Homeಚಳವಳಿರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ - ದಿಲ್ಜಿತ್ ದೋಸಾಂಜ್

ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು?

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಳೆದ ವಾರ ಪಿಜ್ಜಾ ವಿತರಣೆಯಾದ ಬಗ್ಗೆ ಟೀಕಿಸಿದವರಿಗೆ, ಟ್ರೋಲ್ ಮಾಡಿದವರಿಗೆ ನಟ, ಗಾಯಕ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿರುವ ನಟ, ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ.

ಕಳೆದ ವಾರ, ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ನೂರಾರು ಪಿಜ್ಜಾಗಳನ್ನು ಪ್ರತಿಭಟನಾ ನಿರತ ರೈತರಿಗೆ  ವಿತರಿಸಲಾಗಿತ್ತು. ಅಮೃತಸರದ ಐವರು ಸ್ನೇಹಿತರ ಗುಂಪು ಸಿಂಘು ಗಡಿಯಲ್ಲಿ ಒಂದು ಅಂಗಡಿ ಮಾಡಿ, ಪ್ರತಿಭಟನಾ ನಿರತ ರೈತರಿಗೆ ಸುಮಾರು 400 ಪಿಜ್ಜಾಗಳನ್ನು ವಿತರಿಸಿದ್ದರು.

36 ವರ್ಷದ ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್, ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

“ಪಿಜ್ಜಾಗಳಿಗಾಗಿ ಹಿಟ್ಟನ್ನು ಒದಗಿಸುವ ರೈತರು, ತಾವು ಕೂಡ ಒಂದು ಪಿಜ್ಜಾ ತಿನ್ನಲು ಅರ್ಹರಾಗಿರುತ್ತಾರೆ” ಎಂದು ತನ್ನ ನಾಲ್ವರು ಸ್ನೇಹಿತರೊಂದಿಗೆ ಪಿಜ್ಜಾ ಹಂಚಿದ್ದ ಶನ್‌ಬೀರ್ ಸಿಂಗ್ ಸಂಧು ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಹೇಳಿದ್ದಾರೆ.

4fuee5m8

ಈ ಘಟನೆಯನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು. ಇನ್ನೂ ಅನೇಕ ಮಂದಿ ಪ್ರತಿಭಟನೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ಪ್ರತಿಭಟಿಸುತ್ತಿರುವ ರೈತರಿಗೆ ಉಚಿತ ಪಿಜ್ಜಾಗಳು, ಮಸಾಜ್ ಕುರ್ಚಿಗಳು, ಇದು ಪ್ರತಿಭಟನೆಯೇ ಅಥವಾ ಪಂಚತಾರಾ ಸ್ಪಾನಾ? ಮತ್ತು ಇದಕ್ಕಾಗಿ ಯಾರು ಪಾವತಿಸುತ್ತಿದ್ದಾರೆ? ಎಂದು ಅನೇಕ ಪ್ರಶ್ನೆಗಳು ಬಂದಿದ್ದವು.

ಇದಕ್ಕೆ ಬಹಳಷ್ಟು ಸಾಮಾಜಿಕ ಜಾಲತಾಣಿಗರು “ಗೂಗಲ್‌ನಿಂದ ಆಹಾರ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಅವಮಾನಿಸಬೇಡಿ. ಅವರು 20 ದಿನಗಳಿಂದ ಹೋರಾಟ ಮಾಡಿ ದಣಿದಿದ್ದಾರೆ. ಹಾಗಾಗಿ ಬಹಳಷ್ಟು ಪ್ರಜ್ಞಾವಂತರು ಹೋರಾಟ ನಿರತ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ರೈತರನ್ನು ಕೇವಲ ಬಡವರನ್ನಾಗಿಯೇ ನೋಡುವ ನಿಮ್ಮ ಮನಸ್ಥಿತಿಗೆ ಧಿಕ್ಕಾರ” ಎಂಬುದಾಗಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದರು.

“ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು? ಅನ್ನದಾತ ರೈತರು ಹೋರಾಟದಲ್ಲಿ ಪಿಜ್ಜಾ ಬಿರಿಯಾನಿ ತಿನ್ನೋದು ನಾವೆಲ್ಲರೂ ಖುಷಿಯಿಂದ ಸ್ವಾಗತಿಸಬೇಕು. ಅನ್ನದಾತೋ ಸುಖೀಭವ” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಿಲ್ಜಿತ್ ದೋಸಾಂಜ್ ದೆಹಲಿ-ಹರಿಯಾಣ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಬೆಂಬಲ ನೀಡಲು ಭೇಟಿ ನೀಡಿದ್ದರು. “ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ದಿಲ್ಜಿತ್ ಮನವಿ ಮಾಡಿದ್ದರು.

ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನದ ಬಗ್ಗೆ ಅವರು ನಿಯಮಿತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ದಿಲ್ಜಿತ್ ಹಾಕಿದ ಟ್ವೀಟ್‌ಗಳಲ್ಲಿ ಒಂದನ್ನು ಬಾಲಿವುಡ್ ನಟ ಪ್ರಿಯಾಂಕಾ ಚೋಪ್ರಾ ಕೂಡ ಅನುಮೋದಿಸಿ, ರಿಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...