Homeಮುಖಪುಟಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ತೋಹಾನಾ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಹರಿಯಾಣ ಜೆಜೆಪಿ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಕೊನೆಗೂ ತಪ್ಪೊಪ್ಪಿಕೊಂಡು ರೈತರ ಬಳಿ ಕ್ಷಮೆ ಯಾಚಿಸಿದ್ದಾರೆ.

ಹರಿಯಾಣದಲ್ಲಿ ಜಜೆಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಅದರ ಶಾಸಕ ಜೂನ್ 1 ರಂದು ತೋಹಾನಾದಲ್ಲಿ ಪ್ರತಿಭಟಿಸಿದ ರೈತರ ಕುರಿತು ಹಗುರವಾಗಿ ಮಾತನಾಡಿದ್ದರು. ವಿವಾದ ಭುಗಿಲೆದ್ದ ನಂತರ ಹೋರಾಟನಿರತ ರೈತರೊಂದಿಗೆ ಸಭೆ ನಡೆಸಿ ಕ್ಷಮೆ ಕೋರಿದ್ದಾರೆ.

`ಜೂನ್‌ 1 ರಂದು ನಡೆದ ಘಟನೆಯಲ್ಲಿ ಭಾಗಿಯಾದವರನ್ನು ನಾನು ಕ್ಷಮಿಸುತ್ತೇನೆ ಹಾಗೂ ಒಬ್ಬ ಜನಪ್ರತಿನಿಧಿಯಾಗಿ ಅಂದು ನಾನು ಆ ಪದಗಳನ್ನು ಬಳಸಿದ್ದಾಕ್ಕಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆ ಯಾಚಿಸುತ್ತೇನೆ’ ಎಂದು ಶನಿವಾರ ಸಂಜೆ ರೈತ ಮುಖಂಡರೊಂದಿಗಿನ ಸಭೆಯ ನಂತರ ಅವರು ತಿಳಿಸಿದರು.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ರವರು ದೇವೇಂದ್ರ ಸಿಂಗ್‌ ಬಾಬ್ಲಿಯವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ. `ಶಾಸಕರು ಕ್ಷಮೆಯಾಚಿಸಿರುವುದು ಒಳ್ಳೆಯದು… ಈಗ ರೈತ ಸಮಿತಿ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಶಾಸಕರ ಕ್ಷಮೆಯಾಚನೆಯ ಹೊರತಾಗಿಯೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮಂಗಳವಾರದ ಘರ್ಷಣೆಯ ನಂತರ ಬಂಧಿಸಲ್ಪಟ್ಟ ಮೂವರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ಅವರ ನೇತೃತ್ವದಲ್ಲಿ ನೂರಾರು ರೈತರು ತೋಹಾನ ಪೊಲೀಸ್‌ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ದೇವೇಂದ್ರ ಬಾಬ್ಲಿ ಅವರು ಕ್ಷಮೆಯಾಚಿಸಿದ್ದಾರೆ.

ಶಾಸಕರ ಹೇಳಿಕೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಬಾಬ್ಲಿ ಅವರು ಕ್ಷಮೆಯಾಚಿಸದಿದ್ದರೆ ಸೋಮವಾರ ಹರಿಯಾಣದಾದ್ಯಂತ ಪೊಲೀಸ್‌ ಠಾಣೆಗಳನ್ನು  ಮುತ್ತಿಗೆ ಹಾಕುವುದಾಗಿ ರೈತರು ಎಚ್ಚರಿಸಿದ್ದರು.

ತೋಹಾನದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರೈತರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಿಸಲಾಗಿದ್ದು, ಶಾಸಕರ ಮೇಲೆ ದೈಹಿಕ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಘರ್ಷಣೆ ನಡೆದ ಮರುದಿನ ರೈತರು ಶಾಸಕರ ಮನೆಗೆ ಮುತ್ತಿಗೆ ಹಾಕಿದ್ದು, ಈ ಕುರಿತು ಪ್ರಕರಣವನ್ನು ನೋಂದಾಯಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 30 ಜನ ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಈ ಕುರಿತು ದೂರು ನೀಡಿದ್ದ ದೇವೇಂದ್ರ ಬಾಬ್ಲಿ ಅವರು, `ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಪ್ರತಿಭಟನಾಕಾರರು ನಮ್ಮ ವಾಹನದ ಮೇಲೆ ಮೂರು ಬಾರಿ ಹಲ್ಲೆ ನಡೆಸಿದರು ಹಾಗೂ ನನ್ನ ಜೊತೆಯಲ್ಲಿದ್ದವರನ್ನು ಗಾಯಗೊಳಿಸಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಮೇಲಿನ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪವನ್ನು ಅವರು ನಿರಾಕರಿಸಿದ್ದರು.

ರೈತ ಮುಖಂಡ ಗುರ್ನಾಮ್‌ ಸಿಂಗ್‌ ಚಾದುನಿ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದ್ದಾರೆ. `ಈ ಆಂದೋಲನವನ್ನು ಮುರಿಯುವಂತಹ ಯಾವುದೇ ಹೆಜ್ಜೆಯನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಒಂದು ಸಣ್ಣ ನಷ್ಟವು ಭಾರಿ ವೆಚ್ಚವನ್ನುಂಟು ಮಾಡುತ್ತದೆ. ಹಾಗಾಗಿ ನಾವು ಶಾಂತಿಯುತ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರಿ ಪ್ರಮಾಣದಲ್ಲಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...