Homeಮುಖಪುಟಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ರೈತನ ಸಾವು: ವರದಿ ಕೇಳಿದ ದೆಹಲಿ ಹೈಕೋರ್ಟ್

ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ರೈತನ ಸಾವು: ವರದಿ ಕೇಳಿದ ದೆಹಲಿ ಹೈಕೋರ್ಟ್

ಪ್ರತ್ಯಕ್ಷದರ್ಶಿ ಸಾಕ್ಷ್ಯ ಮತ್ತು ವೈದ್ಯಕೀಯ ಅಭಿಪ್ರಾಯದ ದೃಢೀಕರಣವು ಸಿಂಗ್‌ಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದ್ದಾರೆ.

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ತನಿಖೆಯ ವರದಿ ನೀಡುವಂತೆ ಪೊಲೀಸ್ ಮತ್ತು ಇತರ ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.

ನವರೀತ್ ಸಿಂಗ್ ಅಜ್ಜ ಹರ್ದೀಪ್ ಸಿಂಗ್ ದಿಬ್ಡಿಬಾ “ಟ್ರ್ಯಾಕ್ಟರ್ ಪಲ್ಟಿಯಾಗಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂಬ ದೆಹಲಿ ಪೊಲೀಸರ ಹೇಳಿಕೆಗೆ ತಕರಾರು ತೆಗೆದಿದ್ದು, ಪೊಲೀಸರ ಗುಂಡು ತಗುಲಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ನವರೀತ್‌ಸಿಂಗ್ ಚಾಲನೆ ಮಾಡಲಾಗದೇ ಇದ್ದುದರಿಂದ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಇದರಿಂದ ತಲೆಗೆ ಗಾಯವಾಗಿ ಮೃತನಾಗಿದ್ದಾನೆ” ಎಂದು ಆರೋಪಿಸಿದ್ದಾರೆ. ಹಾಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತು ತನಿಖೆಯ ಪ್ರಗತಿ ಯಾವ ಹಂತದಲ್ಲಿದೆ ಎಂದು ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಗುರುವಾರ ದೆಹಲಿ ಪೊಲೀಸರು, ದೆಹಲಿ ಸರ್ಕಾರ, ಮತ್ತು ಉತ್ತರ ಪ್ರದೇಶದ ರಾಂಪುರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿಗೆ ನೋಟಿಸ್ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಾಧೀಶರ ನ್ಯಾಯಪೀಠ ಗುರುವಾರ ವಿವರವಾದ ವರದಿ ಬಯಸಿದೆ. ಅಲ್ಲದೆ ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷ್ಯಚಿತ್ರ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸುವಂತೆ ನಿರ್ದೇಶಿಸಿದೆ. ಅರ್ಜಿದಾರರಿಗೆ ಸ್ಥಿತಿ ವರದಿಯ ಮುಂಗಡ ಪ್ರತಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.

ಅರ್ಜಿದಾರ ಡಿಬ್ಡಿಬಾ ಪರ ಹಾಜರಾದ ವಕೀಲೆ ವೃಂದಾ ಗ್ರೋವರ್, “ಪ್ರತ್ಯಕ್ಷದರ್ಶಿ ಸಾಕ್ಷ್ಯ ಮತ್ತು ವೈದ್ಯಕೀಯ ಅಭಿಪ್ರಾಯದ ದೃಢೀಕರಣವು ಸಿಂಗ್‌ಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂಬುದು ಸ್ಪಷ್ಟಪಡಿಸುತ್ತದೆ. ಅಲ್ಲದೆ ದೆಹಲಿ ಪೊಲೀಸರು ಅಪಘಾತದಿಂದ ಸಾವು ಉಂಟಾಗಿದೆ ಎಂದು ತರಾತುರಿಯ ಘೋಷಣೆ ಮಾಡುವ ಮೊದಲು ಯಾವುದೇ ವಿಚಾರಣೆ ಅಥವಾ ತನಿಖೆ ನಡೆಸಲು ವಿಫಲರಾಗಿದ್ದಾರೆ” ಎಂದು ವಾದಿಸಿದ್ದಾರೆ.

ಗುಂಡೇಟುಗಳಿವೆ ಎಂದು ಪ್ರತಿಪಾದಿಸಿದ ಪ್ರತ್ಯಕ್ಷದರ್ಶಿಗಳು ಇದ್ದಾರೆ. ವೈದ್ಯಕೀಯ ತಜ್ಞರು ಸಹ ಸತ್ತವರ ದೇಹದ ಮೇಲಿನ “ಸೀಳಿರುವ ಗಾಯಗಳು” ಗುಂಡಿನ ಗಾಯದ ಪ್ರತಿಪಾದನೆಗೆ ಅನುಗುಣವಾಗಿರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ದಿ ವೈರ್ ವರದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾಂಪುರ್ ಜಿಲ್ಲೆಯಲ್ಲಿ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...