Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...