Homeಮುಖಪುಟರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

ರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

- Advertisement -
- Advertisement -

ಚಂಡೀಗಢದಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಸರ್ಕಾರದ ಮೂವರು ಸಚಿವರ ತಂಡ ಮತ್ತು ರೈತರ ಸಂಘನೆಗಳ ನಡುವಿನ ಮೂರನೇ ಸುತ್ತಿನ ಸಭೆಯಲ್ಲಿಯೂ ಕೂಡ ಒಮ್ಮತ ಮೂಡಿಲ್ಲ. ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಲು ಸರ್ಕಾರ ನಿರಾಕರಿಸಿದ್ದು, ಇದೀಗ ಉಭಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಇದೀಗ ನಾಲ್ಕನೇ ಸುತ್ತಿನ ಸಭೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಪ್ರತಿಭಟನೆಯೂ ಮುಂದುವರಿಯಲಿದೆ. ಚುನಾವಣಾ ನೀತಿ ಸಂಹಿತೆಗೂ ಮುನ್ನವೇ ಒತ್ತಡ ತಂದು, ತಮ್ಮ ಬೇಡಿಕೆ ಈಡೇರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತ ಮುಖಂಡರಿಗೆ ನಿರಾಶೆಯಾಗಿದೆ. ಇತ್ತ ಕೇಂದ್ರ ಸರ್ಕಾರ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೂ ಮಾತುಕತೆಯನ್ನು ಎಳೆದು ತರಲು ಮುಂದಾಗಿದೆ ಎಂದು ಇಂದಿನ ಸಭೆ ಸೂಚಿಸಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರನ್ನೊಳಗೊಂಡ ಮೂರನೇ ಸುತ್ತಿನ ಸಭೆಯ ವಿಫಲವಾಗಿದೆ. ಈ ನಡುವೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಧ್ಯಸ್ಥಗಾರನ ಪಾತ್ರವನ್ನು ವಹಿಸಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿ ವಿಫಲರಾಗಿದ್ದಾರೆ.

ಸಭೆಯಲ್ಲಿ ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿರುವ ಬಗ್ಗೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ರೈತರ ಮೇಲಿನ ದೌರ್ಜನ್ಯದ ಕೆಲವು ಚಿತ್ರಗಳನ್ನೂ ಮುಖಂಡರು ಕೇಂದ್ರ ಸಚಿವರಿಗೆ ತೋರಿಸಿದರು. ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಇಡೀ ಸಭೆಯು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಯ ಮೇಲೆ ಕೇಂದ್ರೀಕರಿಸಿತು. ಬೆಳೆ ಬೆಲೆಗಳ ಕಾನೂನುಬದ್ಧ ಖಾತರಿಯ ವಿಷಯದ ಬಗ್ಗೆ, ಕೇಂದ್ರ ಸಚಿವರು ಭಾರತ ಸರ್ಕಾರವು ಈ ವಿಷಯದ ಬಗ್ಗೆ ಎಲ್ಲ ರಾಜ್ಯಗಳು, ಗ್ರಾಹಕ ವೇದಿಕೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸುತ್ತದೆ. ನಂತರ, ವಿಷಯವನ್ನು ಪರಿಣಾಮಕಾರಿಯಾಗಿ ಎದುರಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದರಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಸಹ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಒಪ್ಪದ ರೈತ ಮುಖಂಡರು, ಬೆಳೆ ಬೆಲೆಯ ಖಾತರಿ ಕಾನೂನನ್ನು ಯಾವಾಗ ಮತ್ತು ಯಾವ ಸಮಯಕ್ಕೆ ಮಾಡುತ್ತಾರೆ ಎಂಬ ಬದ್ಧತೆಯನ್ನು ಬಯಸುತ್ತೇವೆ ಎಂದರು. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ ಅವರು, ಸಚಿವ ಪಿಯೂಷ್ ಗೋಯಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಂತರ, ಪಿಯೂಷ್ ಗೋಯಲ್ ಅವರು ರೈತರನ್ನು ಪ್ರತಿನಿಧಿಸುವ ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ವಿಷಯವನ್ನು ಚರ್ಚಿಸಲು ಕೇಂದ್ರ ಕೃಷಿ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲು ಪ್ರಸ್ತಾಪಿಸಿದರು. ಯಾವುದೇ ಸಮಿತಿಯ ಸದಸ್ಯರಾಗಿರಲು ಇಷ್ಟಪಡುವುದಿಲ್ಲ ಎಂದು ಜಗಜಿತ್ ಸಿಂಗ್ ದಲ್ಲೆವಾಲ್ ಸ್ಪಷ್ಟಪಡಿಸಿದ್ದಾರೆ.

