Homeಚಳವಳಿದೇಶದ ಪ್ರಧಾನಿ ಕ್ಷಮೆ ಕೇಳಲಿ ಎಂದು ನಾವು ಬಯಸುವುದಿಲ್ಲ: ರಾಕೇಶ್ ಟಿಕಾಯತ್

ದೇಶದ ಪ್ರಧಾನಿ ಕ್ಷಮೆ ಕೇಳಲಿ ಎಂದು ನಾವು ಬಯಸುವುದಿಲ್ಲ: ರಾಕೇಶ್ ಟಿಕಾಯತ್

- Advertisement -
- Advertisement -

‘ದೇಶದ ಪ್ರಧಾನಮಂತ್ರಿ ಕ್ಷಮೆ ಕೇಳಲಿ ಎಂದು ನಾವು ಬಯಸುವುದಿಲ್ಲ. ವಿದೇಶದಲ್ಲಿ ಅವರ ಪ್ರತಿಷ್ಠೆಯನ್ನು ಹಾಳುಮಾಡಲು ನಾವು ಬಯಸುವುದಿಲ್ಲ’ ಎಂದು ಭಾರತೀಯ ಕಿಸಾನ್ ಯೂನಿಯನ್ ಟಿಕಾಯತ್ ಬಣದ ಮುಖಂಡ ರಾಕೇಶ್ ಟಿಕಾಯತ್‌ ಹೇಳಿದ್ದಾರೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರದ್ದಾದ ವಿವಾದಿತ ಮೂರು ಕೃಷಿ ಕಾನೂನುಗಳ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಟಿಕಾಯತ್, ’ಈ ಹೇಳಿಕೆಯು ರೈತರನ್ನು ಮೋಸಗೊಳಿಸುವ ಉದ್ದೇಶವನ್ನು ಹೊಂದಿದೆ. ಜೊತೆಗೆ ಪ್ರಧಾನಿಯವರನ್ನು ಅವಮಾನಿಸುತ್ತದೆ’ ಎಂದು ಹೇಳಿದ್ದಾರೆ.

“ಪ್ರಧಾನಿ ಕ್ಷಮೆ ಯಾಚಿಸುವುದು ನಮಗೆ ಇಷ್ಟವಿಲ್ಲ, ವಿದೇಶದಲ್ಲಿ ಅವರ ಹೆಸರು ಕೆಡಿಸಲು ನಾವು ಬಯಸುವುದಿಲ್ಲ, ದೇಶದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರು ರೈತರ ಒಪ್ಪಿಗೆಯಿಲ್ಲದೆ ಅದನ್ನು ತೆಗೆದುಕೊಲಾಗುವುದಿಲ್ಲ, ನಾವು ಪ್ರಾಮಾಣಿಕವಾಗಿ ಹೊಲಗಳಲ್ಲಿ ಬೆಳೆ ಬೆಳೆಸಿದ್ದೇವೆ. ಆದರೆ ದೆಹಲಿಯ ಒಕ್ಕೂಟ ಸರ್ಕಾರ ಅದಕ್ಕೆ ಸರಿಯಾದ ಬೆಲೆ ನೀಡಲಿಲ್ಲ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮೂಲಕ ಎಂಎಸ್‌ಪಿ ಜಾರಿ ಬಗ್ಗೆ ಸರ್ಕಾರವನ್ನು ತಿವಿದಿದ್ದಾರೆ.

ಇದನ್ನೂ ಓದಿ: ಇದನ್ನೂ ಓದಿರಿ: ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ವಿವಾದಿತ ಕೃಷಿ ಕಾನೂನುಗಳ ಕುರಿತು ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ್ದ ಸಚಿವ ತೋಮರ್‌, “ನಾವು ಕೃಷಿ ಕಾನೂನುಗಳನ್ನು ತಂದಿದ್ದೇವೆ. ಕೆಲವರು ಅದನ್ನು ಇಷ್ಟಪಡಲಿಲ್ಲ. ಆದರೆ ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಜಾರಿಗೊಳಿಸಿದ ಅತಿದೊಡ್ಡ ಸುಧಾರಣೆಗಳು ಈ ಕಾಯ್ದೆಗಳಾಗಿದ್ದವು. ಸರ್ಕಾರ ನಿರಾಶೆಗೊಂಡಿಲ್ಲ, ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ. ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು. ಬೆನ್ನುಮೂಳೆಯನ್ನು ಬಲಪಡಿಸಿದರೆ ದೇಶವು ಬಲಗೊಳ್ಳುತ್ತದೆ” ಎಂದು ಹೇಳಿಕೆ ನೀಡಿದ್ದರು.

ಕಿಸಾನ್ ಏಕ್ತಾ ಮೋರ್ಚಾ ಸೇರಿದಂತೆ ಪ್ರತಿಪಕ್ಷಗಳು ಖಂಡನೆ ವ್ಯಕ್ತಪಡಿಸಿದ ಬಳಿಕ, ’ನನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ. ತಿದ್ದುಪಡಿ ಮೂಲಕ ಕೃಷಿ ಕಾನೂನುಗಳನ್ನು ಮರು ಪರಿಚಯಿಸುವ ಯಾವುದೇ ಯೋಜನೆ ಕೇಂದ್ರಕ್ಕೆ ಇಲ್ಲ’ ಎಂದು ಸ್ಪಷ್ಟಪಡಿಸಿದ್ದರು.


ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ವಾಪಸ್‌ ತರುವುದಾಗಿ ಹೇಳಿಲ್ಲ: ಕೃಷಿ ಸಚಿವ ತೋಮರ್‌ ಯೂಟರ್ನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....