Homeಕರ್ನಾಟಕಫೆ.10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಬಡಗಲಪುರ ನಾಗೇಂದ್ರ

ಫೆ.10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ: ಬಡಗಲಪುರ ನಾಗೇಂದ್ರ

- Advertisement -
- Advertisement -

ರೈತ ನಾಯಕ ಪ್ರೊ ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮ ದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ವಿವಿಧ ಜಾತಿ ಮತ್ತು ರೈತ ಸಮುದಾಯವನ್ನು ಸಮಾಜವಾದಿ ಚಿಂತನೆಗೆ ಕರೆತಂದು, ಜಾತಿಗಿಂತ ವರ್ಗ ದೊಡ್ಡದು ಎಂಬ ಪ್ರಜ್ಞೆ ಮೂಡಿಸಿದವರು ನಂಜುಂಡಸ್ವಾಮಿ ಅವರು. ರೈತ ಸಂಘವನ್ನು ಪರಿಣಾಮಕಾರಿ ಮತ್ತು ಪ್ರಭಾವ ಬೀರುವ ಚಳುವಳಿಯಾಗಿ ಅವರು ಕಟ್ಟಿದ್ದಾರೆ. ಅವರನ್ನು ಸ್ಮರಿಸುವುದು ನಾಡಿದ ರೈತರ ಕರ್ತವ್ಯ” ಎಂದು ಹೇಳಿದರು.

“ನಂಜುಂಡಸ್ವಾಮಿ ಅವರ ಗರಡಿಯಲ್ಲಿ ಬೆಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಅಂದು ರೈತರ ನಾನಾ ಬೇಡಿಕೆಗಳಿರುವ 38 ಪುಟಗಳ ಹಕ್ಕೊತ್ತಾಯವನ್ನು ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುತ್ತದೆ. ರೈತ ಚಿಂತನೆಯಿರುವ ಸಮಾಜ ಕಲ್ಯಾಣ ಸಚಿವ ಡಾ.ಹೆಚ್ ಸಿ ಮಹಾದೇವಪ್ಪ, ಶಾಸಕ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್ ಪಾಟೀಲ್, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

“2013ರಲ್ಲಿ ಕಾಂಗ್ರೆಸ್‌ ಸರ್ಕಾರವೇ ರಚಿಸಿದ್ದ ಕೃಷಿ ಬೆಲೆ ಆಯೋಗವನ್ನು ಮತ್ತಷ್ಟು ಬಲವರ್ಧನೆ ಮಾಡಬೇಕು. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಹಣ ನೀಡುವ ಬದಲು ರೈತರು ಬೆಳೆಯುತ್ತಿರುವ ಜೋಳ, ರಾಗಿ, ತೊಗರಿ ಬೇಳೆ ಹಾಗೂ ಎಣ್ಣೆ ವಿತರಣೆ ಮಾಡಬೇಕು. ಇದರಿಂದ ಸರ್ಕಾರದ ಮೇಲಿನ ಹೊರೆಯೂ ಕಡಿಮೆಯಾಗುತ್ತದೆ. ರೈತರಿಗೆ ಅನುಕೂಲವಾಗುತ್ತದೆ” ಎಂದು ಬಡಗಲಪುರ ನಾಗೇಂದ್ರ ತಿಳಿಸಿದರು.

ಸಮಾವೇಶಕ್ಕೆ ಮುಖ್ಯಮಂತ್ರಿಯನ್ನು ಕರೆಸುವುದು ಸಂಘಟನೆಯ ಮೇಲೆ ರಾಜಕೀಯ ಪ್ರಭಾವ ಬೀರುವುದಿಲ್ಲವೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಪ್ರತಿಭಟನಾ ಸಮಾವೇಶವಲ್ಲ. ನಂಜುಂಡಸ್ವಾಮಿ ಅವರನ್ನು ಸ್ಮರಿಸುವ ಸಮಾವೇಶ. ಸಿದ್ದರಾಮಯ್ಯ ಅವರು ನಂಜುಂಡಸ್ವಾಮಿ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳುತ್ತಾರೆ. ಹೀಗಾಗಿ, ಅವರು ನಂಜುಂಡಸ್ವಾಮಿ ಅವರ ಅನುಯಾಯಿಯಾಗಿ ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿ ನಡೆಯುತ್ತದೆ. ಅದರಲ್ಲಿ ಯಾವುದೇ ರಾಜಿ ಇಲ್ಲ. ಸಂಘಟನೆ ಮೇಲೆ ಯಾವುದೇ ರಾಜಕೀಯ ಪ್ರಭಾವ ಬೀರುವುದಿಲ್ಲ” ಎಂದು ಹೇಳಿದರು.

ರೈತ ಸಂಘದ ಕಾರ್ಯಾಧ್ಯಕ್ಷ ವಿರಸಂಗಯ್ಯ ಮಾತನಾಡಿ, “ಕರ್ನಾಟಕ ಹಳ್ಳಿಗಳ ರಾಜ್ಯ. ಬೆರಳೆಣಿಕೆಯ ನಗರಗಳನ್ನು ಅಭಿವೃದ್ಧಿ ಮಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ಹಳ್ಳಿಗಳು ಉಳಿದರೆ ಮಾತ್ರ ದೇಶ ಉಳಿಯುತ್ತದೆ. ಗ್ರಾಮೀಣ ಭಾಗದ ಯುವಕರಿಗೆ ವಿವಾಹಕ್ಕೆ ಹೆಣ್ಣು ಸಿಗದೇ ಇರುವುದು ಸಮಾಜದಲ್ಲಿ ಸೂತಕದ ಛಾಯೆಯನ್ನು ಸೂಚಿಸುತ್ತದೆ. ರೈತ ಯುವಜನರನ್ನು ಪ್ರೋತ್ಸಾಹಿಸುವ, ಅವರಿಗೆ ಕನಿಷ್ಠ ಆದಾಯ ಖಾತ್ರಿಯಾಗುವಂತಹ ಯೋಜನೆಗಳನ್ನು ಜಾರಿಗೆ ತರಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ಗೋಪಾಲ್ ಪಾಪೇಗೌಡ, ರವಿಕರಣ್ ಪುಣಚ, ಶ್ರೀಶೈಲ ನಾಯಕ್ ಸೇರಿದಂತೆ ಇತರರು ಇದ್ದರು.

ಇದನ್ನೂ ಓದಿ : ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅವ್ಯವಹಾರ ಆರೋಪ: ಸಿಐಡಿ ತನಿಖೆಗೆ ಸಿಎಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...