Homeಮುಖಪುಟರೈತರ 'ದಿಲ್ಲಿ ಚಲೋ' ಕರೆಗೆ ಬೆದರಿದ ಸರ್ಕಾರ: ರಸ್ತೆಗಳು ಬಂದ್, ಇಂಟರ್‌ನೆಟ್‌ ಸ್ಥಗಿತ

ರೈತರ ‘ದಿಲ್ಲಿ ಚಲೋ’ ಕರೆಗೆ ಬೆದರಿದ ಸರ್ಕಾರ: ರಸ್ತೆಗಳು ಬಂದ್, ಇಂಟರ್‌ನೆಟ್‌ ಸ್ಥಗಿತ

- Advertisement -
- Advertisement -

ಫೆಬ್ರವರಿ 13ರಂದು ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರದ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ.

ಹರಿಯಾಣ ಸರ್ಕಾರದ ಆದೇಶನುಸಾರ ಶನಿವಾರ ಪಂಜಾಬ್‌ನ ಗಡಿಯಾದ ಹರಿಯಾಣದ ಅಂಬಾಲಾದಲ್ಲಿ ರಸ್ತೆಯನ್ನು ಪೊಲೀಸರು ಮುಚ್ಚಿದ್ದಾರೆ. ಫೆಬ್ರವರಿ 11ರ ಬೆಳಿಗ್ಗೆ 6 ರಿಂದ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ ಎಸ್‌ಎಂಎಸ್‌ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದ್ದಾರೆ.

ವರದಿಗಳ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನ 23:59 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಹರಿಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳಲ್ಲಿ ಪಂಜಾಬ್-ಹರಿಯಾಣ ಗಡಿಗಳನ್ನು ಪೊಲೀಸರು ಮುಚ್ಚಿದ್ದಾರೆ. ಜನರು ಮುಖ್ಯ ರಸ್ತೆಗಳಲ್ಲಿ ಪ್ರಯಾಣವನ್ನು ಕಡಿಮೆಗೊಳಿಸುವಂತೆ ಮತ್ತು ಫೆಬ್ರವರಿ 13 ರಂದು ಅಗತ್ಯ ಕಾರ್ಯಗಳಿಗೆ ಮಾತ್ರ ಹೊರಗೆ ಬರುವಂತೆ ನಿರ್ದೇಶಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ ಸಂಘಟನೆ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ತಮ್ಮ ಹಲವಾರು ಬೇಡಿಕೆಗಳನ್ನು ಅಂಗೀಕರಿಸಿ ಕಾನೂನು ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿ ಫೆಬ್ರವರಿ 13 ರಂದು ‘ದಿಲ್ಲಿ ಚಲೋ’ ಹಮ್ಮಿಕೊಂಡಿದೆ.

2020ರಲ್ಲಿ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆದ ಹೋರಾಟದ ವೇಳೆ ಪಂಜಾಬ್ ಮತ್ತು ಅಂಬಾಲಾದ ವಿವಿಧ ಪ್ರದೇಶಗಳ ರೈತರು ಹೆಚ್ಚಿನ ಸಂಖ್ಯೆಯ ಶಂಭು ಗಡಿಯಲ್ಲಿ ಜಮಾಯಿಸಿದ್ದರು. ಪೊಲೀಸರ ಅಡೆತಡೆಗಳನ್ನು ಬೇಧಿಸಿ ಅವರು ದೆಹಲಿಯತ್ತ ನುಗ್ಗಿದ್ದರು. ಹಾಗಾಗಿ, ಈ ಬಾರಿ ಸರ್ಕಾರದ ಹೆದರಿದಂತೆ ಗೋಚರಿಸುತ್ತಿದ್ದು, ರೈತರು ದಿಲ್ಲಿ ಚಲೋ ಘೋಷಿಸಿದ ಬೆನ್ನಲ್ಲೆ, ಅವರನ್ನು ತಡೆಯಲು ಎಲ್ಲಾ ಕಸರತ್ತು ಮಾಡುತ್ತಿದೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...