Homeಚಳವಳಿರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ - ದಿಲ್ಜಿತ್ ದೋಸಾಂಜ್

ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು?

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 19 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕಳೆದ ವಾರ ಪಿಜ್ಜಾ ವಿತರಣೆಯಾದ ಬಗ್ಗೆ ಟೀಕಿಸಿದವರಿಗೆ, ಟ್ರೋಲ್ ಮಾಡಿದವರಿಗೆ ನಟ, ಗಾಯಕ ದಿಲ್ಜಿತ್ ದೋಸಾಂಜ್ ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿರುವ ನಟ, ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ.

ಕಳೆದ ವಾರ, ದೆಹಲಿ-ಹರಿಯಾಣದ ಸಿಂಘು ಗಡಿಯಲ್ಲಿ ನೂರಾರು ಪಿಜ್ಜಾಗಳನ್ನು ಪ್ರತಿಭಟನಾ ನಿರತ ರೈತರಿಗೆ  ವಿತರಿಸಲಾಗಿತ್ತು. ಅಮೃತಸರದ ಐವರು ಸ್ನೇಹಿತರ ಗುಂಪು ಸಿಂಘು ಗಡಿಯಲ್ಲಿ ಒಂದು ಅಂಗಡಿ ಮಾಡಿ, ಪ್ರತಿಭಟನಾ ನಿರತ ರೈತರಿಗೆ ಸುಮಾರು 400 ಪಿಜ್ಜಾಗಳನ್ನು ವಿತರಿಸಿದ್ದರು.

36 ವರ್ಷದ ಬಾಲಿವುಡ್ ನಟ ದಿಲ್ಜಿತ್ ದೋಸಾಂಜ್, ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದಾರೆ.

ಇದನ್ನೂ ಓದಿ: ಜನರಿಗಾಗಿ ತಮ್ಮ ಆಸ್ತಿಯನ್ನು 10 ಕೋಟಿಗೆ ಅಡವಿಟ್ಟ ನಟ ಸೋನು ಸೂದ್!

“ಪಿಜ್ಜಾಗಳಿಗಾಗಿ ಹಿಟ್ಟನ್ನು ಒದಗಿಸುವ ರೈತರು, ತಾವು ಕೂಡ ಒಂದು ಪಿಜ್ಜಾ ತಿನ್ನಲು ಅರ್ಹರಾಗಿರುತ್ತಾರೆ” ಎಂದು ತನ್ನ ನಾಲ್ವರು ಸ್ನೇಹಿತರೊಂದಿಗೆ ಪಿಜ್ಜಾ ಹಂಚಿದ್ದ ಶನ್‌ಬೀರ್ ಸಿಂಗ್ ಸಂಧು ಸುದ್ದಿ ಸಂಸ್ಥೆ ಪಿಟಿಐ ಜೊತೆಗೆ ಹೇಳಿದ್ದಾರೆ.

4fuee5m8

ಈ ಘಟನೆಯನ್ನು ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶ್ಲಾಘಿಸಿದ್ದರು. ಇನ್ನೂ ಅನೇಕ ಮಂದಿ ಪ್ರತಿಭಟನೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನೀಡುತ್ತಿರುವ ಐತಿಹಾಸಿಕ ಉಡುಗೊರೆ ರೈತರಿಗೆ ಬೇಡ: ಯೋಗೇಂದ್ರ ಯಾದವ್

ಇದನ್ನೂ ಓದಿ: ರೈತರ ಪ್ರತಿಭಟನೆ ಬೆಂಬಲಿಸಲು ರಾಜೀನಾಮೆ ನೀಡಿದ ಪಂಜಾಬ್ ಡಿಐಜಿ!

ಪ್ರತಿಭಟಿಸುತ್ತಿರುವ ರೈತರಿಗೆ ಉಚಿತ ಪಿಜ್ಜಾಗಳು, ಮಸಾಜ್ ಕುರ್ಚಿಗಳು, ಇದು ಪ್ರತಿಭಟನೆಯೇ ಅಥವಾ ಪಂಚತಾರಾ ಸ್ಪಾನಾ? ಮತ್ತು ಇದಕ್ಕಾಗಿ ಯಾರು ಪಾವತಿಸುತ್ತಿದ್ದಾರೆ? ಎಂದು ಅನೇಕ ಪ್ರಶ್ನೆಗಳು ಬಂದಿದ್ದವು.

