Homeಅಂಕಣಗಳುಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

ಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

- Advertisement -
- Advertisement -

ಸಕಾಲಕ್ಕೆ ಬೀಳುವ ಮಳೆಯನ್ನು ರೈತರು ಬಗೆ ಬಗೆಯಾಗಿ ಬಣ್ಣಿಸಿ ಸಂತಸಪಡುವುದುಂಟು. ಉತ್ತರ ಭಾರತದ ಕಡೆಗೆ ಇಂತಹ ಮಳೆ ಸುರಿದರೆ ತುಪ್ಪ ಸುರಿಯಿತು, ಬಂಗಾರವೇ ಭುವಿಗಿಳಿಯಿತು ಎಂದು ಉದ್ಗರಿಸುತ್ತಾರೆ. ಹಿಂದಿ-ಪಂಜಾಬಿ ಸೀಮೆಯ ಹೊಲಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಇದೀಗ ಕಾಣುವುದು ಸಾಸಿವೆ ಪೈರಿನ ಹಳದಿ ಹೂ ವಿಸ್ತಾರ. ದಕ್ಷಿಣದವರು ಒಗ್ಗರಣೆಗೆ-ಉಪ್ಪಿನಕಾಯಿಗೆ ಮಾತ್ರವೇ ಸಾಸಿವೆ ಬಳಸಿದರೆ, ಉತ್ತರಪ್ರದೇಶ, ಬಿಹಾರ, ರಾಜಸ್ತಾನ, ಹರಿಯಾಣ, ಪಂಜಾಬ್, ದೆಹಲಿ ಮಾತ್ರವಲ್ಲದೆ ಒಡಿಶಾ ಬಂಗಾಳ ಅಸ್ಸಾಮಿನಲ್ಲಿ ಅಡುಗೆ ಎಣ್ಣೆಯಾಗಿ ಸಾಸಿವೆ ಎಣ್ಣೆಯೇ ಜನಪ್ರಿಯ. ಹೀಗಾಗಿ ಸಾಸಿವೆ ಭಾರೀ ಪ್ರಮಾಣದ ಬೆಳೆ. ಕೊರೆಯುವ ಚಳಿಯಲ್ಲಿ ಮೈಯಲ್ಲಿ ಬಿಸಿ ಹುಟ್ಟಿಸುವ ಆಹಾರ ಸಾಸಿವೆ. ಸಾಸಿವೆ ಸೊಪ್ಪನ್ನು ಅರೆದು ಮಾಡಿದ ಪಲ್ಯ ಮತ್ತು ಮುಸುಕಿನ ಜೋಳದ ರೊಟ್ಟಿ ಚಳಿಯನ್ನು ಓಡಿಸುವ ಜನಪ್ರಿಯ ಮತ್ತು ರುಚಿಕರ ಖಾದ್ಯ. ರಸ್ತೆ ಬದಿಯ ಡಾಬಾಗಳಿಂದ ಹಿಡಿದು ಪಂಚತಾರಾ ಹೋಟೆಲುಗಳೂ ಉಣಬಡಿಸುವ ಊಟ ’ಸರಸೋಂ ದಾ ಸಾಗ್- ಮಕ್ಕೀ ದೀ ರೋಟಿ’.

ಉತ್ತರ ಭಾರತದುದ್ದಗಲವನ್ನು ಶೀತ ಮಾರುತಗಳು ರಾಚಿ ಬಡಿಯತೊಡಗಿವೆ. ಇಂತಹ ಜನವರಿಯಲ್ಲಿ ಅಷ್ಟಿಷ್ಟು ಮಳೆ ಬೀಳುವುದುಂಟು. ಆದರೆ ಕಳೆದ ಮೂರು ದಿನಗಳಿಂದ ಅನಿರೀಕ್ಷಿತವಾಗಿ ದೊಡ್ಡ ಮಳೆಯೇ ಸುರಿಯತೊಡಗಿದೆ ಮತ್ತು ಸತತವಾಗಿ ಸುರಿಯತೊಡಗಿದೆ. ಮೇ-ಜೂನ್-ಜುಲೈ ತಿಂಗಳುಗಳಲ್ಲಿ ಉಗ್ರ ಉಷ್ಣಮಾರುತಗಳು ನೆಲವನ್ನು ಸುಟ್ಟು, ಕಟುವಾದ ಕರಕಲು ವಾಸನೆಯನ್ನು ಗಾಳಿಗೆ ತೂರಿ ಬೆರೆಸುತ್ತವೆ. ಇವುಗಳ ಪ್ರಕೋಪಕ್ಕೆ ಕಷ್ಟಜೀವಿಗಳು ಕಣ್ಣೀರಿಟ್ಟು ಸಾವುನೋವುಗಳು ಉಂಟಾಗುವುದು ದುರಂತ ವಾರ್ಷಿಕ ವಿಧಿ. ಚಳಿಗಾಲವೂ ಅಂತೆಯೇ. ಹಿಮಾಲಯದ ತಪ್ಪಲು ಸೀಮೆಯಲ್ಲಿ ಹಿಮ ಸುರಿಯತೊಡಗಿದರೆ ಬಯಲು ಸೀಮೆ ಗಡಗಡ ನಡುಗುತ್ತದೆ. ನಿರ್ಗತಿಕರು ರಾತ್ರಿ ವೇಳೆ ಕೈ ಕಾಯಿಸಿಕೊಳ್ಳಲು ಸರ್ಕಾರಗಳೇ ಹಾದಿಬೀದಿಗಳಲ್ಲಿ ಕಟ್ಟಿಗೆ ಉರಿಸುವ ಯೋಜನೆಗಳಿದ್ದವು.

