Homeಅಂಕಣಗಳುಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

ಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

- Advertisement -
- Advertisement -

ಸಕಾಲಕ್ಕೆ ಬೀಳುವ ಮಳೆಯನ್ನು ರೈತರು ಬಗೆ ಬಗೆಯಾಗಿ ಬಣ್ಣಿಸಿ ಸಂತಸಪಡುವುದುಂಟು. ಉತ್ತರ ಭಾರತದ ಕಡೆಗೆ ಇಂತಹ ಮಳೆ ಸುರಿದರೆ ತುಪ್ಪ ಸುರಿಯಿತು, ಬಂಗಾರವೇ ಭುವಿಗಿಳಿಯಿತು ಎಂದು ಉದ್ಗರಿಸುತ್ತಾರೆ. ಹಿಂದಿ-ಪಂಜಾಬಿ ಸೀಮೆಯ ಹೊಲಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಇದೀಗ ಕಾಣುವುದು ಸಾಸಿವೆ ಪೈರಿನ ಹಳದಿ ಹೂ ವಿಸ್ತಾರ. ದಕ್ಷಿಣದವರು ಒಗ್ಗರಣೆಗೆ-ಉಪ್ಪಿನಕಾಯಿಗೆ ಮಾತ್ರವೇ ಸಾಸಿವೆ ಬಳಸಿದರೆ, ಉತ್ತರಪ್ರದೇಶ, ಬಿಹಾರ, ರಾಜಸ್ತಾನ, ಹರಿಯಾಣ, ಪಂಜಾಬ್, ದೆಹಲಿ ಮಾತ್ರವಲ್ಲದೆ ಒಡಿಶಾ ಬಂಗಾಳ ಅಸ್ಸಾಮಿನಲ್ಲಿ ಅಡುಗೆ ಎಣ್ಣೆಯಾಗಿ ಸಾಸಿವೆ ಎಣ್ಣೆಯೇ ಜನಪ್ರಿಯ. ಹೀಗಾಗಿ ಸಾಸಿವೆ ಭಾರೀ ಪ್ರಮಾಣದ ಬೆಳೆ. ಕೊರೆಯುವ ಚಳಿಯಲ್ಲಿ ಮೈಯಲ್ಲಿ ಬಿಸಿ ಹುಟ್ಟಿಸುವ ಆಹಾರ ಸಾಸಿವೆ. ಸಾಸಿವೆ ಸೊಪ್ಪನ್ನು ಅರೆದು ಮಾಡಿದ ಪಲ್ಯ ಮತ್ತು ಮುಸುಕಿನ ಜೋಳದ ರೊಟ್ಟಿ ಚಳಿಯನ್ನು ಓಡಿಸುವ ಜನಪ್ರಿಯ ಮತ್ತು ರುಚಿಕರ ಖಾದ್ಯ. ರಸ್ತೆ ಬದಿಯ ಡಾಬಾಗಳಿಂದ ಹಿಡಿದು ಪಂಚತಾರಾ ಹೋಟೆಲುಗಳೂ ಉಣಬಡಿಸುವ ಊಟ ’ಸರಸೋಂ ದಾ ಸಾಗ್- ಮಕ್ಕೀ ದೀ ರೋಟಿ’.

ಉತ್ತರ ಭಾರತದುದ್ದಗಲವನ್ನು ಶೀತ ಮಾರುತಗಳು ರಾಚಿ ಬಡಿಯತೊಡಗಿವೆ. ಇಂತಹ ಜನವರಿಯಲ್ಲಿ ಅಷ್ಟಿಷ್ಟು ಮಳೆ ಬೀಳುವುದುಂಟು. ಆದರೆ ಕಳೆದ ಮೂರು ದಿನಗಳಿಂದ ಅನಿರೀಕ್ಷಿತವಾಗಿ ದೊಡ್ಡ ಮಳೆಯೇ ಸುರಿಯತೊಡಗಿದೆ ಮತ್ತು ಸತತವಾಗಿ ಸುರಿಯತೊಡಗಿದೆ. ಮೇ-ಜೂನ್-ಜುಲೈ ತಿಂಗಳುಗಳಲ್ಲಿ ಉಗ್ರ ಉಷ್ಣಮಾರುತಗಳು ನೆಲವನ್ನು ಸುಟ್ಟು, ಕಟುವಾದ ಕರಕಲು ವಾಸನೆಯನ್ನು ಗಾಳಿಗೆ ತೂರಿ ಬೆರೆಸುತ್ತವೆ. ಇವುಗಳ ಪ್ರಕೋಪಕ್ಕೆ ಕಷ್ಟಜೀವಿಗಳು ಕಣ್ಣೀರಿಟ್ಟು ಸಾವುನೋವುಗಳು ಉಂಟಾಗುವುದು ದುರಂತ ವಾರ್ಷಿಕ ವಿಧಿ. ಚಳಿಗಾಲವೂ ಅಂತೆಯೇ. ಹಿಮಾಲಯದ ತಪ್ಪಲು ಸೀಮೆಯಲ್ಲಿ ಹಿಮ ಸುರಿಯತೊಡಗಿದರೆ ಬಯಲು ಸೀಮೆ ಗಡಗಡ ನಡುಗುತ್ತದೆ. ನಿರ್ಗತಿಕರು ರಾತ್ರಿ ವೇಳೆ ಕೈ ಕಾಯಿಸಿಕೊಳ್ಳಲು ಸರ್ಕಾರಗಳೇ ಹಾದಿಬೀದಿಗಳಲ್ಲಿ ಕಟ್ಟಿಗೆ ಉರಿಸುವ ಯೋಜನೆಗಳಿದ್ದವು.

