Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...