ಕಳೆದ ಗುರುವಾರ ಶುಕ್ರವಾರ ಶೀತಮಾರುತಗಳು ಉತ್ತರದ ತಾಪಮಾನವನ್ನು ಎರಡು ಡಿಗ್ರಿಗಿಂತ ಕೆಳಗಿಳಿಸಿದ್ದವು. ಹದಿನೈದು ವರ್ಷಗಳ ದಾಖಲೆಯ ಚಳಿ. ದೆಹಲಿಯ ಗಡಿಗಳ ಹೆದ್ದಾರಿಗಳ ವಿಸ್ತಾರದಲ್ಲಿ ಆಕಾಶವನ್ನೇ ಹೊದ್ದು ಮೈ ಚಾಚಿದೆ ರೈತ ಪ್ರತಿಭಟನೆ. ಮಣ್ಣಿನ ಮಕ್ಕಳಿಗೆ ಚಳಿ ಮಳೆ ಬಿಸಿಲು ಲೆಕ್ಕವೇ ಅಲ್ಲ. ’ರಾಜ್ಯಗಳಳಿಯಲಿ, ರಾಜ್ಯಗಳುದಿಸಲಿ, ಹಾರಲಿ ಗದ್ದುಗೆ ಮುಕುಟಗಳು… ಬಿತ್ತುಳುವುದ ತಾನು ಬಿಡುವುದೆ ಇಲ್ಲ ಎಂಬ ಕವಿವಾಣಿಯ ಯೋಗಿಗಳು ರೈತರು- ಕೃಷಿ ಕಾರ್ಮಿಕರು. ಆದರೆ ಒಕ್ಕಲುತನದ ಮಳೆಗಾಳಿ ಚಳಿ ಬಿಸಿಲುಗಳ ಗೇಮೆಯ ನಂತರ ತಲೆ ಮರೆಸಿಕೊಂಡು ನಿದ್ರಿಸಲು ಸೂರೊಂದು ಇರುತ್ತದೆ. ಪ್ರತಿಭಟಿಸುತ್ತಿರುವ ರೈತರಿಗೆ ಅಂತಹ ಅನುಕೂಲವಿಲ್ಲ.

ಶೀತದೊಂದಿಗೆ ಮಳೆಯೂ ಸುರಿಯುತ್ತಿದ್ದು ಪ್ರತಿಭಟನಾನಿರತ ರೈತರ ಹಿಟ್ಟು, ಕಾಳು, ಬೇಳೆಗಳು, ಕಟ್ಟಿಗೆ-ಬೆರಣಿ ಉರುವಲುಗಳು, ಹಾಸಿಗೆ ಹೊದಿಕೆ ಬಟ್ಟೆ ಬರೆಗಳು ತೋಯ್ದು ಹೋಗಿವೆ. ದಿನಗಟ್ಟಲೆ ಸೂರ್ಯನ ದರ್ಶನವಿಲ್ಲದೆ ಮುಚ್ಚಿಕೊಂಡ ಆಗಸ. ಜಲನಿರೋಧಕ ಟೆಂಟುಗಳು, ತಾಡಪಾಲುಗಳು ಎಲ್ಲರ ಬಳಿಯೂ ಇಲ್ಲ. ಇದ್ದರೂ ಅವುಗಳಿಂದ ಚಳಿಯನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಟೆಂಟಿನೊಳಗೆ ನೆಲದ ಮೇಲೆ ನೀರು ಹರಿದು ನಿಲ್ಲುವುದನ್ನು ತಡೆಯಲಾಗುವುದಿಲ್ಲ. ಉತ್ತರದ ಚಳಿಯ ಈ ಉಪಟಳದ ತೀವ್ರತೆ ಅನುಭವಿಸಿದವರಿಗಷ್ಟೇ ತಿಳಿದೀತು.