ಕಳೆದ ಗುರುವಾರ ಶುಕ್ರವಾರ ಶೀತಮಾರುತಗಳು ಉತ್ತರದ ತಾಪಮಾನವನ್ನು ಎರಡು ಡಿಗ್ರಿಗಿಂತ ಕೆಳಗಿಳಿಸಿದ್ದವು. ಹದಿನೈದು ವರ್ಷಗಳ ದಾಖಲೆಯ ಚಳಿ. ದೆಹಲಿಯ ಗಡಿಗಳ ಹೆದ್ದಾರಿಗಳ ವಿಸ್ತಾರದಲ್ಲಿ ಆಕಾಶವನ್ನೇ ಹೊದ್ದು ಮೈ ಚಾಚಿದೆ ರೈತ ಪ್ರತಿಭಟನೆ. ಮಣ್ಣಿನ ಮಕ್ಕಳಿಗೆ ಚಳಿ ಮಳೆ ಬಿಸಿಲು ಲೆಕ್ಕವೇ ಅಲ್ಲ. ’ರಾಜ್ಯಗಳಳಿಯಲಿ, ರಾಜ್ಯಗಳುದಿಸಲಿ, ಹಾರಲಿ ಗದ್ದುಗೆ ಮುಕುಟಗಳು… ಬಿತ್ತುಳುವುದ ತಾನು ಬಿಡುವುದೆ ಇಲ್ಲ ಎಂಬ ಕವಿವಾಣಿಯ ಯೋಗಿಗಳು ರೈತರು- ಕೃಷಿ ಕಾರ್ಮಿಕರು. ಆದರೆ ಒಕ್ಕಲುತನದ ಮಳೆಗಾಳಿ ಚಳಿ ಬಿಸಿಲುಗಳ ಗೇಮೆಯ ನಂತರ ತಲೆ ಮರೆಸಿಕೊಂಡು ನಿದ್ರಿಸಲು ಸೂರೊಂದು ಇರುತ್ತದೆ. ಪ್ರತಿಭಟಿಸುತ್ತಿರುವ ರೈತರಿಗೆ ಅಂತಹ ಅನುಕೂಲವಿಲ್ಲ.

ಶೀತದೊಂದಿಗೆ ಮಳೆಯೂ ಸುರಿಯುತ್ತಿದ್ದು ಪ್ರತಿಭಟನಾನಿರತ ರೈತರ ಹಿಟ್ಟು, ಕಾಳು, ಬೇಳೆಗಳು, ಕಟ್ಟಿಗೆ-ಬೆರಣಿ ಉರುವಲುಗಳು, ಹಾಸಿಗೆ ಹೊದಿಕೆ ಬಟ್ಟೆ ಬರೆಗಳು ತೋಯ್ದು ಹೋಗಿವೆ. ದಿನಗಟ್ಟಲೆ ಸೂರ್ಯನ ದರ್ಶನವಿಲ್ಲದೆ ಮುಚ್ಚಿಕೊಂಡ ಆಗಸ. ಜಲನಿರೋಧಕ ಟೆಂಟುಗಳು, ತಾಡಪಾಲುಗಳು ಎಲ್ಲರ ಬಳಿಯೂ ಇಲ್ಲ. ಇದ್ದರೂ ಅವುಗಳಿಂದ ಚಳಿಯನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಟೆಂಟಿನೊಳಗೆ ನೆಲದ ಮೇಲೆ ನೀರು ಹರಿದು ನಿಲ್ಲುವುದನ್ನು ತಡೆಯಲಾಗುವುದಿಲ್ಲ. ಉತ್ತರದ ಚಳಿಯ ಈ ಉಪಟಳದ ತೀವ್ರತೆ ಅನುಭವಿಸಿದವರಿಗಷ್ಟೇ ತಿಳಿದೀತು.

