Homeಮುಖಪುಟರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ‘ಟೂಲ್‌ಕಿಟ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಿಶಾ ಅವರಿಗೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿದೆ.

ಕಮಲಾ ಹ್ಯಾರಿಸ್ ಅವರ ಸಂಬಂಧಿ ಮತ್ತು ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ದಿಶಾ ರವಿಗೆ ಬೆಂಬಲ ಸೂಚಿಸಿದ್ದು, “ರೈತರ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರಿಂದ ಭಾರತೀಯ ಅಧಿಕಾರಿಗಳು ಮತ್ತೊಬ್ಬ ಯುವ ಮಹಿಳಾ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ಬಂಧಿಸಿದ್ದಾರೆ. ಇಂತಹ ಹೋರಾಟಗಾರರನ್ನು ಸರ್ಕಾರ ಗುರಿಯಾಗಿಸಿಕೊಂಡು ಏಕೆ ಅವರ ಬಾಯಿಮುಚ್ಚಿಸುತ್ತಿದೆ ಎಂದು ಕೇಳಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ದಿಶಾ ರವಿಯವರಿಗೆ ಬಹುಭಾಷಾ ನಟ ಸಿದ್ದಾರ್ಥ್ ಬೆಂಬಲ ಸೂಚಿಸಿದ್ದು, “ದಿಶಾ ರವಿಯವರೊಂದಿಗೆ ಬೇಷರತ್ ನಿಲ್ಲುತ್ತೇವೆ. ನಿನಗೆ ಹೀಗಾಗಿರುವುದಕ್ಕೆ ನಮ್ಮನ್ನು ಕ್ಷಮಿಸು ಸಹೋದರಿ. ನಾವೆಲ್ಲರೂ ನಿನ್ನೊಂದಿಗೆ ಇದ್ದೇವೆ. ದೃಢವಾಗಿರು. ಈ ಅನ್ಯಾಯವೂ ಕಳೆದಹೋಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯಾಟವನ್ನೂ ಸೆರೆಹಿಡಿಯಿರಿ’-ಮೋದಿಗೆ ನೆಟ್ಟಿಗರ ತರಾಟೆ

ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, “ಇದು ದೌರ್ಜನ್ಯದ ಪರಮಾವಧಿ. ಇದು ಕಾನೂನುಬಾಹಿರ ಕಿರುಕುಳ ಮತ್ತು ಬೆದರಿಕೆಯಾಗಿದೆ. ದಿಶಾ ರವಿಯವರಿಗೆ ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಬರೆದುಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿ, “21 ವರ್ಷದ ದಿಶಾ ರವಿ ದೇಶಕ್ಕೆ ತೊಂದರೆಯುಂಟು ಮಾಡುತ್ತಾರೆ ಎನ್ನುವುದಾದರೆ, ದೇಶದ ಬುಡ ಗಟ್ಟಿಯಿಲ್ಲ ಎನಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ಸಿಪಿಐ ನ ಮುಖಂಡರಾದ ಸೀತಾರಾಂ ಯೆಚೋರಿ ಟ್ವೀಟ್ ಮಾಡಿ, “ರೈತರ ಮೊಮ್ಮಗಳನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದರೆ ಅದು ರೈತರ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದು ಮೋದಿ ಸರ್ಕಾರ ಎಣಿಸುತ್ತಿದೆ. ವಾಸ್ತವವಾಗಿ, ಇದು ದೇಶದ ಯುವಕರನ್ನು ಜಾಗೃತಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವದ ಹೋರಾಟಗಳನ್ನು ಬಲಪಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, “ದಿಶಾ ರವಿಯ ಬಂಧನ ಪ್ರಜಾಪ್ರಭುತ್ವದ ಮೇಲಿನ ಅಸಾಂವಿಧಾನಿಕ ದಾಳಿಯಾಗಿದೆ. ರೈತರನ್ನು ಬೆಂಬಲಿಸುವುದು ಅಪರಾಧವಲ್ಲ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಪರಿಸರ ಹೋರಾಟಗಾರ್ತಿ ದಿಶಾ ರವಿಯ ಬಂಧನ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವದಲ್ಲಿ ಬಿಟ್ಟಿರುವ ಬಿರುಕನ್ನು ತೋರಿಸುತ್ತಿದೆ. ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಹೇಗೆ ಬರುತ್ತದೆ. ದೆಹಲಿ ಪೊಲೀಸರ ರಾಜಕೀಯ ಪ್ರೇರಿತವಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...