Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...