ಇದಲ್ಲದೇ ನಕಲಿ ಕೀಟನಾಶಕಗಳ ವಿರುದ್ಧ ಕಟ್ಟುನಿಟ್ಟಿನ ಬೇಡಿಕೆ ಕುರಿತು ಕೇಂದ್ರ ಸಚಿವರು ಮಾತನಾಡಿ, ಕೇಂದ್ರ ಸರ್ಕಾರವು ಈಗಿರುವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಕಲಿ ಔಷಧಗಳ ವಿರುದ್ಧ ಕಠಿಣ ಕಾನೂನು ತರಲಿದೆ ಎಂದರು. ಸಚಿವರು ಬೇಡಿಕೆಗೆ ಸಮ್ಮತಿಸಿದ್ದು, ಪ್ರಸ್ತುತ ಆಂದೋಲನ ಅಂತ್ಯಗೊಂಡ ನಂತರ ಒಂದು ವಾರದೊಳಗೆ ಲಖಿಂಪುರ ಖೇರಿಯಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಬಿಜೆಪಿ ಸರ್ಕಾರದ ಹತ್ತು ವರ್ಷಗಳ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಕೇಂದ್ರ ಸಚಿವರು ಚರ್ಚೆ ನಡೆಸಿದರೂ ರೈತರು ಸೊಪ್ಪು ಹಾಕಿಲ್ಲ.

ದೆಹಲಿಯಲ್ಲಿ ಧರಣಿ ಅನುಮತಿಗೆ ಒತ್ತಾಯ:

ಮೂಲಗಳ ಪ್ರಕಾರ, ಸಭೆಯಲ್ಲಿ ರೈತ ಮುಖಂಡರು ದೆಹಲಿಯಲ್ಲಿ ಪ್ರತಿಭಟನೆಗೆ ಸ್ಥಳವನ್ನು ಕೇಳಿದ್ದಾರೆ. ನಂತರ ಪಿಯೂಷ್ ಗೋಯಲ್ ಅವರು ಪಂಜಾಬ್ ಸರ್ಕಾರವು ಅನುಮೋದಿಸಿದ ಯಾವುದೇ ಸ್ಥಳದಲ್ಲಿ ಕುಳಿತುಕೊಳ್ಳಬಹುದು ಎಂದು ಹೇಳಿದರು. ಜಾಗ ನೀಡುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ಒಪ್ಪಿಗೆ ಸೂಚಿಸಿದ್ದು, ದಿಲ್ಲಿಯಲ್ಲಿ ಧರಣಿ ಸತ್ಯಾಗ್ರಹಕ್ಕೆ ಜಾಗ ನೀಡುವಂತೆ ಆಗ್ರಹಿಸುತ್ತಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೆ ಬ್ಯಾರಿಕೇಡ್‌ಗಳನ್ನು ತೆಗೆದು ದೆಹಲಿಯಲ್ಲಿ ಕುಳಿತುಕೊಳ್ಳಲು ಜಾಗ ನೀಡಬೇಕು ಎಂದು ಮುಖಂಡರು ಸಚಿವರನ್ನು ಒತ್ತಾಯಿಸಿದರು.

ಪಂಜಾಬ್‌ನ ಮೂರು ಜಿಲ್ಲೆಗಳು ಮತ್ತು ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಈಗಾಗಲೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಂಜಾಬ್, ಸಂಗ್ರೂರ್, ಪಟಿಯಾಲ ಮತ್ತು ಫತೇಘರ್ ಸಾಹಿಬ್‌ನ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಫೆಬ್ರವರಿ 16 ರವರೆಗೆ ಬಂದ್ ಮಾಡಲಾಗಿದೆ. ಮತ್ತೊಂದೆಡೆ, ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್, ಮೊಬೈಲ್ ಮತ್ತು ಎಸ್‌ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 17 ರವರೆಗೆ ವಿಸ್ತರಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿವೆ.

ಇದನ್ನೂ ಓದಿ; ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...