Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಅಂತರರಾಷ್ಟ್ರೀಯ ಕಾನೂನು ಸತ್ತಿದೆ ಎಂದ ರಷ್ಯಾ, ಯುಎನ್ಎಸ್‌ಸಿ ಪಿ-5 ಶೃಂಗಸಭೆಗೆ ಒತ್ತಾಯ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಇರಾನ್ ಮೇಲೆ ಅಮೆರಿಕ-ಇಸ್ರೇಲಿ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಅಂತರರಾಷ್ಟ್ರೀಯ ಕಾನೂನು ಪರಿಣಾಮಕಾರಿಯಾಗಿ ಸತ್ತಿದೆ ಎಂದು ರಷ್ಯಾ ಹೇಳಿದೆ ಮತ್ತು ಯುಎನ್ ಭದ್ರತಾ...

ಕೊಚ್ಚಿ ಬಂದರಿನಲ್ಲಿ ಇರಾನ್ ಯುದ್ಧನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನ : ಇಬ್ಬರು ‘ರಿಪಬ್ಲಿಕ್ ಟಿವಿ’ ಪತ್ರಕರ್ತರ ಬಂಧನ-ವರದಿ

ಕೇರಳದ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿರುವ ಇರಾನಿನ ಯುದ್ಧ ನೌಕೆಯ ವಿಡಿಯೋ ಸೆರೆಹಿಡಿಯಲು ಯತ್ನಿಸಿದ ಇಬ್ಬರು ರಿಪಬ್ಲಿಕ್ ಟಿವಿ ಪತ್ರಕರ್ತರು ಸೇರಿದಂತೆ ಮೂವರನ್ನು ಶನಿವಾರ (ಮಾ.7) ಬಂಧಿಸಲಾಗಿದೆ ಎಂದು thenewsminute.com ವರದಿ ಮಾಡಿದೆ. ಅಂತಾರಾಷ್ಟ್ರೀಯ...

ಬಿಹಾರ | ಅಧಿಕೃತವಾಗಿ ಜೆಡಿಯು ಸೇರಿದ ನಿತೀಶ್ ಕುಮಾರ್ ಮಗ ನಿಶಾಂತ್ ಕುಮಾರ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ ನಿಶಾಂತ್ ಕುಮಾರ್ ಅವರು ಭಾನುವಾರ (ಮಾ.8) ಔಪಚಾರಿಕವಾಗಿ ಜೆಡಿಯು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಅಧಿಕೃತವಾಗಿ ರಾಜಕೀಯಕ್ಕೆ ಪಾದಾರ್ಪಾಣೆ ಮಾಡಿದ್ದಾರೆ. ಸಿಎಂ ನಿತೀಶ್ ಕುಮಾರ್...

ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಹೆಚ್ಚಳ; 2025 ರ ವರದಿಯಲ್ಲಿ 3.6 ಲಕ್ಷ ದಾಟಿದ ಅತಿಸಾರ ಪ್ರಕರಣಗಳು

ಮುಂಬೈ: ಮಹಾರಾಷ್ಟ್ರದಲ್ಲಿ ನೀರಿನಿಂದ ಹರಡುವ ರೋಗಗಳ ಸಂಖ್ಯೆ ಹೆಚ್ಚುತ್ತಿರುವುದು ಆರೋಗ್ಯ ಅಧಿಕಾರಿಗಳಲ್ಲಿ ಕಳವಳವನ್ನು ಮೂಡಿಸಿದೆ.  ಅಧಿಕೃತ ಅಂಕಿಅಂಶಗಳು ಪ್ರತಿ ವರ್ಷ ಸಾವಿರಾರು ಜನರು ಕಲುಷಿತ ನೀರು ಮತ್ತು ಕಳಪೆ ನೈರ್ಮಲ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ...

