Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....