Homeಚಳವಳಿಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

- Advertisement -
- Advertisement -

ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಅವಿಶ್ವಾಸ ನಿರ್ಣಯವನ್ನು ಗೆದ್ದ ನಂತರ, ಆಡಳಿತ ಪಕ್ಷದ ಶಾಸಕರು, ಜೆಜೆಪಿ ಮತ್ತು ಸ್ವತಂತ್ರ ಶಾಸಕರು ಪ್ರತಿಭಟನಾ ನಿರತ ರೈತರ ಕೋಪವನ್ನು ಎದುರಿಸುತ್ತಿದ್ದಾರೆ. ಗುರುವಾರ ಒಬ್ಬ ಶಾಸಕರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲಾಗಿದೆ.

106 ದಿನಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಸಂಯುಕ್ತ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಅವಿಶ್ವಾಸ ಮತ ನೀಡಿ, ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಕರೆ ನೀಡಿತ್ತು.

ಆದರೆ, ನಿನ್ನೆ (ಮಾರ್ಚ್ 10) ಹರಿಯಾಣ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಇದರಿಂದ ತೀವ್ರ ಹೋರಾಟಕ್ಕೆ ಸಜ್ಜಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

ಸ್ಥಳೀಯ ಶಾಸಕ ಅಸೀಮ್ ಗೋಯೆಲ್ ಅವರ ಅಂಬಾಲಾ ನಿವಾಸದ ಹೊರಗೆ ರೈತರು ಇಂದು ಪ್ರತಿಭಟನೆ ನಡೆಸಿದರು. ನಿನ್ನೆ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ, ಜನವರಿ 26 ರ ಕೆಂಪು ಕೋಟೆಯ ಹಿಂಸಾಚಾರವನ್ನು ಅವರು ಉಲ್ಲೇಖಿಸಿ, ಪ್ರತಿಭಟನಾ ನಿರತ ರೈತರು “ರಾಷ್ಟ್ರ ವಿರೋಧಿ” ಅಂಶಗಳನ್ನು ಸೂಚಿಸುತ್ತಾರೆ ಎಂದಿದ್ದರು. ನಂತರ, “ನಾನು ರೈತರನ್ನು ಹಾಗೆ ಕರೆಯಲಿಲ್ಲ. ನವದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿವಾದಾತ್ಮಕ ಘೋಷಣೆಗಳನ್ನು ಉಲ್ಲೇಖಿಸಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

ಸರ್ಕಾರಕ್ಕೆ ಮತ ಚಲಾಯಿಸಿದ ಹರಿಯಾಣ ಲೋಖಿತ್ ಪಕ್ಷದ ಮುಖ್ಯಸ್ಥರಾಗಿರುವ ಸ್ವತಂತ್ರ ಶಾಸಕ ಗೋಪಾಲ್ ಗೋಯಲ್ ಕಂದಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆದಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.

ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಇತರ ಸ್ವತಂತ್ರ ಶಾಸಕರು ಮುಖ್ಯಮಂತ್ರಿ ಖಟ್ಟರ್ ಅವರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಉಲ್ಲೇಖಿಸಿರುವ ಎಸ್‌ಕೆಎಂ ಮುಖಂಡರು, “ರೈತರಿಗೆ ಮತ್ತು ಅವರು ತಮಗೆ ಮಾಡಿಕೊಂಡಿರುವ ದೊಡ್ಡ ದ್ರೋಹ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸಂಯುಕ್ತ ಕಿಸಾನ್ ಮೋರ್ಚಾ ತಮ್ಮ ಪತ್ರಿಕಾ ಹೇಳಿಕೆಯಲ್ಲಿ, ’ತಮ್ಮನ್ನು ಕೃಷಿ ಸಮುದಾಯಕ್ಕೆ ಸೇರಿದ ಪಕ್ಷ ಎಂದು ಬಣ್ಣಿಸುವ ಜೆಜೆಪಿಯ ರೈತ ವಿರೋಧಿ ಮುಖ ಸಂಪೂರ್ಣವಾಗಿ ಬಹಿರಂಗವಾಗಿದೆ. ಈಗ ನಡೆಯುತ್ತಿರುವ ಚಳುವಳಿಯಿಂದಾಗಿ ಈ ಶಾಸಕರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ’ ಎಂದು ಹೇಳಿದೆ.

’ಈ ಶಾಸಕರ ರೈತ ವಿರೋಧಿ ಕೆಲಸಗಳ ವಿರುದ್ಧ ರೈತರು ವಿರೋಧ ಮತ್ತು ಪ್ರತಿರೋಧದ ಬೀಜಗಳನ್ನು ಬಿತ್ತಿದ್ದಾರೆ ಮತ್ತು ಶೀಘ್ರದಲ್ಲೇ ಕೊಯ್ಲು ಮಾಡಲಾಗುವುದು ಎಂದಿದೆ. ಹರಿಯಾಣದ ರೈತರು ಎಲ್ಲಾ ಬಿಜೆಪಿ ಮತ್ತು ಜೆಜೆಪಿ ಮುಖಂಡರನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ಮೂಲಕ ಈ ಪ್ರತಿಭಟನೆಯನ್ನು ತೀವ್ರಗೊಳಿಸಲು ಉದ್ದೇಶಿಸಿದ್ದಾರೆ’ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

10 ಶಾಸಕರಿರುವ ಜೆಜೆಪಿಯನ್ನು ಹರಿಯಾಣದಲ್ಲಿ ಕೃಷಿ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಕ್ಷವಾಗಿ ನೋಡಲಾಗುತ್ತದೆ. ಇದು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರ ಮೊಮ್ಮಗ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಈ ಶಾಸಕರನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕು, ಅವರಿಗೆ ಕಪ್ಪು ಧ್ವಜಗಳನ್ನು ತೋರಿಸಬೇಕು ಮತ್ತು ಸಭೆ ನಡೆಸಲು ಬಿಡಬಾರದು ಎಂದು ರೈತ ಸಂಘವು ಜನರಿಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಕರೆ ನೀಡಿದೆ.

ಹರಿಯಾಣ ವಿಧಾನಸಭೆಯ ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಬಿದ್ದಿವೆ.


ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...