Homeಮುಖಪುಟಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಪೊಲೀಸರ ಗುಂಡೇಟಿನಿಂದ ತೀರಿಕೊಂಡಿದ್ದಾನೆ ಎಂದು ರೈತನ ಕುಟುಂಬದವರು ಆರೋಪಿಸಿರುವ ವರದಿ ಉಲ್ಲೇಖಿಸಿ ಮಾಡಿದ ಟ್ವೀಟ್ ಅನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ದಿ ವೈರ್ ವರದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾಂಪುರ್ ಜಿಲ್ಲೆಯಲ್ಲಿ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದರಾಜನ್ ಶನಿವಾರ ದಿ ವೈರ್‌ನ ವರದಿಯೊಂದನ್ನು ಟ್ವೀಟ್ ಮಾಡಿದ್ದು, ಅದರ ಪ್ರಕಾರ, ಸಿಂಗ್ ಕುಟುಂಬವು ತನ್ನ ಟ್ರ್ಯಾಕ್ಟರ್ ಪಲ್ಟಿಯಾಗಿರುವುದರಿಂದ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ ಎಂಬ ದೆಹಲಿ ಪೊಲೀಸರ ಹೇಳಿಕೆಗೆ ತಕರಾರು ತೆಗೆದಿದೆ.

‘ಗುಂಡು ತಗುಲಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ನವರೀತ್‌ಸಿಂಗ್ ಚಾಲನೆ ಮಾಡಲಾಗದೇ ಇದ್ದುದರಿಂದ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಇದರಿಂದ ತಲೆಗೆ ಗಾಯವಾಗಿ ಮೃತನಾಗಿದ್ದಾನೆ’ ಎಂದು ಕುಟುಂಬವು ಆರೋಪಿಸಿದೆ.

ಸಿಂಗ್ ಅವರ ಅಜ್ಜ ಕೊಟ್ಟ ಹೇಳಿಕೆಯನ್ನು ವರದರಾಜನ್ ಉಲ್ಲೇಖಿಸಿದ್ದಾರೆ, “ಶವಪರೀಕ್ಷೆಯ ಭಾಗವಾಗಿದ್ದ ವೈದ್ಯರೊಬ್ಬರು ಗುಂಡಿನ ಗಾಯಗಳಾಗಿವೆ ಎಂದು ಹೇಳಿದರು. ಆದರೆ ನನ್ನ ಕೈಗಳನ್ನು ಕಟ್ಟಲಾಗಿದೆ ಎಂದು ಆ ವೈದ್ಯರು ತಿಳಿಸಿದರು” ಎಂದು ಮೃತನ ಅಜ್ಜ ಹೇಳಿರುವುದಾಗಿ ವೈರ್ ವರದಿ ತಿಳಿಸಿದೆ.

ರಾಂಪುರ್ ನಿವಾಸಿ ಸಂಜು ತುರಾಹಾ ಅವರ ದೂರಿನ ಆಧಾರದ ಮೇಲೆ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಶನಿವಾರದ ವರದರಾಜನ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿದೆ. ಟ್ವೀಟ್‌ನಲ್ಲಿ ಪ್ರಸ್ತಾಪಿತ ವರದಿಯನ್ನು, ಶವಪರೀಕ್ಷೆ ವೈದ್ಯರಿಂದಲೇ ಹೇಳಲಾಗಿದೆ ಎಂದು ತೋರುವ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ, ಇದು ಗೊಂದಲಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ.

“ಇದರ ಪರಿಣಾಮವಾಗಿ, ರಾಂಪುರದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ” ಎಂದು ಎಫ್‌ಐಆರ್ ಹೇಳಿದೆ. “ಈ ಪೋಸ್ಟ್ ಖಂಡಿತವಾಗಿಯೂ ಸಾರ್ವಜನಿಕರಿಗೆ ಹಾನಿ ಮಾಡುವ ಮೂಲಕ ಹಿಂಸೆಯನ್ನು ಪ್ರಚೋದಿಸುವ ಪಿತೂರಿಯ ಒಂದು ಭಾಗವೆಂದು ತೋರುತ್ತದೆ’ ಎಂದು ವಿವರಿಸಲಾಗಿದೆ.

ನವರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯನ್ನು ಮೂವರು ಪ್ಯಾನಲ್ ವೈದ್ಯರು ನಡೆಸಿದ್ದಾರೆ ಮತ್ತು ಅದನ್ನು ಸರಿಯಾಗಿ ವಿಡಿಯೋಗ್ರಾಫ್ ಮಾಡಲಾಗಿದೆ ಎಂದು ಎಫ್‌ಐಆರ್ ಪ್ರತಿಪಾದಿಸಿದೆ. ದಿ ವೈರ್‌ನ ವರದಿಯಲ್ಲಿ ಪ್ರತಿಪಾದಿಸಲ್ಪಟ್ಟಂತೆ, ಮೂವರು ವೈದ್ಯರಲ್ಲಿ ಯಾರೂ ಅಂತಹ ಯಾವುದೇ ಹೇಳಿಕೆಯನ್ನು ಯಾರಿಗೂ ನೀಡಿದ್ದನ್ನು ನಿರಾಕರಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

“ಇದರ ಹೊರತಾಗಿಯೂ, ಟ್ವೀಟ್ ಅನ್ನು ಇನ್ನೂ ತೆಗೆದುಹಾಕಲಾಗಿಲ್ಲ” ಎಂದು ಎಫ್‌ಐಆರ್ ಆಕ್ಷೇಪಿಸಿದೆ. “ಸರಿಯಾದ ಸಂಗತಿಗಳನ್ನು ತಿಳಿಯದೆ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ- ಟ್ವಿಟ್ಟರ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡುವ ಮೂಲಕ” ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಉದ್ದೇಶವನ್ನು ಟ್ವೀಟ್ ಹೊಂದಿದೆ ಎಂದು ಆರೋಪಿಸಲಾಗಿದೆ.

ಸಾರ್ವಜನಿಕರನ್ನು “ಪ್ರಚೋದಿಸುವ” ಸಲುವಾಗಿ, ಗುಂಡೇಟಿನಿಂದ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಹೇಳಲು ಸರ್ಕಾರಿ ವೈದ್ಯಕೀಯ ಅಧಿಕಾರಿಯನ್ನು ಪೋಸ್ಟ್ ತಪ್ಪಾಗಿ ಉಲ್ಲೇಖಿಸಿದೆ ಎಂದು ತಿಳಿಸಲಾಗಿದೆ.

ಈ ವಿಷಯದ ಬಗ್ಗೆ ಉತ್ತರ ಪ್ರದೇಶದಲ್ಲಿ ಕಳೆದ ವಾರದಲ್ಲಿ ಪತ್ರಕರ್ತರು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ ಎರಡನೆ ಪ್ರಕರಣವಿದು. ಮಂಗಳವಾರ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾವಿಗೀಡಾದ ನವರೀತ್ ಸಿಂಗ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದ ಆರು ಜನ ಪತ್ರಕರ್ತರು ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರರಲ್ಲಿ ಮೃಣಾಲ್ ಪಾಂಡೆ, ರಾಜ್‌ದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಆಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಸೇರಿದ್ದಾರೆ.

