Homeಮುಖಪುಟಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ತೋಹಾನಾ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಹರಿಯಾಣ ಜೆಜೆಪಿ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಕೊನೆಗೂ ತಪ್ಪೊಪ್ಪಿಕೊಂಡು ರೈತರ ಬಳಿ ಕ್ಷಮೆ ಯಾಚಿಸಿದ್ದಾರೆ.

ಹರಿಯಾಣದಲ್ಲಿ ಜಜೆಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಅದರ ಶಾಸಕ ಜೂನ್ 1 ರಂದು ತೋಹಾನಾದಲ್ಲಿ ಪ್ರತಿಭಟಿಸಿದ ರೈತರ ಕುರಿತು ಹಗುರವಾಗಿ ಮಾತನಾಡಿದ್ದರು. ವಿವಾದ ಭುಗಿಲೆದ್ದ ನಂತರ ಹೋರಾಟನಿರತ ರೈತರೊಂದಿಗೆ ಸಭೆ ನಡೆಸಿ ಕ್ಷಮೆ ಕೋರಿದ್ದಾರೆ.

`ಜೂನ್‌ 1 ರಂದು ನಡೆದ ಘಟನೆಯಲ್ಲಿ ಭಾಗಿಯಾದವರನ್ನು ನಾನು ಕ್ಷಮಿಸುತ್ತೇನೆ ಹಾಗೂ ಒಬ್ಬ ಜನಪ್ರತಿನಿಧಿಯಾಗಿ ಅಂದು ನಾನು ಆ ಪದಗಳನ್ನು ಬಳಸಿದ್ದಾಕ್ಕಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆ ಯಾಚಿಸುತ್ತೇನೆ’ ಎಂದು ಶನಿವಾರ ಸಂಜೆ ರೈತ ಮುಖಂಡರೊಂದಿಗಿನ ಸಭೆಯ ನಂತರ ಅವರು ತಿಳಿಸಿದರು.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ರವರು ದೇವೇಂದ್ರ ಸಿಂಗ್‌ ಬಾಬ್ಲಿಯವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ. `ಶಾಸಕರು ಕ್ಷಮೆಯಾಚಿಸಿರುವುದು ಒಳ್ಳೆಯದು… ಈಗ ರೈತ ಸಮಿತಿ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಶಾಸಕರ ಕ್ಷಮೆಯಾಚನೆಯ ಹೊರತಾಗಿಯೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮಂಗಳವಾರದ ಘರ್ಷಣೆಯ ನಂತರ ಬಂಧಿಸಲ್ಪಟ್ಟ ಮೂವರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ಅವರ ನೇತೃತ್ವದಲ್ಲಿ ನೂರಾರು ರೈತರು ತೋಹಾನ ಪೊಲೀಸ್‌ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ದೇವೇಂದ್ರ ಬಾಬ್ಲಿ ಅವರು ಕ್ಷಮೆಯಾಚಿಸಿದ್ದಾರೆ.

ಶಾಸಕರ ಹೇಳಿಕೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಬಾಬ್ಲಿ ಅವರು ಕ್ಷಮೆಯಾಚಿಸದಿದ್ದರೆ ಸೋಮವಾರ ಹರಿಯಾಣದಾದ್ಯಂತ ಪೊಲೀಸ್‌ ಠಾಣೆಗಳನ್ನು  ಮುತ್ತಿಗೆ ಹಾಕುವುದಾಗಿ ರೈತರು ಎಚ್ಚರಿಸಿದ್ದರು.

ತೋಹಾನದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರೈತರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಿಸಲಾಗಿದ್ದು, ಶಾಸಕರ ಮೇಲೆ ದೈಹಿಕ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಘರ್ಷಣೆ ನಡೆದ ಮರುದಿನ ರೈತರು ಶಾಸಕರ ಮನೆಗೆ ಮುತ್ತಿಗೆ ಹಾಕಿದ್ದು, ಈ ಕುರಿತು ಪ್ರಕರಣವನ್ನು ನೋಂದಾಯಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 30 ಜನ ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಈ ಕುರಿತು ದೂರು ನೀಡಿದ್ದ ದೇವೇಂದ್ರ ಬಾಬ್ಲಿ ಅವರು, `ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಪ್ರತಿಭಟನಾಕಾರರು ನಮ್ಮ ವಾಹನದ ಮೇಲೆ ಮೂರು ಬಾರಿ ಹಲ್ಲೆ ನಡೆಸಿದರು ಹಾಗೂ ನನ್ನ ಜೊತೆಯಲ್ಲಿದ್ದವರನ್ನು ಗಾಯಗೊಳಿಸಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಮೇಲಿನ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪವನ್ನು ಅವರು ನಿರಾಕರಿಸಿದ್ದರು.

ರೈತ ಮುಖಂಡ ಗುರ್ನಾಮ್‌ ಸಿಂಗ್‌ ಚಾದುನಿ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದ್ದಾರೆ. `ಈ ಆಂದೋಲನವನ್ನು ಮುರಿಯುವಂತಹ ಯಾವುದೇ ಹೆಜ್ಜೆಯನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಒಂದು ಸಣ್ಣ ನಷ್ಟವು ಭಾರಿ ವೆಚ್ಚವನ್ನುಂಟು ಮಾಡುತ್ತದೆ. ಹಾಗಾಗಿ ನಾವು ಶಾಂತಿಯುತ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರಿ ಪ್ರಮಾಣದಲ್ಲಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...