Homeಅಂಕಣಗಳುಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

ಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

- Advertisement -
- Advertisement -

ಸಕಾಲಕ್ಕೆ ಬೀಳುವ ಮಳೆಯನ್ನು ರೈತರು ಬಗೆ ಬಗೆಯಾಗಿ ಬಣ್ಣಿಸಿ ಸಂತಸಪಡುವುದುಂಟು. ಉತ್ತರ ಭಾರತದ ಕಡೆಗೆ ಇಂತಹ ಮಳೆ ಸುರಿದರೆ ತುಪ್ಪ ಸುರಿಯಿತು, ಬಂಗಾರವೇ ಭುವಿಗಿಳಿಯಿತು ಎಂದು ಉದ್ಗರಿಸುತ್ತಾರೆ. ಹಿಂದಿ-ಪಂಜಾಬಿ ಸೀಮೆಯ ಹೊಲಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಇದೀಗ ಕಾಣುವುದು ಸಾಸಿವೆ ಪೈರಿನ ಹಳದಿ ಹೂ ವಿಸ್ತಾರ. ದಕ್ಷಿಣದವರು ಒಗ್ಗರಣೆಗೆ-ಉಪ್ಪಿನಕಾಯಿಗೆ ಮಾತ್ರವೇ ಸಾಸಿವೆ ಬಳಸಿದರೆ, ಉತ್ತರಪ್ರದೇಶ, ಬಿಹಾರ, ರಾಜಸ್ತಾನ, ಹರಿಯಾಣ, ಪಂಜಾಬ್, ದೆಹಲಿ ಮಾತ್ರವಲ್ಲದೆ ಒಡಿಶಾ ಬಂಗಾಳ ಅಸ್ಸಾಮಿನಲ್ಲಿ ಅಡುಗೆ ಎಣ್ಣೆಯಾಗಿ ಸಾಸಿವೆ ಎಣ್ಣೆಯೇ ಜನಪ್ರಿಯ. ಹೀಗಾಗಿ ಸಾಸಿವೆ ಭಾರೀ ಪ್ರಮಾಣದ ಬೆಳೆ. ಕೊರೆಯುವ ಚಳಿಯಲ್ಲಿ ಮೈಯಲ್ಲಿ ಬಿಸಿ ಹುಟ್ಟಿಸುವ ಆಹಾರ ಸಾಸಿವೆ. ಸಾಸಿವೆ ಸೊಪ್ಪನ್ನು ಅರೆದು ಮಾಡಿದ ಪಲ್ಯ ಮತ್ತು ಮುಸುಕಿನ ಜೋಳದ ರೊಟ್ಟಿ ಚಳಿಯನ್ನು ಓಡಿಸುವ ಜನಪ್ರಿಯ ಮತ್ತು ರುಚಿಕರ ಖಾದ್ಯ. ರಸ್ತೆ ಬದಿಯ ಡಾಬಾಗಳಿಂದ ಹಿಡಿದು ಪಂಚತಾರಾ ಹೋಟೆಲುಗಳೂ ಉಣಬಡಿಸುವ ಊಟ ’ಸರಸೋಂ ದಾ ಸಾಗ್- ಮಕ್ಕೀ ದೀ ರೋಟಿ’.

ಉತ್ತರ ಭಾರತದುದ್ದಗಲವನ್ನು ಶೀತ ಮಾರುತಗಳು ರಾಚಿ ಬಡಿಯತೊಡಗಿವೆ. ಇಂತಹ ಜನವರಿಯಲ್ಲಿ ಅಷ್ಟಿಷ್ಟು ಮಳೆ ಬೀಳುವುದುಂಟು. ಆದರೆ ಕಳೆದ ಮೂರು ದಿನಗಳಿಂದ ಅನಿರೀಕ್ಷಿತವಾಗಿ ದೊಡ್ಡ ಮಳೆಯೇ ಸುರಿಯತೊಡಗಿದೆ ಮತ್ತು ಸತತವಾಗಿ ಸುರಿಯತೊಡಗಿದೆ. ಮೇ-ಜೂನ್-ಜುಲೈ ತಿಂಗಳುಗಳಲ್ಲಿ ಉಗ್ರ ಉಷ್ಣಮಾರುತಗಳು ನೆಲವನ್ನು ಸುಟ್ಟು, ಕಟುವಾದ ಕರಕಲು ವಾಸನೆಯನ್ನು ಗಾಳಿಗೆ ತೂರಿ ಬೆರೆಸುತ್ತವೆ. ಇವುಗಳ ಪ್ರಕೋಪಕ್ಕೆ ಕಷ್ಟಜೀವಿಗಳು ಕಣ್ಣೀರಿಟ್ಟು ಸಾವುನೋವುಗಳು ಉಂಟಾಗುವುದು ದುರಂತ ವಾರ್ಷಿಕ ವಿಧಿ. ಚಳಿಗಾಲವೂ ಅಂತೆಯೇ. ಹಿಮಾಲಯದ ತಪ್ಪಲು ಸೀಮೆಯಲ್ಲಿ ಹಿಮ ಸುರಿಯತೊಡಗಿದರೆ ಬಯಲು ಸೀಮೆ ಗಡಗಡ ನಡುಗುತ್ತದೆ. ನಿರ್ಗತಿಕರು ರಾತ್ರಿ ವೇಳೆ ಕೈ ಕಾಯಿಸಿಕೊಳ್ಳಲು ಸರ್ಕಾರಗಳೇ ಹಾದಿಬೀದಿಗಳಲ್ಲಿ ಕಟ್ಟಿಗೆ ಉರಿಸುವ ಯೋಜನೆಗಳಿದ್ದವು.

