Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...