Homeಅಂಕಣಗಳುಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

ಚಳಿಮಳೆಗೆ ಬಗ್ಗದ ರೈತರೂ ಮತ್ತು ಬರ ಬಿದ್ದ 56 ಅಂಗುಲದ ಎದೆಯೂ: ಉಮಾಪತಿ ಡಿ

- Advertisement -
- Advertisement -

ಸಕಾಲಕ್ಕೆ ಬೀಳುವ ಮಳೆಯನ್ನು ರೈತರು ಬಗೆ ಬಗೆಯಾಗಿ ಬಣ್ಣಿಸಿ ಸಂತಸಪಡುವುದುಂಟು. ಉತ್ತರ ಭಾರತದ ಕಡೆಗೆ ಇಂತಹ ಮಳೆ ಸುರಿದರೆ ತುಪ್ಪ ಸುರಿಯಿತು, ಬಂಗಾರವೇ ಭುವಿಗಿಳಿಯಿತು ಎಂದು ಉದ್ಗರಿಸುತ್ತಾರೆ. ಹಿಂದಿ-ಪಂಜಾಬಿ ಸೀಮೆಯ ಹೊಲಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಇದೀಗ ಕಾಣುವುದು ಸಾಸಿವೆ ಪೈರಿನ ಹಳದಿ ಹೂ ವಿಸ್ತಾರ. ದಕ್ಷಿಣದವರು ಒಗ್ಗರಣೆಗೆ-ಉಪ್ಪಿನಕಾಯಿಗೆ ಮಾತ್ರವೇ ಸಾಸಿವೆ ಬಳಸಿದರೆ, ಉತ್ತರಪ್ರದೇಶ, ಬಿಹಾರ, ರಾಜಸ್ತಾನ, ಹರಿಯಾಣ, ಪಂಜಾಬ್, ದೆಹಲಿ ಮಾತ್ರವಲ್ಲದೆ ಒಡಿಶಾ ಬಂಗಾಳ ಅಸ್ಸಾಮಿನಲ್ಲಿ ಅಡುಗೆ ಎಣ್ಣೆಯಾಗಿ ಸಾಸಿವೆ ಎಣ್ಣೆಯೇ ಜನಪ್ರಿಯ. ಹೀಗಾಗಿ ಸಾಸಿವೆ ಭಾರೀ ಪ್ರಮಾಣದ ಬೆಳೆ. ಕೊರೆಯುವ ಚಳಿಯಲ್ಲಿ ಮೈಯಲ್ಲಿ ಬಿಸಿ ಹುಟ್ಟಿಸುವ ಆಹಾರ ಸಾಸಿವೆ. ಸಾಸಿವೆ ಸೊಪ್ಪನ್ನು ಅರೆದು ಮಾಡಿದ ಪಲ್ಯ ಮತ್ತು ಮುಸುಕಿನ ಜೋಳದ ರೊಟ್ಟಿ ಚಳಿಯನ್ನು ಓಡಿಸುವ ಜನಪ್ರಿಯ ಮತ್ತು ರುಚಿಕರ ಖಾದ್ಯ. ರಸ್ತೆ ಬದಿಯ ಡಾಬಾಗಳಿಂದ ಹಿಡಿದು ಪಂಚತಾರಾ ಹೋಟೆಲುಗಳೂ ಉಣಬಡಿಸುವ ಊಟ ’ಸರಸೋಂ ದಾ ಸಾಗ್- ಮಕ್ಕೀ ದೀ ರೋಟಿ’.