ಕಳೆದ ಗುರುವಾರ ಶುಕ್ರವಾರ ಶೀತಮಾರುತಗಳು ಉತ್ತರದ ತಾಪಮಾನವನ್ನು ಎರಡು ಡಿಗ್ರಿಗಿಂತ ಕೆಳಗಿಳಿಸಿದ್ದವು. ಹದಿನೈದು ವರ್ಷಗಳ ದಾಖಲೆಯ ಚಳಿ. ದೆಹಲಿಯ ಗಡಿಗಳ ಹೆದ್ದಾರಿಗಳ ವಿಸ್ತಾರದಲ್ಲಿ ಆಕಾಶವನ್ನೇ ಹೊದ್ದು ಮೈ ಚಾಚಿದೆ ರೈತ ಪ್ರತಿಭಟನೆ. ಮಣ್ಣಿನ ಮಕ್ಕಳಿಗೆ ಚಳಿ ಮಳೆ ಬಿಸಿಲು ಲೆಕ್ಕವೇ ಅಲ್ಲ. ’ರಾಜ್ಯಗಳಳಿಯಲಿ, ರಾಜ್ಯಗಳುದಿಸಲಿ, ಹಾರಲಿ ಗದ್ದುಗೆ ಮುಕುಟಗಳು… ಬಿತ್ತುಳುವುದ ತಾನು ಬಿಡುವುದೆ ಇಲ್ಲ ಎಂಬ ಕವಿವಾಣಿಯ ಯೋಗಿಗಳು ರೈತರು- ಕೃಷಿ ಕಾರ್ಮಿಕರು. ಆದರೆ ಒಕ್ಕಲುತನದ ಮಳೆಗಾಳಿ ಚಳಿ ಬಿಸಿಲುಗಳ ಗೇಮೆಯ ನಂತರ ತಲೆ ಮರೆಸಿಕೊಂಡು ನಿದ್ರಿಸಲು ಸೂರೊಂದು ಇರುತ್ತದೆ. ಪ್ರತಿಭಟಿಸುತ್ತಿರುವ ರೈತರಿಗೆ ಅಂತಹ ಅನುಕೂಲವಿಲ್ಲ.

ಶೀತದೊಂದಿಗೆ ಮಳೆಯೂ ಸುರಿಯುತ್ತಿದ್ದು ಪ್ರತಿಭಟನಾನಿರತ ರೈತರ ಹಿಟ್ಟು, ಕಾಳು, ಬೇಳೆಗಳು, ಕಟ್ಟಿಗೆ-ಬೆರಣಿ ಉರುವಲುಗಳು, ಹಾಸಿಗೆ ಹೊದಿಕೆ ಬಟ್ಟೆ ಬರೆಗಳು ತೋಯ್ದು ಹೋಗಿವೆ. ದಿನಗಟ್ಟಲೆ ಸೂರ್ಯನ ದರ್ಶನವಿಲ್ಲದೆ ಮುಚ್ಚಿಕೊಂಡ ಆಗಸ. ಜಲನಿರೋಧಕ ಟೆಂಟುಗಳು, ತಾಡಪಾಲುಗಳು ಎಲ್ಲರ ಬಳಿಯೂ ಇಲ್ಲ. ಇದ್ದರೂ ಅವುಗಳಿಂದ ಚಳಿಯನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಟೆಂಟಿನೊಳಗೆ ನೆಲದ ಮೇಲೆ ನೀರು ಹರಿದು ನಿಲ್ಲುವುದನ್ನು ತಡೆಯಲಾಗುವುದಿಲ್ಲ. ಉತ್ತರದ ಚಳಿಯ ಈ ಉಪಟಳದ ತೀವ್ರತೆ ಅನುಭವಿಸಿದವರಿಗಷ್ಟೇ ತಿಳಿದೀತು.

