Homeಚಳವಳಿಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

- Advertisement -
- Advertisement -

ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರ ಅವಿಶ್ವಾಸ ನಿರ್ಣಯವನ್ನು ಗೆದ್ದ ನಂತರ, ಆಡಳಿತ ಪಕ್ಷದ ಶಾಸಕರು, ಜೆಜೆಪಿ ಮತ್ತು ಸ್ವತಂತ್ರ ಶಾಸಕರು ಪ್ರತಿಭಟನಾ ನಿರತ ರೈತರ ಕೋಪವನ್ನು ಎದುರಿಸುತ್ತಿದ್ದಾರೆ. ಗುರುವಾರ ಒಬ್ಬ ಶಾಸಕರ ನಿವಾಸದ ಹೊರಗೆ ಪ್ರತಿಭಟನೆ ನಡೆಸಲಾಗಿದೆ.

106 ದಿನಗಳಿಂದ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಸಂಯುಕ್ತ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಅವಿಶ್ವಾಸ ಮತ ನೀಡಿ, ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಕರೆ ನೀಡಿತ್ತು.

ಆದರೆ, ನಿನ್ನೆ (ಮಾರ್ಚ್ 10) ಹರಿಯಾಣ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಬಿಜೆಪಿ ಗೆದ್ದುಕೊಂಡಿದೆ. ಇದರಿಂದ ತೀವ್ರ ಹೋರಾಟಕ್ಕೆ ಸಜ್ಜಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಸರ್ಕಾರದ ಪರವಾಗಿ ಮತ ಚಲಾಯಿಸಿದ ಅಸೆಂಬ್ಲಿ ಸದಸ್ಯರ ಸಾಮಾಜಿಕ ಬಹಿಷ್ಕಾರಕ್ಕೆ ಕರೆ ನೀಡಿದೆ.

ಇದನ್ನೂ ಓದಿ: ಹರಿಯಾಣ ವಿಧಾನಸಭೆ: ಅವಿಶ್ವಾಸ ನಿರ್ಣಯ ಗೆದ್ದ ಬಿಜೆಪಿ-ಜೆಜೆಪಿ ಮೈತ್ರಿ

ಸ್ಥಳೀಯ ಶಾಸಕ ಅಸೀಮ್ ಗೋಯೆಲ್ ಅವರ ಅಂಬಾಲಾ ನಿವಾಸದ ಹೊರಗೆ ರೈತರು ಇಂದು ಪ್ರತಿಭಟನೆ ನಡೆಸಿದರು. ನಿನ್ನೆ ವಿಧಾನಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ, ಜನವರಿ 26 ರ ಕೆಂಪು ಕೋಟೆಯ ಹಿಂಸಾಚಾರವನ್ನು ಅವರು ಉಲ್ಲೇಖಿಸಿ, ಪ್ರತಿಭಟನಾ ನಿರತ ರೈತರು “ರಾಷ್ಟ್ರ ವಿರೋಧಿ” ಅಂಶಗಳನ್ನು ಸೂಚಿಸುತ್ತಾರೆ ಎಂದಿದ್ದರು. ನಂತರ, “ನಾನು ರೈತರನ್ನು ಹಾಗೆ ಕರೆಯಲಿಲ್ಲ. ನವದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿವಾದಾತ್ಮಕ ಘೋಷಣೆಗಳನ್ನು ಉಲ್ಲೇಖಿಸಿದ್ದೇನೆ” ಎಂದು ಸ್ಪಷ್ಟಪಡಿಸಿದ್ದರು.

ಸರ್ಕಾರಕ್ಕೆ ಮತ ಚಲಾಯಿಸಿದ ಹರಿಯಾಣ ಲೋಖಿತ್ ಪಕ್ಷದ ಮುಖ್ಯಸ್ಥರಾಗಿರುವ ಸ್ವತಂತ್ರ ಶಾಸಕ ಗೋಪಾಲ್ ಗೋಯಲ್ ಕಂದಾ ಅವರ ಮನೆಯ ಹೊರಗೆ ಪ್ರತಿಭಟನೆ ನಡೆದಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.

ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಇತರ ಸ್ವತಂತ್ರ ಶಾಸಕರು ಮುಖ್ಯಮಂತ್ರಿ ಖಟ್ಟರ್ ಅವರ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಉಲ್ಲೇಖಿಸಿರುವ ಎಸ್‌ಕೆಎಂ ಮುಖಂಡರು, “ರೈತರಿಗೆ ಮತ್ತು ಅವರು ತಮಗೆ ಮಾಡಿಕೊಂಡಿರುವ ದೊಡ್ಡ ದ್ರೋಹ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸಂಯುಕ್ತ ಕಿಸಾನ್ ಮೋರ್ಚಾ ತಮ್ಮ ಪತ್ರಿಕಾ ಹೇಳಿಕೆಯಲ್ಲಿ, ’ತಮ್ಮನ್ನು ಕೃಷಿ ಸಮುದಾಯಕ್ಕೆ ಸೇರಿದ ಪಕ್ಷ ಎಂದು ಬಣ್ಣಿಸುವ ಜೆಜೆಪಿಯ ರೈತ ವಿರೋಧಿ ಮುಖ ಸಂಪೂರ್ಣವಾಗಿ ಬಹಿರಂಗವಾಗಿದೆ. ಈಗ ನಡೆಯುತ್ತಿರುವ ಚಳುವಳಿಯಿಂದಾಗಿ ಈ ಶಾಸಕರಿಗೆ ಯಾವುದೇ ರಾಜಕೀಯ ಭವಿಷ್ಯವಿಲ್ಲ’ ಎಂದು ಹೇಳಿದೆ.

’ಈ ಶಾಸಕರ ರೈತ ವಿರೋಧಿ ಕೆಲಸಗಳ ವಿರುದ್ಧ ರೈತರು ವಿರೋಧ ಮತ್ತು ಪ್ರತಿರೋಧದ ಬೀಜಗಳನ್ನು ಬಿತ್ತಿದ್ದಾರೆ ಮತ್ತು ಶೀಘ್ರದಲ್ಲೇ ಕೊಯ್ಲು ಮಾಡಲಾಗುವುದು ಎಂದಿದೆ. ಹರಿಯಾಣದ ರೈತರು ಎಲ್ಲಾ ಬಿಜೆಪಿ ಮತ್ತು ಜೆಜೆಪಿ ಮುಖಂಡರನ್ನು ಸಾಮಾಜಿಕವಾಗಿ ಬಹಿಷ್ಕರಿಸುವ ಮೂಲಕ ಈ ಪ್ರತಿಭಟನೆಯನ್ನು ತೀವ್ರಗೊಳಿಸಲು ಉದ್ದೇಶಿಸಿದ್ದಾರೆ’ ಎಂದು ಎಸ್‌ಕೆಎಂ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

10 ಶಾಸಕರಿರುವ ಜೆಜೆಪಿಯನ್ನು ಹರಿಯಾಣದಲ್ಲಿ ಕೃಷಿ ಸಮುದಾಯದಲ್ಲಿ ಬಲವಾದ ಬೇರುಗಳನ್ನು ಹೊಂದಿರುವ ಪಕ್ಷವಾಗಿ ನೋಡಲಾಗುತ್ತದೆ. ಇದು ಹರಿಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಅವರ ಮೊಮ್ಮಗ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ.

ಈ ಶಾಸಕರನ್ನು ಸಾಮಾಜಿಕವಾಗಿ ಬಹಿಷ್ಕರಿಸಬೇಕು, ಅವರಿಗೆ ಕಪ್ಪು ಧ್ವಜಗಳನ್ನು ತೋರಿಸಬೇಕು ಮತ್ತು ಸಭೆ ನಡೆಸಲು ಬಿಡಬಾರದು ಎಂದು ರೈತ ಸಂಘವು ಜನರಿಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಕರೆ ನೀಡಿದೆ.

ಹರಿಯಾಣ ವಿಧಾನಸಭೆಯ ಅವಿಶ್ವಾಸ ನಿರ್ಣಯ ಪ್ರಕ್ರಿಯೆಯಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರದ ಪರ 55 ಮತಗಳು ಚಲಾವಣೆಯಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪರ 32 ಮತಗಳು ಬಿದ್ದಿವೆ.


ಇದನ್ನೂ ಓದಿ: Breaking: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...