ಇದಕ್ಕೆ ಬಹಳಷ್ಟು ಸಾಮಾಜಿಕ ಜಾಲತಾಣಿಗರು “ಗೂಗಲ್‌ನಿಂದ ಆಹಾರ ಡೌನ್‌ಲೋಡ್ ಮಾಡಲು ಸಾಧ್ಯವಿಲ್ಲ. ದೇಶಕ್ಕೆ ಅನ್ನ ನೀಡುವ ರೈತರನ್ನು ಅವಮಾನಿಸಬೇಡಿ. ಅವರು 20 ದಿನಗಳಿಂದ ಹೋರಾಟ ಮಾಡಿ ದಣಿದಿದ್ದಾರೆ. ಹಾಗಾಗಿ ಬಹಳಷ್ಟು ಪ್ರಜ್ಞಾವಂತರು ಹೋರಾಟ ನಿರತ ರೈತರಿಗೆ ಸಹಾಯ ಮಾಡುತ್ತಿದ್ದಾರೆ. ರೈತರನ್ನು ಕೇವಲ ಬಡವರನ್ನಾಗಿಯೇ ನೋಡುವ ನಿಮ್ಮ ಮನಸ್ಥಿತಿಗೆ ಧಿಕ್ಕಾರ” ಎಂಬುದಾಗಿ ಟ್ವೀಟ್‌ ಮಾಡಿ ತಿರುಗೇಟು ನೀಡಿದ್ದರು.

“ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿನ್ನೋದು ತಪ್ಪಲ್ಲ ಅಂದಮೇಲೆ ರೈತರು ಹೋರಾಟದಲ್ಲಿ ಪಿಜ್ಜಾ ತಿನ್ನೋದು ಹೇಗೆ ತಪ್ಪು? ಅನ್ನದಾತ ರೈತರು ಹೋರಾಟದಲ್ಲಿ ಪಿಜ್ಜಾ ಬಿರಿಯಾನಿ ತಿನ್ನೋದು ನಾವೆಲ್ಲರೂ ಖುಷಿಯಿಂದ ಸ್ವಾಗತಿಸಬೇಕು. ಅನ್ನದಾತೋ ಸುಖೀಭವ” ಎಂದು ಯುವ ಹೋರಾಟಗಾರ ಸರೋವರ್ ಬೆಂಕಿಕೆರೆ ಅಭಿಪ್ರಾಯಪಟ್ಟಿದ್ದಾರೆ.

ಈ ತಿಂಗಳ ಆರಂಭದಲ್ಲಿ, ದಿಲ್ಜಿತ್ ದೋಸಾಂಜ್ ದೆಹಲಿ-ಹರಿಯಾಣ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಬೆಂಬಲ ನೀಡಲು ಭೇಟಿ ನೀಡಿದ್ದರು. “ದಯವಿಟ್ಟು ನಮ್ಮ ರೈತರ ಬೇಡಿಕೆಗಳನ್ನು ಈಡೇರಿಸಿ. ಎಲ್ಲರೂ ಇಲ್ಲಿ ಶಾಂತಿಯುತವಾಗಿ ಕುಳಿತಿದ್ದಾರೆ ಮತ್ತು ಇಡೀ ದೇಶವು ರೈತರೊಂದಿಗೆ ಇದೆ. ಈ ರೈತರ ಪ್ರತಿಭಟನೆ ಬಗ್ಗೆ, ಟ್ವಿಟ್ಟರ್‌ನಲ್ಲಿ ವಿಷಯಗಳನ್ನು ತಿರುಚಲಾಗಿದೆ ಆದರೆ ಸತ್ಯವೆಂದರೆ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದಾರೆ. ಇಲ್ಲಿ ಯಾರೂ ರಕ್ತಪಾತದ ಬಗ್ಗೆ ಮಾತನಾಡುವುದಿಲ್ಲ. ಇವರ ಬೇಡಿಕೆಗಳನ್ನು ಪರಿಹರಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ದಿಲ್ಜಿತ್ ಮನವಿ ಮಾಡಿದ್ದರು.

ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನದ ಬಗ್ಗೆ ಅವರು ನಿಯಮಿತವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ದಿಲ್ಜಿತ್ ಹಾಕಿದ ಟ್ವೀಟ್‌ಗಳಲ್ಲಿ ಒಂದನ್ನು ಬಾಲಿವುಡ್ ನಟ ಪ್ರಿಯಾಂಕಾ ಚೋಪ್ರಾ ಕೂಡ ಅನುಮೋದಿಸಿ, ರಿಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...