮುಚ್ಚಲಾಗಿದೆ.

ಉದಯ್ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಸಲ್ಲಿಸಿದ್ದ ಮನವಿಗೆ ಮೌಖಿಕವಾಗಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳಾದ ಜಿಎಸ್ ಸಂಧವಾಲಿಯಾ ಮತ್ತು ವಿಕಾಸ್ ಬಹ್ಲ್ ಅವರ ಪೀಠ, ಶಂಭು ಗಡಿಯನ್ನು ತೆರೆಯುವಂತೆ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.

ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಕೇಂದ್ರ ಮತ್ತು ಹರಿಯಾಣ ಸರ್ಕಾರಗಳು ಹೇರಿರುವ ತಡೆಯ ತೆರವಿಗೆ ಕೋರಿ ಫೆಬ್ರವರಿಯಲ್ಲಿ ಸಿಂಗ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಗಡಿ ತೆರೆಯುವಾಗ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಎರಡೂ ರಾಜ್ಯಗಳ ಸರ್ಕಾರಗಳಿಗೆ ನ್ಯಾಯಾಲಯ ಸೂಚಿಸಿದೆ.

ಫೆಬ್ರವರಿಯಲ್ಲಿ, ಪಂಜಾಬ್‌ನಿಂದ ರೈತರ ಗುಂಪುಗಳು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನು ಜಾರಿಗೆ ಒತ್ತಾಯಿಸಿ ದೆಹಲಿಗೆ ಮೆರವಣಿಗೆ ಆರಂಭಿಸಿತ್ತು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಯೂನಿಯನ್‌ಗಳ ನೇತೃತ್ವದಲ್ಲಿ ಸಾವಿರಾರು ಪ್ರತಿಭಟನಾಕಾರರು ಫೆಬ್ರವರಿ 13 ರಿಂದ ಪಂಜಾಬ್-ಹರಿಯಾಣ ಗಡಿಯ ಹಲವು ಸ್ಥಳಗಳಲ್ಲಿ ನೆಲೆಸಿದ್ದಾರೆ. ಹರಿಯಾಣ ರಾಜ್ಯ ಪೊಲೀಸರು ರೈತರು ಗಡಿ ದಾಟಿದಂತೆ ಅವರ ಮೇಲೆ ಬಲ ಪ್ರಯೋಗ ನಡೆಸಿದ್ದಾರೆ.

“ಭದ್ರತೆಯ ದೃಷ್ಠಿಯಿಂದ ರೈತರು ತಮ್ಮ ಧರಣಿಯನ್ನು ರಾಷ್ಟ್ರೀಯ ಹೆದ್ದಾರಿಯಿಂದ ಸ್ಥಳಾಂತರಿಸಿದರೆ ಮತ್ತು ತಮ್ಮ ಟ್ರ್ಯಾಕ್ಟರ್-ಟ್ರಾಲಿಯನ್ನು ರಾಷ್ಟ್ರೀಯ ಹೆದ್ದಾರಿಯಿಂದ ತೆಗೆದರೆ ಮಾತ್ರ ಬ್ಯಾರಿಕೇಡ್ ತೆರವುಗೊಳಿಸುತ್ತೇವೆ” ಎಂದು ಈ ಹಿಂದೆ ಹರಿಯಾಣ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ವಿಚಾರಣೆಯ ಸಂದರ್ಭದಲ್ಲಿ, ಹರಿಯಾಣದ ಹೆಚ್ಚುವರಿ ಅಡ್ವೊಕೇಟ್ ಜನರಲ್ ದೀಪಕ್ ಸಬರ್ವಾಲ್ ಅವರು, “ಪಂಜಾಬ್‌ನಿಂದ ಸುಮಾರು 400 ರಿಂದ 450 ಪ್ರತಿಭಟನಾಕಾರರು ರಾಜ್ಯಕ್ಕೆ ಪ್ರವೇಶಿಸಲು ಮತ್ತು ಅಂಬಾಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಮುತ್ತಿಗೆ ಹಾಕಲು ಯೋಜಿಸುತ್ತಿದ್ದಾರೆ” ಎಂದು ಹೇಳಿದ್ದರು.

“ಪೊಲೀಸರು ರೈತರಿಗೆ ಭಯಪಡಬೇಕಾದ ಅವಶ್ಯಕತೆಯಿಲ್ಲ. ನಾವು ಪ್ರಜಾಪ್ರಭುತ್ವದಲ್ಲಿ ಬದುಕುತ್ತಿದ್ದೇವೆ. ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ. ಗಡಿ ಮುಚ್ಚಿರುವುದರಿಂದ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಿದೆ” ಎಂದು ಹೈಕೋರ್ಟ್ ಪೀಠ ಹೇಳಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಸಲಿಂಗ ವಿವಾಹ ಮರುಪರಿಶೀಲನಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಂಜೀವ್‌ ಖನ್ನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...