ಅನ್ನ ಬೆಳೆಯುವ ರೈತರು-ಕೂಲಿಕಾರರು ದಿನಗಟ್ಟಲೆ ಈ ಸಂಕಟಕ್ಕೆ ಸಿಲುಕಿದ್ದಾರೆ. ಆದರೆ ಅವರಲ್ಲಿಯ ಪ್ರತಿಭಟನೆಯ ಕಾವು ತುಸುವೂ ಕುಂದಿಲ್ಲ. ವಯಸ್ಸು ಸಂದ ವೃದ್ಧರು ಮಕ್ಕಳು ಕೂಡ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವ ಸಂಘರ್ಷವಿದು. ಆತ್ಮಹತ್ಯೆಗಳೂ ಸೇರಿದಂತೆ ರೈತ ಪ್ರತಿಭಟನೆಯಲ್ಲಿ ಸಾವುಗಳು ನಿತ್ಯ ಸಂಭವಿಸುತ್ತಲೇ ಇವೆ. ಈ ಸಂಖ್ಯೆ ಐವತ್ತನ್ನು ದಾಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಒಕ್ಕಲುತನಕ್ಕೆ ಇಳಿದಿರುವ ಜವಾನ್-ಕಿಸಾನ್‌ರು ಕೂಡ ಈ ಪ್ರತಿಭಟನೆಯಲ್ಲಿದ್ದಾರೆ. ಜೈ ಜವಾನ್-ಜೈ ಕಿಸಾನ್ ಎಂದು ಘೋಷಣೆ ಹಾಕುವವರು ತಮ್ಮ ಕಾಮಾಲೆಗೆ ಔಷಧಿ ಸೇವಿಸಿ ಈ ಚಳವಳಿಯನ್ನು ನೋಡಬೇಕಿದೆ.

ಯೋಧರನ್ನೂ ರೈತರನ್ನೂ ಆಕಾಶದೆತ್ತರಕ್ಕೆ ಹೊಗಳುವ ದೊಡ್ಡ ವರ್ಗವೊಂದು ಈ ಚಳವಳಿಯನ್ನು ಹಳಿಯುವ ನೀಚತನಕ್ಕೆ ಇಳಿದಿದೆ. ದೇಶದ ಪ್ರಧಾನಮಂತ್ರಿಯವರ ಐವತ್ತಾರು ಅಂಗುಲದ ಭಾರೀ ಎದೆಯಲ್ಲಿ ದೆಹಲಿಯ ಗಡಿಗಳ ಬಯಲಿನಲ್ಲಿ ಬೀಡು ಬಿಟ್ಟಿರುವ ಕಿಸಾನ್- ಜವಾನ್‌ರ ಕುರಿತು ತುಸುವಾದರೂ ಪಸೆ ಕಂಡಿಲ್ಲದಿರುವುದು ಅತೀವ ವ್ಯಥೆಯ ಸಂಗತಿ. ಎಂತೆಂತಹ ವಿಷಯಗಳ ಕುರಿತು ಟ್ವೀಟ್ ಮಾಡುವ ಪ್ರಧಾನಿಯವರ ಕಲ್ಲು ಗುಂಡಿಗೆಯನ್ನು ರೈತರ ದುಮ್ಮಾನ ತಾಕಿಯೇ ಇಲ್ಲ! ಅವರು ಅಲ್ಲಿ ಚಳಿಮಳೆ ಗಾಳಿಯಲ್ಲಿ ಪಾಡುಪಡುತ್ತಿದ್ದರೆ ಇತ್ತ ಕೋಟಿನ ಮೇಲೆ ಕೋಟು ಉಟ್ಟು ಬೆಚ್ಚಗಿರುವ ದೇಶ ಆಳುವವರಿಗೆ ಮನಸು ಹೇಗೆ ಬರುತ್ತದೆಯೋ ಎಂಬುದು ಸೋಜಿಗದ ಸಂಗತಿ.

ಪ್ರತಿಭಟನಾನಿರತ ರೈತರು ಮೋದಿಯವರ ಶತ್ರುಗಳಲ್ಲ. ಅವರನ್ನು ಗದ್ದುಗೆಯಿಂದ ಇಳಿಸಬೇಕೆಂದು ಕಳೆದ ಆರು ವರ್ಷಗಳಲ್ಲಿ ಒಮ್ಮೆಯೂ ಚಕಾರ ಎತ್ತಿದವರಲ್ಲ. ಆದರೂ ಪ್ರಧಾನಿಯವರು ಅವರನ್ನು ವೈರಿಗಳಂತೆ ಕಾಣುತ್ತಿರುವುದು ದುಃಖದ ಸಂಗತಿ. ಭಾಷಣಗಳಲ್ಲಿ ರೈತನನ್ನು ಹೊಗಳಿ ಹೊನ್ನ ಶೂಲಕ್ಕೆ ಏರಿಸುವವರು ಆತ ಪ್ರತ್ಯಕ್ಷನಾಗಿ ಎದುರಾದರೆ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆಯಿದು. ’ಕಲ್ಲನಾಗರೆ ಕಂಡರೆ ಹಾಲೆರೆವರು, ಉಣ್ಣದ ಲಿಂಗಕ್ಕೆ ಬೋನವನಿಕ್ಕುವರು, ಉಣುವ ಜಂಗಮ ಬಂದರೆ ಪೋ ಪೋ ಎಂಬುವರು’ ಎಂಬ ವಚನದಂತೆ ಡಂಭಾಚಾರದ ಪರಾಕಾಷ್ಠೆಯಿದು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...