Homeಚಳವಳಿರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ - ದಿಲ್ಜಿತ್ ದೋಸಾಂಜ್

ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು?

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಳೆದ ವಾರ ಪಿಜ್ಜಾ ವಿತರಣೆಯಾದ ಬಗ್ಗೆ ಟೀಕಿಸಿದವರಿಗೆ, ಟ್ರೋಲ್ ಮಾಡಿದವರಿಗೆ ನಟ, ಗಾಯಕ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿರುವ ನಟ, ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ.

ಕಳೆದ ವಾರ, ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ನೂರಾರು ಪಿಜ್ಜಾಗಳನ್ನು ಪ್ರತಿಭಟನಾ ನಿರತ ರೈತರಿಗೆ  ವಿತರಿಸಲಾಗಿತ್ತು. ಅಮೃತಸರದ ಐವರು ಸ್ನೇಹಿತರ ಗುಂಪು ಸಿಂಘು ಗಡಿಯಲ್ಲಿ ಒಂದು ಅಂಗಡಿ ಮಾಡಿ, ಪ್ರತಿಭಟನಾ ನಿರತ ರೈತರಿಗೆ ಸುಮಾರು 400 ಪಿಜ್ಜಾಗಳನ್ನು ವಿತರಿಸಿದ್ದರು.

36 ವರ್ಷದ ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್, ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

“ಪಿಜ್ಜಾಗಳಿಗಾಗಿ ಹಿಟ್ಟನ್ನು ಒದಗಿಸುವ ರೈತರು, ತಾವು ಕೂಡ ಒಂದು ಪಿಜ್ಜಾ ತಿನ್ನಲು ಅರ್ಹರಾಗಿರುತ್ತಾರೆ” ಎಂದು ತನ್ನ ನಾಲ್ವರು ಸ್ನೇಹಿತರೊಂದಿಗೆ ಪಿಜ್ಜಾ ಹಂಚಿದ್ದ ಶನ್‌ಬೀರ್ ಸಿಂಗ್ ಸಂಧು ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಹೇಳಿದ್ದಾರೆ.

4fuee5m8

ಈ ಘಟನೆಯನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು. ಇನ್ನೂ ಅನೇಕ ಮಂದಿ ಪ್ರತಿಭಟನೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ಪ್ರತಿಭಟಿಸುತ್ತಿರುವ ರೈತರಿಗೆ ಉಚಿತ ಪಿಜ್ಜಾಗಳು, ಮಸಾಜ್ ಕುರ್ಚಿಗಳು, ಇದು ಪ್ರತಿಭಟನೆಯೇ ಅಥವಾ ಪಂಚತಾರಾ ಸ್ಪಾನಾ? ಮತ್ತು ಇದಕ್ಕಾಗಿ ಯಾರು ಪಾವತಿಸುತ್ತಿದ್ದಾರೆ? ಎಂದು ಅನೇಕ ಪ್ರಶ್ನೆಗಳು ಬಂದಿದ್ದವು.

ಇದಕ್ಕೆ ಬಹಳಷ್ಟು ಸಾಮಾಜಿಕ ಜಾಲತಾಣಿಗರು “ಗೂಗಲ್‌ನಿಂದ ಆಹಾರ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಅವಮಾನಿಸಬೇಡಿ. ಅವರು 20 ದಿನಗಳಿಂದ ಹೋರಾಟ ಮಾಡಿ ದಣಿದಿದ್ದಾರೆ. ಹಾಗಾಗಿ ಬಹಳಷ್ಟು ಪ್ರಜ್ಞಾವಂತರು ಹೋರಾಟ ನಿರತ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ರೈತರನ್ನು ಕೇವಲ ಬಡವರನ್ನಾಗಿಯೇ ನೋಡುವ ನಿಮ್ಮ ಮನಸ್ಥಿತಿಗೆ ಧಿಕ್ಕಾರ” ಎಂಬುದಾಗಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದರು.

“ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು? ಅನ್ನದಾತ ರೈತರು ಹೋರಾಟದಲ್ಲಿ ಪಿಜ್ಜಾ ಬಿರಿಯಾನಿ ತಿನ್ನೋದು ನಾವೆಲ್ಲರೂ ಖುಷಿಯಿಂದ ಸ್ವಾಗತಿಸಬೇಕು. ಅನ್ನದಾತೋ ಸುಖೀಭವ” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಿಲ್ಜಿತ್ ದೋಸಾಂಜ್ ದೆಹಲಿ-ಹರಿಯಾಣ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಬೆಂಬಲ ನೀಡಲು ಭೇಟಿ ನೀಡಿದ್ದರು. “ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ದಿಲ್ಜಿತ್ ಮನವಿ ಮಾಡಿದ್ದರು.

ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನದ ಬಗ್ಗೆ ಅವರು ನಿಯಮಿತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ದಿಲ್ಜಿತ್ ಹಾಕಿದ ಟ್ವೀಟ್‌ಗಳಲ್ಲಿ ಒಂದನ್ನು ಬಾಲಿವುಡ್ ನಟ ಪ್ರಿಯಾಂಕಾ ಚೋಪ್ರಾ ಕೂಡ ಅನುಮೋದಿಸಿ, ರಿಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...