ಉತ್ತರ ಭಾರತದುದ್ದಗಲವನ್ನು ಶೀತ ಮಾರುತಗಳು ರಾಚಿ ಬಡಿಯತೊಡಗಿವೆ. ಇಂತಹ ಜನವರಿಯಲ್ಲಿ ಅಷ್ಟಿಷ್ಟು ಮಳೆ ಬೀಳುವುದುಂಟು. ಆದರೆ ಕಳೆದ ಮೂರು ದಿನಗಳಿಂದ ಅನಿರೀಕ್ಷಿತವಾಗಿ ದೊಡ್ಡ ಮಳೆಯೇ ಸುರಿಯತೊಡಗಿದೆ ಮತ್ತು ಸತತವಾಗಿ ಸುರಿಯತೊಡಗಿದೆ. ಮೇ-ಜೂನ್-ಜುಲೈ ತಿಂಗಳುಗಳಲ್ಲಿ ಉಗ್ರ ಉಷ್ಣಮಾರುತಗಳು ನೆಲವನ್ನು ಸುಟ್ಟು, ಕಟುವಾದ ಕರಕಲು ವಾಸನೆಯನ್ನು ಗಾಳಿಗೆ ತೂರಿ ಬೆರೆಸುತ್ತವೆ. ಇವುಗಳ ಪ್ರಕೋಪಕ್ಕೆ ಕಷ್ಟಜೀವಿಗಳು ಕಣ್ಣೀರಿಟ್ಟು ಸಾವುನೋವುಗಳು ಉಂಟಾಗುವುದು ದುರಂತ ವಾರ್ಷಿಕ ವಿಧಿ. ಚಳಿಗಾಲವೂ ಅಂತೆಯೇ. ಹಿಮಾಲಯದ ತಪ್ಪಲು ಸೀಮೆಯಲ್ಲಿ ಹಿಮ ಸುರಿಯತೊಡಗಿದರೆ ಬಯಲು ಸೀಮೆ ಗಡಗಡ ನಡುಗುತ್ತದೆ. ನಿರ್ಗತಿಕರು ರಾತ್ರಿ ವೇಳೆ ಕೈ ಕಾಯಿಸಿಕೊಳ್ಳಲು ಸರ್ಕಾರಗಳೇ ಹಾದಿಬೀದಿಗಳಲ್ಲಿ ಕಟ್ಟಿಗೆ ಉರಿಸುವ ಯೋಜನೆಗಳಿದ್ದವು.

ಕಳೆದ ಗುರುವಾರ ಶುಕ್ರವಾರ ಶೀತಮಾರುತಗಳು ಉತ್ತರದ ತಾಪಮಾನವನ್ನು ಎರಡು ಡಿಗ್ರಿಗಿಂತ ಕೆಳಗಿಳಿಸಿದ್ದವು. ಹದಿನೈದು ವರ್ಷಗಳ ದಾಖಲೆಯ ಚಳಿ. ದೆಹಲಿಯ ಗಡಿಗಳ ಹೆದ್ದಾರಿಗಳ ವಿಸ್ತಾರದಲ್ಲಿ ಆಕಾಶವನ್ನೇ ಹೊದ್ದು ಮೈ ಚಾಚಿದೆ ರೈತ ಪ್ರತಿಭಟನೆ. ಮಣ್ಣಿನ ಮಕ್ಕಳಿಗೆ ಚಳಿ ಮಳೆ ಬಿಸಿಲು ಲೆಕ್ಕವೇ ಅಲ್ಲ. ’ರಾಜ್ಯಗಳಳಿಯಲಿ, ರಾಜ್ಯಗಳುದಿಸಲಿ, ಹಾರಲಿ ಗದ್ದುಗೆ ಮುಕುಟಗಳು… ಬಿತ್ತುಳುವುದ ತಾನು ಬಿಡುವುದೆ ಇಲ್ಲ ಎಂಬ ಕವಿವಾಣಿಯ ಯೋಗಿಗಳು ರೈತರು- ಕೃಷಿ ಕಾರ್ಮಿಕರು. ಆದರೆ ಒಕ್ಕಲುತನದ ಮಳೆಗಾಳಿ ಚಳಿ ಬಿಸಿಲುಗಳ ಗೇಮೆಯ ನಂತರ ತಲೆ ಮರೆಸಿಕೊಂಡು ನಿದ್ರಿಸಲು ಸೂರೊಂದು ಇರುತ್ತದೆ. ಪ್ರತಿಭಟಿಸುತ್ತಿರುವ ರೈತರಿಗೆ ಅಂತಹ ಅನುಕೂಲವಿಲ್ಲ.