ಎಫ್‌ಐಆರ್‌ಗೂ ಮೊದಲು ಡಿಸಿ ಟ್ವೀಟ್

ವರದರಾಜನ್ ವಿರುದ್ಧದ ಎಫ್‌ಐಆರ್‌ಗೆ ಮೊದಲು ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ರಾಂಪುರ್ ಜಿಲ್ಲಾಧಿಕಾರಿಯ ಅಧಿಕೃತ ಟ್ವಿಟರ್ ಖಾತೆಯ ನಡುವೆ ಟ್ವೀಟ್ ಸಂಭಾಷಣೆ ನಡೆದಿದೆ.
ಟ್ವಿಟರ್‌ನಲ್ಲಿ ಇನ್ನೂ ಇರುವ ವರದರಾಜನ್ ಅವರ ಮೂಲ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ರಾಂಪುರ್ ಜಿಲ್ಲಾಧಿಕಾರಿ ಅವರ ಅಧಿಕೃತ ಖಾತೆಯು ಪ್ರತಿಕ್ರಿಯಿಸಿ, “ದಯವಿಟ್ಟು ನಾವು ನಿಮಗೆ ಸತ್ಯಕ್ಕೆ ಮಾತ್ರ ಅಂಟಿಕೊಳ್ಳಬೇಕೆಂದು ವಿನಂತಿಸುತ್ತೇವೆ. ನಮ್ಮ ವಿನಂತಿಗೆ ತಮ್ಮ ಪ್ರತಿಕ್ರಿಯೆಯನ್ನು ನಿಮ್ಮಿಂದ ಪ್ರಾಮಾಣಿಕವಾಗಿ ನಿರೀಕ್ಷಿಸುತ್ತೇವೆ. ಧನ್ಯವಾದ.” ಈ ಟ್ವೀಟ್ ಜೊತೆಗೆ ಪೋಸ್ಟ್ ಮಾರ್ಟಮ್ ನಡೆಸಿದ ಮೂವರು ಸರ್ಕಾರಿ ವೈದ್ಯಕೀಯ ಅಧಿಕಾರಿಗಳು ಹೇಳಿಕೆ ನೀಡಿದ್ದನ್ನು ನಿರಾಕರಿಸಿದ ಟಿಪ್ಪಣಿ ಲಗತ್ತಿಸಲಾಗಿದೆ. ಅವರಲ್ಲಿ ಯಾರೂ ಮಾಧ್ಯಮದ ಯಾರೊಂದಿಗೂ ಮಾತನಾಡಿಲ್ಲ ಮತ್ತು ಶವಪರೀಕ್ಷೆಯ ಬಗ್ಗೆ ಯಾವುದೇ ಪತ್ರಕರ್ತರಿಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ವರದರಾಜನ್ ಅವರು, ಮೂವರು ವೈದ್ಯರ ಅಧಿಕೃತ ಘೋಷಣೆಯನ್ನು ಸೇರಿಸಿ ದಿ ವೈರ್ ವರದಿಯನ್ನು ಅಪ್ಡೇಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಜಿಲ್ಲಾಧಿಕಾರಿ, “ನಿಮ್ಮ ಸ್ಟೋರಿ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಉಂಟುಮಾಡಬಹುದು ಎಂದು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇವೆ. ಇದು ಈಗಾಗಲೇ ಇಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಯಾರು ಜವಾಬ್ದಾರಿ?’ ಎಫ್‌ಐಆರ್ ದಾಖಲಾದ ಗಂಟೆಗಳ ನಂತರ ವರದರಾಜ್‌ನ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ಭಾನುವಾರ ಬೆಳಿಗ್ಗೆ ಎಫ್‌ಐಆರ್‌ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ವರದರಾಜನ್ ಇದನ್ನು “ದುರುದ್ದೇಶಪೂರಿತ ಕಾನೂನು ಕ್ರಮ” ಎಂದು ಕರೆದಿದ್ದಾರೆ. “ಈ ದುರುದ್ದೇಶಪೂರಿತ ಕಾನೂನು ಕ್ರಮಕ್ಕಾಗಿ ಐಪಿಸಿಯ ಯಾವ ನಿಬಂಧನೆ ಅವಕಾಶ ಮಾಡಿಕೊಡುತ್ತದೆ? ಟ್ರ‍್ಯಾಕ್ಟರ್ ಪೆರೇಡ್‌ನಲ್ಲಿ ಮೃತಪಟ್ಟ ರೈತನ ಅಜ್ಜ ದಾಖಲೆಯಲ್ಲಿ ಏನು ಹೇಳಿದ್ದಾರೆಂಬುದನ್ನು ಟ್ವೀಟ್ ಮಾಡಿದ್ದಕ್ಕಾಗಿ ಯುಪಿ ಪೊಲೀಸರು ಈ ಕ್ರಮ ಕೈಗೊಳ್ಳುತ್ತಿದ್ದಾರೆ. ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ! ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....