Homeಮುಖಪುಟರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

- Advertisement -
- Advertisement -

ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮಗೇನು ಬೇಕಿದೆ ಎಂಬುವುದು ತಿಳಿದಿಲ್ಲ, ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್‌ನ ಹಿರಿಯ ನಟಿ ಹೇಮಾ ಮಾಲಿನಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ ಅವರು ಕೃಷಿ ಕಾನೂನಿನ ಬಗ್ಗೆ ಸುಪ್ರೀಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೂಡಾ ಸಹಮತ ವ್ಯಕ್ತಪಡಿಸಿದ್ದು, ಈ ನಿರ್ಧಾರವು ರೈತರ ಆಕ್ರೋಶವನ್ನು ತಣಿಸಲು ಸಹಾಯ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಸಮಯದಲ್ಲಿ ಅವರು ಪಂಜಾಬ್‍ನಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಮೊಬೈಲ್ ಫೋನ್ ಟವರ್‌ಗಳಿಗೆ ಮಾಡಿರುವ ಹಾನಿಯನ್ನು ಖಂಡಿಸಿದ್ದಾರೆ.

ಅಷ್ಟೆಲ್ಲಾ ಮಾತುಕತೆಗಳು ನಡೆದ ನಂತರವೂ ರೈತರು ಸಹಮತಕ್ಕೆ ಬರುತ್ತಿಲ್ಲ. ಅವರಿಗೇನು ಬೇಕೆಂದು ಅಥವಾ ಈ ಕಾನೂನುಗಳಲ್ಲಿ ಏನು ಸಮಸ್ಯೆಯಿದೆ ಎಂಬುದು ಅವರಿಗೆ ತಿಳಿದಿಲ್ಲ. ಇದರರ್ಥ ಯಾರೊ ಹೇಳಿದ್ದರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಮಾ ಮಾಲಿನಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

“ಪಂಜಾಬ್‌ ಸಾಕಷ್ಟು ನಷ್ಟ ಅನುಭವಿಸಿದೆ. ರೈತರು ಮೊಬೈಲ್ ಟವರ್‌ಗಳನ್ನು ಧ್ವಂಸಗೊಳಿಸಿರುವುದು ಉತ್ತಮ ನಡೆಯಲ್ಲ. ಸರ್ಕಾರವು ಹಲವು ಬಾರಿ ಮಾತುಕತೆಗೆ ಆಹ್ವಾನಿಸಿದೆ. ಆದರೆ ಅವರಿಗೆ ಯಾವ ಅಜೆಂಡಾ ಕೂಡಾ ಇಲ್ಲ” ಎಂದು ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯಬೇಕೆಂದು ರೈತರು 49 ದಿನದಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಇದುವರೆಗೂ ಎಂಟು ಬಾರಿ ಮಾತುಕತೆ ನಡೆಸಿದ್ದರೂ ಅವರ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಹೇಳುತ್ತಿಲ್ಲ. ಇದರಿಂದ ಆಕ್ರೋಶಗೊಂಡಿರುವ ರೈತರು ಜನವರಿ 26 ರಂದು ದೆಹಲಿಗೆ ಟ್ರಾಕ್ಟರ್‌ ರ್‍ಯಾಲಿ ನಡೆಸಲು ತೀರ್ಮಾನಿಸಿದ್ದಾರೆ.

ಈ ನಡುವೆ ಸುಪ್ರೀಂಕೋರ್ಟ್ ಮೂರು ಕೃಷಿ ಕಾನೂನುಗಳನ್ನು ಮುಂದಿನ ಆದೇಶದವರೆಗೂ ಅಮಾನತು ಮಾಡಿದೆ. ಕಾನೂನಿನ ಬಗ್ಗೆ ಚರ್ಚಿಸಲು ಸಮಿತಿಯೊಂದನ್ನು ಕೋರ್ಟ್ ರಚಿಸಿದ್ದು, ಅದರಲ್ಲಿ ಕಾನೂನನ್ನು ಸಮರ್ಥಿಸುವವರೇ ಇರುವುದರಿಂದ ಅದನ್ನು ಪ್ರತಿಭಟನಾ ನಿರತ ರೈತರು ಬಹಿಷ್ಕರಿಸಿದ್ದಾರೆ.

ಇದನ್ನೂ ಓದಿ: ರೈತರ ಕೊರಳಿಗೆ ಬಿದ್ದ ರೇಶಿಮೆ ಕುಣಿಕೆ; ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅವಲೋಕನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...