Homeಚಳವಳಿಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

ಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

- Advertisement -
- Advertisement -

ಕಳೆದ ವರ್ಷದ (2024) ಫೆಬ್ರವರಿಯಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಮತ್ತು ಶಂಭು ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶುಕ್ರವಾರ (ಫೆ.14) ಕೇಂದ್ರ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿದ್ದ ಸಚಿವ ಪ್ರಲ್ಹಾದ್ ಜೋಶಿ ರೈತ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಆದರೆ, ರೈತರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸಚಿವ ಮುಂದಿಟ್ಟಿದ್ದಾರೆ. ಇದರಿಂದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ 28 ಸದಸ್ಯರ ರೈತ ನಾಯಕರ ನಿಯೋಗ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸಾಲ ಮನ್ನಾ, ಪ್ರತಿಭಟನಾ ನಿರತ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಬಲಿಪಶುಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ಕಳೆದ ವರ್ಷದ (2024) ನವೆಂಬರ್ 26ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಮೊಮ್ಮಗಳ ಮರಣದ ನಡುವೆಯೂ ಅವರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

“ನಾವು ನಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಅದಕ್ಕೆ ಕೇಂದ್ರ ಸಚಿವರ ಬಳಿ ಸಮರ್ಪಕರ ಉತ್ತರ ಸಿಕ್ಕಿಲ್ಲ. ಸಾಧ್ಯವಾದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಪ್ರಧಾನಿ ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇವೆ” ಎಂದು ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕೃಷಿ ಸಚಿವರ ಸಮ್ಮುಖದಲ್ಲಿ ಚರ್ಚಿಸಬೇಕಷ್ಟೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾಗಿ ಪಂಧೇರ್ ತಿಳಿಸಿದ್ದಾರೆ.

ಸರ್ಕಾರವು ಶಂಭು ಗಡಿಯನ್ನು ತೆರೆಯಬೇಕೆಂದು ಪಂಧೇರ್ ಒತ್ತಾಯಿಸಿದ್ದು, ಇನ್ನೊಂದು ಬದಿಯಲ್ಲಿರುವ ಉದ್ಯಮಿಗಳು ಮತ್ತು ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.

“ದೇಶದ ವಿವಿಧ ಕಡೆಗಳಿಂದ ಹಲವಾರು ರೈತ ಮುಖಂಡರು ಇಲ್ಲಿಗೆ (ಚಂಡೀಗಢ) ಬಂದಿರುವುದರಿಂದ ನಾವು ದೆಹಲಿಗೆ ಹೋಗಲು ಬಯಸಿದ್ದೇವೆ. ಪ್ರಯಾಣದ ವಿಷಯದಲ್ಲೂ ದೆಹಲಿ ಹೋಗುವುದು ಸುಲಭ” ಎಂದು ಪಂಧೇರ್ ಹೇಳಿದ್ದಾರೆ.

ಈ ನಡುವೆ, ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ದಲ್ಲೇವಾಲ್ ಅವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ದಲ್ಲೇವಾಲ್ ತಿಳಿಸಿದ್ದಾರೆ.

ರೈತರು ಮತ್ತು ಕೇಂದ್ರದ ನಡುವಿನ ಮುಂದಿನ ಸಭೆ ಫೆಬ್ರವರಿ 22ರಂದು ನಿಗದಿಯಾಗಿದ್ದು, ರೈತರು ದೆಹಲಿಯಲ್ಲಿ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಲ್ಹಾದ್ ಜೋಶಿ ಹೇಳಿದ್ದೇನು? 

ರೈತ ನಾಯಕರೊಂದಿಗಿನ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, ಚಂಡೀಗಢದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಜೊತೆ ಮಹತ್ವದ ಸಭೆ ನಡೆಸಿ, ರೈತ ಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿದೆವು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೈತರ ಕಲ್ಯಾಣಕ್ಕಾಗಿ ನಾವು ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಎತ್ತಿ ತೋರಿಸಿದ್ದೇವೆ. ರೈತರೊಂದಿಗೆ ಮಾತುಕತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ. ಮಾತುಕತೆಗಳು ಸಕಾರಾತ್ಮಕವಾಗಿ ಪ್ರಾರಂಭವಾಗಿರುವುದರಿಂದ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ನಾನು ಮನವಿ ಮಾಡಿದ್ದೇನೆ.

ಮುಂದಿನ ನಿರ್ಣಾಯಕ ಸಭೆ ಫೆಬ್ರವರಿ 22ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರ
ನೇತೃತ್ವದಲ್ಲಿ ನಡೆಯಲಿದೆ. ರೈತರ ಕಳವಳಗಳನ್ನು ಪ್ರಾಮಾಣಿಕತೆ ಮತ್ತು ಅತ್ಯಂತ ದೃಢ ನಿಶ್ಚಯದಿಂದ ಪರಿಹರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಭದ್ರತಾ ಪಡೆಗಳು ದೆಹಲಿಗೆ ಮೆರವಣಿಗೆ ನಡೆಸಲು ಅವಕಾಶ ನೀಡದಿರುವ ಹಿನ್ನೆಲೆ, ಕಳೆದ ವರ್ಷದ (2024) ಫೆಬ್ರವರಿ 13ರಿಂದ ರೈತರು ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ಬ್ಯಾನರ್ ಅಡಿಯಲ್ಲಿ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿ ಪ್ರತಿಭಟಿಸುತ್ತಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...