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆರೋಪ : ಬಂಗಾಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಕೇಂದ್ರ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪಶ್ಚಿಮ ಬಂಗಾಳ ಭೇಟಿಗೆ ಸಂಬಂಧಿಸಿದಂತೆ ರಾಜ್ಯದ ಟಿಎಂಸಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನಡುವೆ ರಾಜಕೀಯ ಕಿತ್ತಾಟ ತೀವ್ರಗೊಂಡಂತೆ ಗೋಚರಿಸುತ್ತಿದೆ. ರಾಷ್ಟ್ರಪತಿ ಭೇಟಿಯ ವೇಳೆ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಒಂದು ವಾರದಲ್ಲಿ ಗಲ್ಫ್ ದೇಶಗಳಿಂದ 52,000 ಕ್ಕೂ ಹೆಚ್ಚು ಭಾರತೀಯರು ಮರಳಿದ್ದಾರೆ: ವಿದೇಶಾಂಗ ಸಚಿವಾಲಯ

ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸರ್ಕಾರ ಮೇಲ್ವಿಚಾರಣೆ ಮಾಡುತ್ತಿರುವುದರಿಂದ ಮಾರ್ಚ್ 1 ರಿಂದ 7 ರವರೆಗೆ ಗಲ್ಫ್ ಪ್ರದೇಶದಿಂದ 52,000 ಕ್ಕೂ ಹೆಚ್ಚು ಭಾರತೀಯರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

‘ನೀವು ಅಮೆರಿಕನ್ನರನ್ನು ಕೊಂದರೆ ನಾವು, ನಿಮ್ಮನ್ನು ಬೇಟೆಯಾಡುತ್ತೇವೆ’: ಅಮೆರಿಕ ಬೆದರಿಕೆ 

ವಾಷಿಂಗ್ಟನ್: "ನೀವು ಅಮೆರಿಕನ್ನರನ್ನು ಕೊಂದರೆ, ನಾವು ನಿಮ್ಮನ್ನು ಬೇಟೆಯಾಡುತ್ತೇವೆ" ಎಂದು ಯುದ್ಧ ಕಾರ್ಯದರ್ಶಿ ಪೀಟ್ ಹೆಗ್ಸೆತ್ ರೀಡ್ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಪೋಸ್ಟ್ ಹಾಕಿದ್ದಾರೆ.  ಅಮೆರಿಕ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಯಾವುದೇ ದೇಶ...

ಬಳ್ಳಾರಿ | ವಸತಿ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಸಹಪಾಠಿಗಳ ಮೇಲೆ ದಾಳಿ : ಓರ್ವ ಸಾವು, 8 ಜನರಿಗೆ ಗಾಯ

ಬಳ್ಳಾರಿ ನಗರದ 'ಗುರುಕುಲ ವಸತಿ ಶಾಲೆ'ಯಲ್ಲಿ ಶನಿವಾರ (ಮಾ.7) ರಾತ್ರಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಗಳ ಮೇಲೆ ರಾಡ್, ಸ್ಕ್ರೂ ಡ್ರೈವರ್‌ನಿಂದ ದಾಳಿ ನಡೆಸಿದ್ದು, ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಎಂಟು ಜನರು ಗಾಯಗೊಂಡಿದ್ದಾರೆ...

ಗೋವುಗಳ ಕಳ್ಳಸಾಗಣೆ ಆರೋಪ: ಹಣ್ಣು-ತರಕಾರಿ ಸಾಗಿಸುತ್ತಿದ್ದ 28 ವರ್ಷದ ಮುಸ್ಲಿಂ ಚಾಲಕನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಹಿಂದುತ್ವ ಗುಂಪು

ಭಿವಾಡಿ: ರಾಜಸ್ಥಾನದ ಭಿವಾಡಿ ಪ್ರದೇಶದಲ್ಲಿ ಮಾರ್ಚ್ 2 ರ ಮುಂಜಾನೆ 28 ವರ್ಷದ ಆಮಿರ್ ಎಂಬ ವ್ಯಕ್ತಿಯನ್ನು ಗೋರಕ್ಷಕರು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಅಕ್ರಮವಾಗಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾರೆಂದು ಶಂಕಿಸಿ ಬಜರಂಗದಳದ ಸದಸ್ಯರು...