Homeಮುಖಪುಟರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

ರೈತರ ದೆಹಲಿ ಚಲೋ ಮೆರವಣಿಗೆ: ಎಂಎಸ್‌ಪಿ ಜಾರಿಗೆ ಒಪ್ಪದ ಕೇಂದ್ರ; ಮೂರನೇ ಸುತ್ತಿನ ಸಭೆಯೂ ವಿಫಲ

- Advertisement -
- Advertisement -

ಚಂಡೀಗಢದಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಸರ್ಕಾರದ ಮೂವರು ಸಚಿವರ ತಂಡ ಮತ್ತು ರೈತರ ಸಂಘನೆಗಳ ನಡುವಿನ ಮೂರನೇ ಸುತ್ತಿನ ಸಭೆಯಲ್ಲಿಯೂ ಕೂಡ ಒಮ್ಮತ ಮೂಡಿಲ್ಲ. ರೈತರ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಬಲ ನೀಡಲು ಸರ್ಕಾರ ನಿರಾಕರಿಸಿದ್ದು, ಇದೀಗ ಉಭಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.

ಇದೀಗ ನಾಲ್ಕನೇ ಸುತ್ತಿನ ಸಭೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಪ್ರತಿಭಟನೆಯೂ ಮುಂದುವರಿಯಲಿದೆ. ಚುನಾವಣಾ ನೀತಿ ಸಂಹಿತೆಗೂ ಮುನ್ನವೇ ಒತ್ತಡ ತಂದು, ತಮ್ಮ ಬೇಡಿಕೆ ಈಡೇರಿಸಿಕೊಳ್ಳಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತ ಮುಖಂಡರಿಗೆ ನಿರಾಶೆಯಾಗಿದೆ. ಇತ್ತ ಕೇಂದ್ರ ಸರ್ಕಾರ ಚುನಾವಣಾ ನೀತಿ ಸಂಹಿತೆ ಮುಗಿಯುವವರೆಗೂ ಮಾತುಕತೆಯನ್ನು ಎಳೆದು ತರಲು ಮುಂದಾಗಿದೆ ಎಂದು ಇಂದಿನ ಸಭೆ ಸೂಚಿಸಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್, ಕೃಷಿ ಸಚಿವ ಅರ್ಜುನ್ ಮುಂಡಾ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರನ್ನೊಳಗೊಂಡ ಮೂರನೇ ಸುತ್ತಿನ ಸಭೆಯ ವಿಫಲವಾಗಿದೆ. ಈ ನಡುವೆ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಧ್ಯಸ್ಥಗಾರನ ಪಾತ್ರವನ್ನು ವಹಿಸಿ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿ ವಿಫಲರಾಗಿದ್ದಾರೆ.

ಸಭೆಯಲ್ಲಿ ಶಂಭು ಮತ್ತು ಖಾನೂರಿ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಶೆಲ್‌ಗಳನ್ನು ಹಾರಿಸಿರುವ ಬಗ್ಗೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಸಭೆಯಲ್ಲಿ ರೈತರ ಮೇಲಿನ ದೌರ್ಜನ್ಯದ ಕೆಲವು ಚಿತ್ರಗಳನ್ನೂ ಮುಖಂಡರು ಕೇಂದ್ರ ಸಚಿವರಿಗೆ ತೋರಿಸಿದರು. ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಇಡೀ ಸಭೆಯು ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿಯ ಮೇಲೆ ಕೇಂದ್ರೀಕರಿಸಿತು. ಬೆಳೆ ಬೆಲೆಗಳ ಕಾನೂನುಬದ್ಧ ಖಾತರಿಯ ವಿಷಯದ ಬಗ್ಗೆ, ಕೇಂದ್ರ ಸಚಿವರು ಭಾರತ ಸರ್ಕಾರವು ಈ ವಿಷಯದ ಬಗ್ಗೆ ಎಲ್ಲ ರಾಜ್ಯಗಳು, ಗ್ರಾಹಕ ವೇದಿಕೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸುತ್ತದೆ. ನಂತರ, ವಿಷಯವನ್ನು ಪರಿಣಾಮಕಾರಿಯಾಗಿ ಎದುರಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಇದರಲ್ಲಿ ಗ್ರಾಹಕರ ಹಿತಾಸಕ್ತಿಗಳನ್ನು ರಕ್ಷಿಸಲು ಸಹ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೆ ಒಪ್ಪದ ರೈತ ಮುಖಂಡರು, ಬೆಳೆ ಬೆಲೆಯ ಖಾತರಿ ಕಾನೂನನ್ನು ಯಾವಾಗ ಮತ್ತು ಯಾವ ಸಮಯಕ್ಕೆ ಮಾಡುತ್ತಾರೆ ಎಂಬ ಬದ್ಧತೆಯನ್ನು ಬಯಸುತ್ತೇವೆ ಎಂದರು. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ ಅವರು, ಸಚಿವ ಪಿಯೂಷ್ ಗೋಯಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಂತರ, ಪಿಯೂಷ್ ಗೋಯಲ್ ಅವರು ರೈತರನ್ನು ಪ್ರತಿನಿಧಿಸುವ ಎಂಎಸ್‌ಪಿ ಮೇಲಿನ ಕಾನೂನು ಖಾತರಿಯ ವಿಷಯವನ್ನು ಚರ್ಚಿಸಲು ಕೇಂದ್ರ ಕೃಷಿ ಸಚಿವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲು ಪ್ರಸ್ತಾಪಿಸಿದರು. ಯಾವುದೇ ಸಮಿತಿಯ ಸದಸ್ಯರಾಗಿರಲು ಇಷ್ಟಪಡುವುದಿಲ್ಲ ಎಂದು ಜಗಜಿತ್ ಸಿಂಗ್ ದಲ್ಲೆವಾಲ್ ಸ್ಪಷ್ಟಪಡಿಸಿದ್ದಾರೆ.