ಅನ್ನ ಬೆಳೆಯುವ ರೈತರು-ಕೂಲಿಕಾರರು ದಿನಗಟ್ಟಲೆ ಈ ಸಂಕಟಕ್ಕೆ ಸಿಲುಕಿದ್ದಾರೆ. ಆದರೆ ಅವರಲ್ಲಿಯ ಪ್ರತಿಭಟನೆಯ ಕಾವು ತುಸುವೂ ಕುಂದಿಲ್ಲ. ವಯಸ್ಸು ಸಂದ ವೃದ್ಧರು ಮಕ್ಕಳು ಕೂಡ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವ ಸಂಘರ್ಷವಿದು. ಆತ್ಮಹತ್ಯೆಗಳೂ ಸೇರಿದಂತೆ ರೈತ ಪ್ರತಿಭಟನೆಯಲ್ಲಿ ಸಾವುಗಳು ನಿತ್ಯ ಸಂಭವಿಸುತ್ತಲೇ ಇವೆ. ಈ ಸಂಖ್ಯೆ ಐವತ್ತನ್ನು ದಾಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಒಕ್ಕಲುತನಕ್ಕೆ ಇಳಿದಿರುವ ಜವಾನ್-ಕಿಸಾನ್‌ರು ಕೂಡ ಈ ಪ್ರತಿಭಟನೆಯಲ್ಲಿದ್ದಾರೆ. ಜೈ ಜವಾನ್-ಜೈ ಕಿಸಾನ್ ಎಂದು ಘೋಷಣೆ ಹಾಕುವವರು ತಮ್ಮ ಕಾಮಾಲೆಗೆ ಔಷಧಿ ಸೇವಿಸಿ ಈ ಚಳವಳಿಯನ್ನು ನೋಡಬೇಕಿದೆ.

ಯೋಧರನ್ನೂ ರೈತರನ್ನೂ ಆಕಾಶದೆತ್ತರಕ್ಕೆ ಹೊಗಳುವ ದೊಡ್ಡ ವರ್ಗವೊಂದು ಈ ಚಳವಳಿಯನ್ನು ಹಳಿಯುವ ನೀಚತನಕ್ಕೆ ಇಳಿದಿದೆ. ದೇಶದ ಪ್ರಧಾನಮಂತ್ರಿಯವರ ಐವತ್ತಾರು ಅಂಗುಲದ ಭಾರೀ ಎದೆಯಲ್ಲಿ ದೆಹಲಿಯ ಗಡಿಗಳ ಬಯಲಿನಲ್ಲಿ ಬೀಡು ಬಿಟ್ಟಿರುವ ಕಿಸಾನ್- ಜವಾನ್‌ರ ಕುರಿತು ತುಸುವಾದರೂ ಪಸೆ ಕಂಡಿಲ್ಲದಿರುವುದು ಅತೀವ ವ್ಯಥೆಯ ಸಂಗತಿ. ಎಂತೆಂತಹ ವಿಷಯಗಳ ಕುರಿತು ಟ್ವೀಟ್ ಮಾಡುವ ಪ್ರಧಾನಿಯವರ ಕಲ್ಲು ಗುಂಡಿಗೆಯನ್ನು ರೈತರ ದುಮ್ಮಾನ ತಾಕಿಯೇ ಇಲ್ಲ! ಅವರು ಅಲ್ಲಿ ಚಳಿಮಳೆ ಗಾಳಿಯಲ್ಲಿ ಪಾಡುಪಡುತ್ತಿದ್ದರೆ ಇತ್ತ ಕೋಟಿನ ಮೇಲೆ ಕೋಟು ಉಟ್ಟು ಬೆಚ್ಚಗಿರುವ ದೇಶ ಆಳುವವರಿಗೆ ಮನಸು ಹೇಗೆ ಬರುತ್ತದೆಯೋ ಎಂಬುದು ಸೋಜಿಗದ ಸಂಗತಿ.

ಪ್ರತಿಭಟನಾನಿರತ ರೈತರು ಮೋದಿಯವರ ಶತ್ರುಗಳಲ್ಲ. ಅವರನ್ನು ಗದ್ದುಗೆಯಿಂದ ಇಳಿಸಬೇಕೆಂದು ಕಳೆದ ಆರು ವರ್ಷಗಳಲ್ಲಿ ಒಮ್ಮೆಯೂ ಚಕಾರ ಎತ್ತಿದವರಲ್ಲ. ಆದರೂ ಪ್ರಧಾನಿಯವರು ಅವರನ್ನು ವೈರಿಗಳಂತೆ ಕಾಣುತ್ತಿರುವುದು ದುಃಖದ ಸಂಗತಿ. ಭಾಷಣಗಳಲ್ಲಿ ರೈತನನ್ನು ಹೊಗಳಿ ಹೊನ್ನ ಶೂಲಕ್ಕೆ ಏರಿಸುವವರು ಆತ ಪ್ರತ್ಯಕ್ಷನಾಗಿ ಎದುರಾದರೆ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆಯಿದು. ’ಕಲ್ಲನಾಗರೆ ಕಂಡರೆ ಹಾಲೆರೆವರು, ಉಣ್ಣದ ಲಿಂಗಕ್ಕೆ ಬೋನವನಿಕ್ಕುವರು, ಉಣುವ ಜಂಗಮ ಬಂದರೆ ಪೋ ಪೋ ಎಂಬುವರು’ ಎಂಬ ವಚನದಂತೆ ಡಂಭಾಚಾರದ ಪರಾಕಾಷ್ಠೆಯಿದು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...