Homeಮುಖಪುಟಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ರೈತನ ಸಾವು: ವರದಿ ಕೇಳಿದ ದೆಹಲಿ ಹೈಕೋರ್ಟ್

ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ರೈತನ ಸಾವು: ವರದಿ ಕೇಳಿದ ದೆಹಲಿ ಹೈಕೋರ್ಟ್

ಪ್ರತ್ಯಕ್ಷದರ್ಶಿ ಸಾಕ್ಷ್ಯ ಮತ್ತು ವೈದ್ಯಕೀಯ ಅಭಿಪ್ರಾಯದ ದೃಢೀಕರಣವು ಸಿಂಗ್‌ಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ವಕೀಲೆ ವೃಂದಾ ಗ್ರೋವರ್ ವಾದಿಸಿದ್ದಾರೆ.

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ತನಿಖೆಯ ವರದಿ ನೀಡುವಂತೆ ಪೊಲೀಸ್ ಮತ್ತು ಇತರ ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.

ನವರೀತ್ ಸಿಂಗ್ ಅಜ್ಜ ಹರ್ದೀಪ್ ಸಿಂಗ್ ದಿಬ್ಡಿಬಾ “ಟ್ರ್ಯಾಕ್ಟರ್ ಪಲ್ಟಿಯಾಗಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂಬ ದೆಹಲಿ ಪೊಲೀಸರ ಹೇಳಿಕೆಗೆ ತಕರಾರು ತೆಗೆದಿದ್ದು, ಪೊಲೀಸರ ಗುಂಡು ತಗುಲಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ನವರೀತ್‌ಸಿಂಗ್ ಚಾಲನೆ ಮಾಡಲಾಗದೇ ಇದ್ದುದರಿಂದ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಇದರಿಂದ ತಲೆಗೆ ಗಾಯವಾಗಿ ಮೃತನಾಗಿದ್ದಾನೆ” ಎಂದು ಆರೋಪಿಸಿದ್ದಾರೆ. ಹಾಗಾಗಿ ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತು ತನಿಖೆಯ ಪ್ರಗತಿ ಯಾವ ಹಂತದಲ್ಲಿದೆ ಎಂದು ವರದಿ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಗುರುವಾರ ದೆಹಲಿ ಪೊಲೀಸರು, ದೆಹಲಿ ಸರ್ಕಾರ, ಮತ್ತು ಉತ್ತರ ಪ್ರದೇಶದ ರಾಂಪುರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿಗೆ ನೋಟಿಸ್ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಯೋಗೇಶ್ ಖನ್ನಾ ಅವರ ಏಕ ನ್ಯಾಯಾಧೀಶರ ನ್ಯಾಯಪೀಠ ಗುರುವಾರ ವಿವರವಾದ ವರದಿ ಬಯಸಿದೆ. ಅಲ್ಲದೆ ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷ್ಯಚಿತ್ರ ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಸಂರಕ್ಷಿಸುವಂತೆ ನಿರ್ದೇಶಿಸಿದೆ. ಅರ್ಜಿದಾರರಿಗೆ ಸ್ಥಿತಿ ವರದಿಯ ಮುಂಗಡ ಪ್ರತಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದೆ.

ಅರ್ಜಿದಾರ ಡಿಬ್ಡಿಬಾ ಪರ ಹಾಜರಾದ ವಕೀಲೆ ವೃಂದಾ ಗ್ರೋವರ್, “ಪ್ರತ್ಯಕ್ಷದರ್ಶಿ ಸಾಕ್ಷ್ಯ ಮತ್ತು ವೈದ್ಯಕೀಯ ಅಭಿಪ್ರಾಯದ ದೃಢೀಕರಣವು ಸಿಂಗ್‌ಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂಬುದು ಸ್ಪಷ್ಟಪಡಿಸುತ್ತದೆ. ಅಲ್ಲದೆ ದೆಹಲಿ ಪೊಲೀಸರು ಅಪಘಾತದಿಂದ ಸಾವು ಉಂಟಾಗಿದೆ ಎಂದು ತರಾತುರಿಯ ಘೋಷಣೆ ಮಾಡುವ ಮೊದಲು ಯಾವುದೇ ವಿಚಾರಣೆ ಅಥವಾ ತನಿಖೆ ನಡೆಸಲು ವಿಫಲರಾಗಿದ್ದಾರೆ” ಎಂದು ವಾದಿಸಿದ್ದಾರೆ.

ಗುಂಡೇಟುಗಳಿವೆ ಎಂದು ಪ್ರತಿಪಾದಿಸಿದ ಪ್ರತ್ಯಕ್ಷದರ್ಶಿಗಳು ಇದ್ದಾರೆ. ವೈದ್ಯಕೀಯ ತಜ್ಞರು ಸಹ ಸತ್ತವರ ದೇಹದ ಮೇಲಿನ “ಸೀಳಿರುವ ಗಾಯಗಳು” ಗುಂಡಿನ ಗಾಯದ ಪ್ರತಿಪಾದನೆಗೆ ಅನುಗುಣವಾಗಿರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ದಿ ವೈರ್ ವರದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾಂಪುರ್ ಜಿಲ್ಲೆಯಲ್ಲಿ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...