Homeಚಳವಳಿರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ರೈತ ಹೋರಾಟಗಾರರು ಪ್ರಾರಂಭಿಸಿದ್ದ ಫೇಸ್‌‌ಬುಕ್‌, ಇನ್ಸ್ಟಾಗ್ರಾಮ್ ಖಾತೆಗಳ ಮೇಲಿನ ನಿಷೇಧ ವಾಪಾಸ್!

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದರು.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಕಳೆದ 25 ದಿನದಿಂದ ಕೇಂದ್ರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪ್ರಾರಂಭಿಸಿದ್ದ ’ಕಿಸಾನ್ ಏಕತಾ ಮೋರ್ಚಾ’ ಫೇಸ್‌ಬುಕ್ ಮತ್ತು ನ್ಸ್ಟಾಗ್ರಾಮ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಫೇಸ್‌‌ಬುಕ್‌ನ ಈ ಕೃತ್ಯಕ್ಕೆ ದೇಶದಾದ್ಯಂತ ಆಕ್ರೋಶವೆದ್ದಿದ್ದು, ಸ್ವಲ್ಪ ಸಮಯದ ನಂತರ ಖಾತೆಗಳ ಮೇಲಿನ ನಿಷೇಧ ವಾಪಾಸ್ ಪಡೆದುಕೊಂಡಿದೆ.

ಹಿಂದಿನಿಂದಲೂ ಈ ಆರೋಪಗಳನ್ನು ಪ್ರತಿಭಟನಾಕಾರರು ಮಾಡುತ್ತಿದ್ದು, ಭಾನುವಾರ ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಲೈವ್ ನೀಡಿದ ನಂತರ ನಿರ್ಬಂಧಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

ಚಳವಳಿಗೆ ಬಳಸಲಾಗುತ್ತಿರುವ 7 ಲಕ್ಷಕ್ಕೂ ಹೆಚ್ಚು ಫಾಲೋವರ್‌‌ಗಳಿರುವ ಅತಿದೊಡ್ಡ ಪೇಜ್‌ಗಳಲ್ಲಿ ಒಂದಾದ “ಕಿಸಾನ್ ಏಕ್ತಾ ಮೋರ್ಚಾ”ದ ವ್ಯವಸ್ಥಾಪಕರು, ”ಸಮುದಾಯದ ಮಾನದಂಡಗಳಿಗೆ ವಿರುದ್ದವಾಗಿದೆ”(against its community standards on spam) ಎಂದು ಫೇಸ್‌ಬುಕ್‌ನಿಂದ ತಮ್ಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಫೇಸ್‌ಬುಕ್‌ನ ಒಡೆತನದಲ್ಲಿರುವ ಇನ್‌ಸ್ಟಾಗ್ರಾಮ್‌ನಲ್ಲಿ ಕೂಡಾ ತಮ್ಮ ಪೇಜ್‌ನಲ್ಲಿ ಇದೇ ರೀತಿಯಾಗಿ ನಿರ್ಬಧಿಸಲಾಗಿದೆ ಮತ್ತು ಹೊಸ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ವಿಶ್ವದಾದ್ಯಂತ ಭಾರಿ ಜನಬೆಂಬಲ ಗಳಿಸಿದ್ದ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.  ಫೇಸ್‌ಬುಕ್ಟ್ವಿಟ್ಟರ್ ಅಕೌಂಟ್‌ಗಳನ್ನು ಸಹ ತೆರೆಯಲಾಗಿದ್ದು ತಲಾ 70 ಸಾವಿರ ಫಾಲೋವರ್ಸ್ ಪಡೆದಿವೆ. ಹೋರಾಟದ ಎಲ್ಲಾ ವಿವರಗಳನ್ನು ಈ ಚಾನೆಲ್‌ಗಳ ಮೂಲಕ ನೀಡಲಾಗುತ್ತಿದೆ.

ಇದನ್ನೂ ಓದಿ: ಇಂದು ನೀವು ಮಿಸ್ ಮಾಡಿರುವ ’ನಾನುಗೌರಿ.ಕಾಮ್‌’ನ ಟಾಪ್ 5 ಸುದ್ದಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...