ಇದಲ್ಲದೇ ನಕಲಿ ಕೀಟನಾಶಕಗಳ ವಿರುದ್ಧ ಕಟ್ಟುನಿಟ್ಟಿನ ಬೇಡಿಕೆ ಕುರಿತು ಕೇಂದ್ರ ಸಚಿವರು ಮಾತನಾಡಿ, ಕೇಂದ್ರ ಸರ್ಕಾರವು ಈಗಿರುವ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ನಕಲಿ ಔಷಧಗಳ ವಿರುದ್ಧ ಕಠಿಣ ಕಾನೂನು ತರಲಿದೆ ಎಂದರು. ಸಚಿವರು ಬೇಡಿಕೆಗೆ ಸಮ್ಮತಿಸಿದ್ದು, ಪ್ರಸ್ತುತ ಆಂದೋಲನ ಅಂತ್ಯಗೊಂಡ ನಂತರ ಒಂದು ವಾರದೊಳಗೆ ಲಖಿಂಪುರ ಖೇರಿಯಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಬಿಜೆಪಿ ಸರ್ಕಾರದ ಹತ್ತು ವರ್ಷಗಳ ಅವಧಿಯಲ್ಲಿ ರೈತರ ಕಲ್ಯಾಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಕೇಂದ್ರ ಸಚಿವರು ಚರ್ಚೆ ನಡೆಸಿದರೂ ರೈತರು ಸೊಪ್ಪು ಹಾಕಿಲ್ಲ.

ದೆಹಲಿಯಲ್ಲಿ ಧರಣಿ ಅನುಮತಿಗೆ ಒತ್ತಾಯ:

ಮೂಲಗಳ ಪ್ರಕಾರ, ಸಭೆಯಲ್ಲಿ ರೈತ ಮುಖಂಡರು ದೆಹಲಿಯಲ್ಲಿ ಪ್ರತಿಭಟನೆಗೆ ಸ್ಥಳವನ್ನು ಕೇಳಿದ್ದಾರೆ. ನಂತರ ಪಿಯೂಷ್ ಗೋಯಲ್ ಅವರು ಪಂಜಾಬ್ ಸರ್ಕಾರವು ಅನುಮೋದಿಸಿದ ಯಾವುದೇ ಸ್ಥಳದಲ್ಲಿ ಕುಳಿತುಕೊಳ್ಳಬಹುದು ಎಂದು ಹೇಳಿದರು. ಜಾಗ ನೀಡುವುದಾಗಿ ಮುಖ್ಯಮಂತ್ರಿ ಭಗವಂತ ಮಾನ್ ಒಪ್ಪಿಗೆ ಸೂಚಿಸಿದ್ದು, ದಿಲ್ಲಿಯಲ್ಲಿ ಧರಣಿ ಸತ್ಯಾಗ್ರಹಕ್ಕೆ ಜಾಗ ನೀಡುವಂತೆ ಆಗ್ರಹಿಸುತ್ತಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಬೆಳೆ ಬೆಲೆ ಖಾತ್ರಿ ಕಾನೂನು ಜಾರಿಯಾಗುವವರೆಗೆ ಬ್ಯಾರಿಕೇಡ್‌ಗಳನ್ನು ತೆಗೆದು ದೆಹಲಿಯಲ್ಲಿ ಕುಳಿತುಕೊಳ್ಳಲು ಜಾಗ ನೀಡಬೇಕು ಎಂದು ಮುಖಂಡರು ಸಚಿವರನ್ನು ಒತ್ತಾಯಿಸಿದರು.

ಪಂಜಾಬ್‌ನ ಮೂರು ಜಿಲ್ಲೆಗಳು ಮತ್ತು ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಈಗಾಗಲೆ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಂಜಾಬ್, ಸಂಗ್ರೂರ್, ಪಟಿಯಾಲ ಮತ್ತು ಫತೇಘರ್ ಸಾಹಿಬ್‌ನ ಮೂರು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಫೆಬ್ರವರಿ 16 ರವರೆಗೆ ಬಂದ್ ಮಾಡಲಾಗಿದೆ. ಮತ್ತೊಂದೆಡೆ, ಹರಿಯಾಣದ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್, ಮೊಬೈಲ್ ಮತ್ತು ಎಸ್‌ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 17 ರವರೆಗೆ ವಿಸ್ತರಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಸೇರಿವೆ.

ಇದನ್ನೂ ಓದಿ; ಮಣಿಪುರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಇಬ್ಬರ ಸಾವು, 25 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...