Homeಚಳವಳಿಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

- Advertisement -
- Advertisement -

ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಅವಿಶ್ವಾಸ ನಿರ್ಣಯವನ್ನು ಗೆದ್ದ ನಂತರ, ಆಡಳಿತ ಪಕ್ಷದ ಶಾಸಕರು, ಜೆಜೆಪಿ ಮತ್ತು ಸ್ವತಂತ್ರ ಶಾಸಕರು ಪ್ರತಿಭಟನಾ ನಿರತ ರೈತರ ಕೋಪವನ್ನು ಎದುರಿಸುತ್ತಿದ್ದಾರೆ. ಗುರುವಾರ ಒಬ್ಬ ಶಾಸಕರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲಾಗಿದೆ.

106 ದಿನಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಸಂಯುಕ್ತ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಅವಿಶ್ವಾಸ ಮತ ನೀಡಿ, ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಕರೆ ನೀಡಿತ್ತು.

ಆದರೆ, ನಿನ್ನೆ (ಮಾರ್ಚ್ 10) ಹರಿಯಾಣ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಇದರಿಂದ ತೀವ್ರ ಹೋರಾಟಕ್ಕೆ ಸಜ್ಜಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

ಸ್ಥಳೀಯ ಶಾಸಕ ಅಸೀಮ್ ಗೋಯೆಲ್ ಅವರ ಅಂಬಾಲಾ ನಿವಾಸದ ಹೊರಗೆ ರೈತರು ಇಂದು ಪ್ರತಿಭಟನೆ ನಡೆಸಿದರು. ನಿನ್ನೆ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ, ಜನವರಿ 26 ರ ಕೆಂಪು ಕೋಟೆಯ ಹಿಂಸಾಚಾರವನ್ನು ಅವರು ಉಲ್ಲೇಖಿಸಿ, ಪ್ರತಿಭಟನಾ ನಿರತ ರೈತರು “ರಾಷ್ಟ್ರ ವಿರೋಧಿ” ಅಂಶಗಳನ್ನು ಸೂಚಿಸುತ್ತಾರೆ ಎಂದಿದ್ದರು. ನಂತರ, “ನಾನು ರೈತರನ್ನು ಹಾಗೆ ಕರೆಯಲಿಲ್ಲ. ನವದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿವಾದಾತ್ಮಕ ಘೋಷಣೆಗಳನ್ನು ಉಲ್ಲೇಖಿಸಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

ಸರ್ಕಾರಕ್ಕೆ ಮತ ಚಲಾಯಿಸಿದ ಹರಿಯಾಣ ಲೋಖಿತ್ ಪಕ್ಷದ ಮುಖ್ಯಸ್ಥರಾಗಿರುವ ಸ್ವತಂತ್ರ ಶಾಸಕ ಗೋಪಾಲ್ ಗೋಯಲ್ ಕಂದಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆದಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.

ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಇತರ ಸ್ವತಂತ್ರ ಶಾಸಕರು ಮುಖ್ಯಮಂತ್ರಿ ಖಟ್ಟರ್ ಅವರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಉಲ್ಲೇಖಿಸಿರುವ ಎಸ್‌ಕೆಎಂ ಮುಖಂಡರು, “ರೈತರಿಗೆ ಮತ್ತು ಅವರು ತಮಗೆ ಮಾಡಿಕೊಂಡಿರುವ ದೊಡ್ಡ ದ್ರೋಹ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸಂಯುಕ್ತ ಕಿಸಾನ್ ಮೋರ್ಚಾ ತಮ್ಮ ಪತ್ರಿಕಾ ಹೇಳಿಕೆಯಲ್ಲಿ, ’ತಮ್ಮನ್ನು ಕೃಷಿ ಸಮುದಾಯಕ್ಕೆ ಸೇರಿದ ಪಕ್ಷ ಎಂದು ಬಣ್ಣಿಸುವ ಜೆಜೆಪಿಯ ರೈತ ವಿರೋಧಿ ಮುಖ ಸಂಪೂರ್ಣವಾಗಿ ಬಹಿರಂಗವಾಗಿದೆ. ಈಗ ನಡೆಯುತ್ತಿರುವ ಚಳುವಳಿಯಿಂದಾಗಿ ಈ ಶಾಸಕರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ’ ಎಂದು ಹೇಳಿದೆ.

’ಈ ಶಾಸಕರ ರೈತ ವಿರೋಧಿ ಕೆಲಸಗಳ ವಿರುದ್ಧ ರೈತರು ವಿರೋಧ ಮತ್ತು ಪ್ರತಿರೋಧದ ಬೀಜಗಳನ್ನು ಬಿತ್ತಿದ್ದಾರೆ ಮತ್ತು ಶೀಘ್ರದಲ್ಲೇ ಕೊಯ್ಲು ಮಾಡಲಾಗುವುದು ಎಂದಿದೆ. ಹರಿಯಾಣದ ರೈತರು ಎಲ್ಲಾ ಬಿಜೆಪಿ ಮತ್ತು ಜೆಜೆಪಿ ಮುಖಂಡರನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ಮೂಲಕ ಈ ಪ್ರತಿಭಟನೆಯನ್ನು ತೀವ್ರಗೊಳಿಸಲು ಉದ್ದೇಶಿಸಿದ್ದಾರೆ’ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

10 ಶಾಸಕರಿರುವ ಜೆಜೆಪಿಯನ್ನು ಹರಿಯಾಣದಲ್ಲಿ ಕೃಷಿ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಕ್ಷವಾಗಿ ನೋಡಲಾಗುತ್ತದೆ. ಇದು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರ ಮೊಮ್ಮಗ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಈ ಶಾಸಕರನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕು, ಅವರಿಗೆ ಕಪ್ಪು ಧ್ವಜಗಳನ್ನು ತೋರಿಸಬೇಕು ಮತ್ತು ಸಭೆ ನಡೆಸಲು ಬಿಡಬಾರದು ಎಂದು ರೈತ ಸಂಘವು ಜನರಿಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಕರೆ ನೀಡಿದೆ.

ಹರಿಯಾಣ ವಿಧಾನಸಭೆಯ ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಬಿದ್ದಿವೆ.


ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...