Homeಚಳವಳಿರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ - ದಿಲ್ಜಿತ್ ದೋಸಾಂಜ್

ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು?

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಳೆದ ವಾರ ಪಿಜ್ಜಾ ವಿತರಣೆಯಾದ ಬಗ್ಗೆ ಟೀಕಿಸಿದವರಿಗೆ, ಟ್ರೋಲ್ ಮಾಡಿದವರಿಗೆ ನಟ, ಗಾಯಕ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿರುವ ನಟ, ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ.

ಕಳೆದ ವಾರ, ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ನೂರಾರು ಪಿಜ್ಜಾಗಳನ್ನು ಪ್ರತಿಭಟನಾ ನಿರತ ರೈತರಿಗೆ  ವಿತರಿಸಲಾಗಿತ್ತು. ಅಮೃತಸರದ ಐವರು ಸ್ನೇಹಿತರ ಗುಂಪು ಸಿಂಘು ಗಡಿಯಲ್ಲಿ ಒಂದು ಅಂಗಡಿ ಮಾಡಿ, ಪ್ರತಿಭಟನಾ ನಿರತ ರೈತರಿಗೆ ಸುಮಾರು 400 ಪಿಜ್ಜಾಗಳನ್ನು ವಿತರಿಸಿದ್ದರು.

36 ವರ್ಷದ ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್, ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

“ಪಿಜ್ಜಾಗಳಿಗಾಗಿ ಹಿಟ್ಟನ್ನು ಒದಗಿಸುವ ರೈತರು, ತಾವು ಕೂಡ ಒಂದು ಪಿಜ್ಜಾ ತಿನ್ನಲು ಅರ್ಹರಾಗಿರುತ್ತಾರೆ” ಎಂದು ತನ್ನ ನಾಲ್ವರು ಸ್ನೇಹಿತರೊಂದಿಗೆ ಪಿಜ್ಜಾ ಹಂಚಿದ್ದ ಶನ್‌ಬೀರ್ ಸಿಂಗ್ ಸಂಧು ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಹೇಳಿದ್ದಾರೆ.

4fuee5m8

ಈ ಘಟನೆಯನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು. ಇನ್ನೂ ಅನೇಕ ಮಂದಿ ಪ್ರತಿಭಟನೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ಪ್ರತಿಭಟಿಸುತ್ತಿರುವ ರೈತರಿಗೆ ಉಚಿತ ಪಿಜ್ಜಾಗಳು, ಮಸಾಜ್ ಕುರ್ಚಿಗಳು, ಇದು ಪ್ರತಿಭಟನೆಯೇ ಅಥವಾ ಪಂಚತಾರಾ ಸ್ಪಾನಾ? ಮತ್ತು ಇದಕ್ಕಾಗಿ ಯಾರು ಪಾವತಿಸುತ್ತಿದ್ದಾರೆ? ಎಂದು ಅನೇಕ ಪ್ರಶ್ನೆಗಳು ಬಂದಿದ್ದವು.

ಇದಕ್ಕೆ ಬಹಳಷ್ಟು ಸಾಮಾಜಿಕ ಜಾಲತಾಣಿಗರು “ಗೂಗಲ್‌ನಿಂದ ಆಹಾರ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಅವಮಾನಿಸಬೇಡಿ. ಅವರು 20 ದಿನಗಳಿಂದ ಹೋರಾಟ ಮಾಡಿ ದಣಿದಿದ್ದಾರೆ. ಹಾಗಾಗಿ ಬಹಳಷ್ಟು ಪ್ರಜ್ಞಾವಂತರು ಹೋರಾಟ ನಿರತ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ರೈತರನ್ನು ಕೇವಲ ಬಡವರನ್ನಾಗಿಯೇ ನೋಡುವ ನಿಮ್ಮ ಮನಸ್ಥಿತಿಗೆ ಧಿಕ್ಕಾರ” ಎಂಬುದಾಗಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದರು.

“ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು? ಅನ್ನದಾತ ರೈತರು ಹೋರಾಟದಲ್ಲಿ ಪಿಜ್ಜಾ ಬಿರಿಯಾನಿ ತಿನ್ನೋದು ನಾವೆಲ್ಲರೂ ಖುಷಿಯಿಂದ ಸ್ವಾಗತಿಸಬೇಕು. ಅನ್ನದಾತೋ ಸುಖೀಭವ” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಿಲ್ಜಿತ್ ದೋಸಾಂಜ್ ದೆಹಲಿ-ಹರಿಯಾಣ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಬೆಂಬಲ ನೀಡಲು ಭೇಟಿ ನೀಡಿದ್ದರು. “ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ದಿಲ್ಜಿತ್ ಮನವಿ ಮಾಡಿದ್ದರು.

ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನದ ಬಗ್ಗೆ ಅವರು ನಿಯಮಿತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ದಿಲ್ಜಿತ್ ಹಾಕಿದ ಟ್ವೀಟ್‌ಗಳಲ್ಲಿ ಒಂದನ್ನು ಬಾಲಿವುಡ್ ನಟ ಪ್ರಿಯಾಂಕಾ ಚೋಪ್ರಾ ಕೂಡ ಅನುಮೋದಿಸಿ, ರಿಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....