Homeಚಳವಳಿರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದರು.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 25 ದಿನದಿಂದ ಕೇಂದ್ರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪ್ರಾರಂಭಿಸಿದ್ದ ’ಕಿಸಾನ್ ಏಕತಾ ಮೋರ್ಚಾ’ ಫೇಸ್‌ಬುಕ್ ಮತ್ತು ನ್ಸ್ಟಾಗ್ರಾಮ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಫೇಸ್‌‌ಬುಕ್‌ನ ಈ ಕೃತ್ಯಕ್ಕೆ ದೇಶದಾದ್ಯಂತ ಆಕ್ರೋಶವೆದ್ದಿದ್ದು, ಸ್ವಲ್ಪ ಸಮಯದ ನಂತರ ಖಾತೆಗಳ ಮೇಲಿನ ನಿಷೇಧ ವಾಪಾಸ್ ಪಡೆದುಕೊಂಡಿದೆ.

ಹಿಂದಿನಿಂದಲೂ ಈ ಆರೋಪಗಳನ್ನು ಪ್ರತಿಭಟನಾಕಾರರು ಮಾಡುತ್ತಿದ್ದು, ಭಾನುವಾರ ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಲೈವ್ ನೀಡಿದ ನಂತರ ನಿರ್ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

ಚಳವಳಿಗೆ ಬಳಸಲಾಗುತ್ತಿರುವ 7 ಲಕ್ಷಕ್ಕೂ ಹೆಚ್ಚು ಫಾಲೋವರ್‌‌ಗಳಿರುವ ಅತಿದೊಡ್ಡ ಪೇಜ್‌ಗಳಲ್ಲಿ ಒಂದಾದ “ಕಿಸಾನ್ ಏಕ್ತಾ ಮೋರ್ಚಾ”ದ ವ್ಯವಸ್ಥಾಪಕರು, ”ಸಮುದಾಯದ ಮಾನದಂಡಗಳಿಗೆ ವಿರುದ್ದವಾಗಿದೆ”(against its community standards on spam) ಎಂದು ಫೇಸ್‌ಬುಕ್‌ನಿಂದ ತಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನ ಒಡೆತನದಲ್ಲಿರುವ ಇನ್‌ಸ್ಟಾಗ್ರಾಮ್‌ನಲ್ಲಿ ಕೂಡಾ ತಮ್ಮ ಪೇಜ್‌ನಲ್ಲಿ ಇದೇ ರೀತಿಯಾಗಿ ನಿರ್ಬಧಿಸಲಾಗಿದೆ ಮತ್ತು ಹೊಸ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.  ಫೇಸ್‌ಬುಕ್ಟ್ವಿಟ್ಟರ್ ಅಕೌಂಟ್‌ಗಳನ್ನು ಸಹ ತೆರೆಯಲಾಗಿದ್ದು ತಲಾ 70 ಸಾವಿರ ಫಾಲೋವರ್ಸ್ ಪಡೆದಿವೆ. ಹೋರಾಟದ ಎಲ್ಲಾ ವಿವರಗಳನ್ನು ಈ ಚಾನೆಲ್‌ಗಳ ಮೂಲಕ ನೀಡಲಾಗುತ್ತಿದೆ.

ಇದನ್ನೂ ಓದಿ: ಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...