ಶೀತದೊಂದಿಗೆ ಮಳೆಯೂ ಸುರಿಯುತ್ತಿದ್ದು ಪ್ರತಿಭಟನಾನಿರತ ರೈತರ ಹಿಟ್ಟು, ಕಾಳು, ಬೇಳೆಗಳು, ಕಟ್ಟಿಗೆ-ಬೆರಣಿ ಉರುವಲುಗಳು, ಹಾಸಿಗೆ ಹೊದಿಕೆ ಬಟ್ಟೆ ಬರೆಗಳು ತೋಯ್ದು ಹೋಗಿವೆ. ದಿನಗಟ್ಟಲೆ ಸೂರ್ಯನ ದರ್ಶನವಿಲ್ಲದೆ ಮುಚ್ಚಿಕೊಂಡ ಆಗಸ. ಜಲನಿರೋಧಕ ಟೆಂಟುಗಳು, ತಾಡಪಾಲುಗಳು ಎಲ್ಲರ ಬಳಿಯೂ ಇಲ್ಲ. ಇದ್ದರೂ ಅವುಗಳಿಂದ ಚಳಿಯನ್ನು ತಪ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಟೆಂಟಿನೊಳಗೆ ನೆಲದ ಮೇಲೆ ನೀರು ಹರಿದು ನಿಲ್ಲುವುದನ್ನು ತಡೆಯಲಾಗುವುದಿಲ್ಲ. ಉತ್ತರದ ಚಳಿಯ ಈ ಉಪಟಳದ ತೀವ್ರತೆ ಅನುಭವಿಸಿದವರಿಗಷ್ಟೇ ತಿಳಿದೀತು.

ಅನ್ನ ಬೆಳೆಯುವ ರೈತರು-ಕೂಲಿಕಾರರು ದಿನಗಟ್ಟಲೆ ಈ ಸಂಕಟಕ್ಕೆ ಸಿಲುಕಿದ್ದಾರೆ. ಆದರೆ ಅವರಲ್ಲಿಯ ಪ್ರತಿಭಟನೆಯ ಕಾವು ತುಸುವೂ ಕುಂದಿಲ್ಲ. ವಯಸ್ಸು ಸಂದ ವೃದ್ಧರು ಮಕ್ಕಳು ಕೂಡ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿರುವ ಸಂಘರ್ಷವಿದು. ಆತ್ಮಹತ್ಯೆಗಳೂ ಸೇರಿದಂತೆ ರೈತ ಪ್ರತಿಭಟನೆಯಲ್ಲಿ ಸಾವುಗಳು ನಿತ್ಯ ಸಂಭವಿಸುತ್ತಲೇ ಇವೆ. ಈ ಸಂಖ್ಯೆ ಐವತ್ತನ್ನು ದಾಟಿದೆ. ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಒಕ್ಕಲುತನಕ್ಕೆ ಇಳಿದಿರುವ ಜವಾನ್-ಕಿಸಾನ್‌ರು ಕೂಡ ಈ ಪ್ರತಿಭಟನೆಯಲ್ಲಿದ್ದಾರೆ. ಜೈ ಜವಾನ್-ಜೈ ಕಿಸಾನ್ ಎಂದು ಘೋಷಣೆ ಹಾಕುವವರು ತಮ್ಮ ಕಾಮಾಲೆಗೆ ಔಷಧಿ ಸೇವಿಸಿ ಈ ಚಳವಳಿಯನ್ನು ನೋಡಬೇಕಿದೆ.