ಅನ್ನ ಬೆಳೆಯುವ ರೈತರು-ಕೂಲಿಕಾರರು ದಿನಗಟ್ಟಲೆ ಈ ಸಂಕಟಕ್ಕೆ ಸಿಲುಕಿದ್ದಾರೆ. ಆದರೆ ಅವರಲ್ಲಿಯ ಪ್ರತಿಭಟನೆಯ ಕಾವು ತುಸುವೂ ಕುಂದಿಲ್ಲ. ವಯಸ್ಸು ಸಂದ ವೃದ್ಧರು ಮಕ್ಕಳು ಕೂಡ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವ ಸಂಘರ್ಷವಿದು. ಆತ್ಮಹತ್ಯೆಗಳೂ ಸೇರಿದಂತೆ ರೈತ ಪ್ರತಿಭಟನೆಯಲ್ಲಿ ಸಾವುಗಳು ನಿತ್ಯ ಸಂಭವಿಸುತ್ತಲೇ ಇವೆ. ಈ ಸಂಖ್ಯೆ ಐವತ್ತನ್ನು ದಾಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಒಕ್ಕಲುತನಕ್ಕೆ ಇಳಿದಿರುವ ಜವಾನ್-ಕಿಸಾನ್‌ರು ಕೂಡ ಈ ಪ್ರತಿಭಟನೆಯಲ್ಲಿದ್ದಾರೆ. ಜೈ ಜವಾನ್-ಜೈ ಕಿಸಾನ್ ಎಂದು ಘೋಷಣೆ ಹಾಕುವವರು ತಮ್ಮ ಕಾಮಾಲೆಗೆ ಔಷಧಿ ಸೇವಿಸಿ ಈ ಚಳವಳಿಯನ್ನು ನೋಡಬೇಕಿದೆ.

ಯೋಧರನ್ನೂ ರೈತರನ್ನೂ ಆಕಾಶದೆತ್ತರಕ್ಕೆ ಹೊಗಳುವ ದೊಡ್ಡ ವರ್ಗವೊಂದು ಈ ಚಳವಳಿಯನ್ನು ಹಳಿಯುವ ನೀಚತನಕ್ಕೆ ಇಳಿದಿದೆ. ದೇಶದ ಪ್ರಧಾನಮಂತ್ರಿಯವರ ಐವತ್ತಾರು ಅಂಗುಲದ ಭಾರೀ ಎದೆಯಲ್ಲಿ ದೆಹಲಿಯ ಗಡಿಗಳ ಬಯಲಿನಲ್ಲಿ ಬೀಡು ಬಿಟ್ಟಿರುವ ಕಿಸಾನ್- ಜವಾನ್‌ರ ಕುರಿತು ತುಸುವಾದರೂ ಪಸೆ ಕಂಡಿಲ್ಲದಿರುವುದು ಅತೀವ ವ್ಯಥೆಯ ಸಂಗತಿ. ಎಂತೆಂತಹ ವಿಷಯಗಳ ಕುರಿತು ಟ್ವೀಟ್ ಮಾಡುವ ಪ್ರಧಾನಿಯವರ ಕಲ್ಲು ಗುಂಡಿಗೆಯನ್ನು ರೈತರ ದುಮ್ಮಾನ ತಾಕಿಯೇ ಇಲ್ಲ! ಅವರು ಅಲ್ಲಿ ಚಳಿಮಳೆ ಗಾಳಿಯಲ್ಲಿ ಪಾಡುಪಡುತ್ತಿದ್ದರೆ ಇತ್ತ ಕೋಟಿನ ಮೇಲೆ ಕೋಟು ಉಟ್ಟು ಬೆಚ್ಚಗಿರುವ ದೇಶ ಆಳುವವರಿಗೆ ಮನಸು ಹೇಗೆ ಬರುತ್ತದೆಯೋ ಎಂಬುದು ಸೋಜಿಗದ ಸಂಗತಿ.

ಪ್ರತಿಭಟನಾನಿರತ ರೈತರು ಮೋದಿಯವರ ಶತ್ರುಗಳಲ್ಲ. ಅವರನ್ನು ಗದ್ದುಗೆಯಿಂದ ಇಳಿಸಬೇಕೆಂದು ಕಳೆದ ಆರು ವರ್ಷಗಳಲ್ಲಿ ಒಮ್ಮೆಯೂ ಚಕಾರ ಎತ್ತಿದವರಲ್ಲ. ಆದರೂ ಪ್ರಧಾನಿಯವರು ಅವರನ್ನು ವೈರಿಗಳಂತೆ ಕಾಣುತ್ತಿರುವುದು ದುಃಖದ ಸಂಗತಿ. ಭಾಷಣಗಳಲ್ಲಿ ರೈತನನ್ನು ಹೊಗಳಿ ಹೊನ್ನ ಶೂಲಕ್ಕೆ ಏರಿಸುವವರು ಆತ ಪ್ರತ್ಯಕ್ಷನಾಗಿ ಎದುರಾದರೆ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆಯಿದು. ’ಕಲ್ಲನಾಗರೆ ಕಂಡರೆ ಹಾಲೆರೆವರು, ಉಣ್ಣದ ಲಿಂಗಕ್ಕೆ ಬೋನವನಿಕ್ಕುವರು, ಉಣುವ ಜಂಗಮ ಬಂದರೆ ಪೋ ಪೋ ಎಂಬುವರು’ ಎಂಬ ವಚನದಂತೆ ಡಂಭಾಚಾರದ ಪರಾಕಾಷ್ಠೆಯಿದು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...