ಯೋಧರನ್ನೂ ರೈತರನ್ನೂ ಆಕಾಶದೆತ್ತರಕ್ಕೆ ಹೊಗಳುವ ದೊಡ್ಡ ವರ್ಗವೊಂದು ಈ ಚಳವಳಿಯನ್ನು ಹಳಿಯುವ ನೀಚತನಕ್ಕೆ ಇಳಿದಿದೆ. ದೇಶದ ಪ್ರಧಾನಮಂತ್ರಿಯವರ ಐವತ್ತಾರು ಅಂಗುಲದ ಭಾರೀ ಎದೆಯಲ್ಲಿ ದೆಹಲಿಯ ಗಡಿಗಳ ಬಯಲಿನಲ್ಲಿ ಬೀಡು ಬಿಟ್ಟಿರುವ ಕಿಸಾನ್- ಜವಾನ್‌ರ ಕುರಿತು ತುಸುವಾದರೂ ಪಸೆ ಕಂಡಿಲ್ಲದಿರುವುದು ಅತೀವ ವ್ಯಥೆಯ ಸಂಗತಿ. ಎಂತೆಂತಹ ವಿಷಯಗಳ ಕುರಿತು ಟ್ವೀಟ್ ಮಾಡುವ ಪ್ರಧಾನಿಯವರ ಕಲ್ಲು ಗುಂಡಿಗೆಯನ್ನು ರೈತರ ದುಮ್ಮಾನ ತಾಕಿಯೇ ಇಲ್ಲ! ಅವರು ಅಲ್ಲಿ ಚಳಿಮಳೆ ಗಾಳಿಯಲ್ಲಿ ಪಾಡುಪಡುತ್ತಿದ್ದರೆ ಇತ್ತ ಕೋಟಿನ ಮೇಲೆ ಕೋಟು ಉಟ್ಟು ಬೆಚ್ಚಗಿರುವ ದೇಶ ಆಳುವವರಿಗೆ ಮನಸು ಹೇಗೆ ಬರುತ್ತದೆಯೋ ಎಂಬುದು ಸೋಜಿಗದ ಸಂಗತಿ.

ಪ್ರತಿಭಟನಾನಿರತ ರೈತರು ಮೋದಿಯವರ ಶತ್ರುಗಳಲ್ಲ. ಅವರನ್ನು ಗದ್ದುಗೆಯಿಂದ ಇಳಿಸಬೇಕೆಂದು ಕಳೆದ ಆರು ವರ್ಷಗಳಲ್ಲಿ ಒಮ್ಮೆಯೂ ಚಕಾರ ಎತ್ತಿದವರಲ್ಲ. ಆದರೂ ಪ್ರಧಾನಿಯವರು ಅವರನ್ನು ವೈರಿಗಳಂತೆ ಕಾಣುತ್ತಿರುವುದು ದುಃಖದ ಸಂಗತಿ. ಭಾಷಣಗಳಲ್ಲಿ ರೈತನನ್ನು ಹೊಗಳಿ ಹೊನ್ನ ಶೂಲಕ್ಕೆ ಏರಿಸುವವರು ಆತ ಪ್ರತ್ಯಕ್ಷನಾಗಿ ಎದುರಾದರೆ ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದಕ್ಕೆ ಉತ್ತಮ ಉದಾಹರಣೆಯಿದು. ’ಕಲ್ಲನಾಗರೆ ಕಂಡರೆ ಹಾಲೆರೆವರು, ಉಣ್ಣದ ಲಿಂಗಕ್ಕೆ ಬೋನವನಿಕ್ಕುವರು, ಉಣುವ ಜಂಗಮ ಬಂದರೆ ಪೋ ಪೋ ಎಂಬುವರು’ ಎಂಬ ವಚನದಂತೆ ಡಂಭಾಚಾರದ ಪರಾಕಾಷ್ಠೆಯಿದು.


ಇದನ್ನೂ ಓದಿ: ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್‍ಯಾಲಿಯ ಟ್ರೈಲರ್ ಜನವರಿ 7 ರಂದು ತೋರಿಸುತ್ತೇವೆ: ರೈತ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...