Homeಮುಖಪುಟರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

ರೈತರ ಮೊಮ್ಮಗಳನ್ನು ಬಂಧಿಸಿದರೆ ಹೋರಾಟ ದುರ್ಬಲಗೊಳ್ಳುವುದಿಲ್ಲ: ದಿಶಾ ರವಿಗೆ ಜಾಗತಿಕ ಬೆಂಬಲ

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಜಾಗತಿಕ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ‘ಟೂಲ್‌ಕಿಟ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ದಿಶಾ ಅವರಿಗೆ ಜಾಗತಿಕ ಬೆಂಬಲ ವ್ಯಕ್ತವಾಗುತ್ತಿದೆ.

ಕಮಲಾ ಹ್ಯಾರಿಸ್ ಅವರ ಸಂಬಂಧಿ ಮತ್ತು ಅಮೆರಿಕದ ವಕೀಲೆ ಮೀನಾ ಹ್ಯಾರಿಸ್ ದಿಶಾ ರವಿಗೆ ಬೆಂಬಲ ಸೂಚಿಸಿದ್ದು, “ರೈತರ ಪ್ರತಿಭಟನೆಯನ್ನು ಹೇಗೆ ಬೆಂಬಲಿಸಬೇಕು ಎಂಬ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೂಲ್‌ಕಿಟ್‌ ಅನ್ನು ಹಂಚಿಕೊಂಡಿದ್ದರಿಂದ ಭಾರತೀಯ ಅಧಿಕಾರಿಗಳು ಮತ್ತೊಬ್ಬ ಯುವ ಮಹಿಳಾ ಕಾರ್ಯಕರ್ತೆ 21 ವರ್ಷದ ದಿಶಾ ರವಿ ಅವರನ್ನು ಬಂಧಿಸಿದ್ದಾರೆ. ಇಂತಹ ಹೋರಾಟಗಾರರನ್ನು ಸರ್ಕಾರ ಗುರಿಯಾಗಿಸಿಕೊಂಡು ಏಕೆ ಅವರ ಬಾಯಿಮುಚ್ಚಿಸುತ್ತಿದೆ ಎಂದು ಕೇಳಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನನ್ನನ್ನು ಹೆದರಿಸೋಕೆ ನೋಟಿಸ್ ನೀಡಿದ್ದಾರೆ, ಫೆ. 21ರೊಳಗೆ ಹಿಂಪಡೆಯುತ್ತಾರಂತೆ: ಯತ್ನಾಳ್

ದಿಶಾ ರವಿಯವರಿಗೆ ಬಹುಭಾಷಾ ನಟ ಸಿದ್ದಾರ್ಥ್ ಬೆಂಬಲ ಸೂಚಿಸಿದ್ದು, “ದಿಶಾ ರವಿಯವರೊಂದಿಗೆ ಬೇಷರತ್ ನಿಲ್ಲುತ್ತೇವೆ. ನಿನಗೆ ಹೀಗಾಗಿರುವುದಕ್ಕೆ ನಮ್ಮನ್ನು ಕ್ಷಮಿಸು ಸಹೋದರಿ. ನಾವೆಲ್ಲರೂ ನಿನ್ನೊಂದಿಗೆ ಇದ್ದೇವೆ. ದೃಢವಾಗಿರು. ಈ ಅನ್ಯಾಯವೂ ಕಳೆದಹೋಗುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯಾಟವನ್ನೂ ಸೆರೆಹಿಡಿಯಿರಿ’-ಮೋದಿಗೆ ನೆಟ್ಟಿಗರ ತರಾಟೆ

ರಾಜ್ಯ ಸಭಾ ಸಂಸದರಾದ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದು, “ಇದು ದೌರ್ಜನ್ಯದ ಪರಮಾವಧಿ. ಇದು ಕಾನೂನುಬಾಹಿರ ಕಿರುಕುಳ ಮತ್ತು ಬೆದರಿಕೆಯಾಗಿದೆ. ದಿಶಾ ರವಿಯವರಿಗೆ ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಬರೆದುಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಟ್ವೀಟ್ ಮಾಡಿ, “21 ವರ್ಷದ ದಿಶಾ ರವಿ ದೇಶಕ್ಕೆ ತೊಂದರೆಯುಂಟು ಮಾಡುತ್ತಾರೆ ಎನ್ನುವುದಾದರೆ, ದೇಶದ ಬುಡ ಗಟ್ಟಿಯಿಲ್ಲ ಎನಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಅನುಕೂಲ ಮಾಡಿಕೊಡುವುದಿಲ್ಲ, ಮೂರೂ ಕ್ಷೇತ್ರದ ಉಪಚುನಾವಣೆಯಲ್ಲೂ ಸ್ಪರ್ಧೆ: ನಿರ್ಧಾರ ಬದಲಿಸಿದ HDK

ಸಿಪಿಐ ನ ಮುಖಂಡರಾದ ಸೀತಾರಾಂ ಯೆಚೋರಿ ಟ್ವೀಟ್ ಮಾಡಿ, “ರೈತರ ಮೊಮ್ಮಗಳನ್ನು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿಸಿದರೆ ಅದು ರೈತರ ಹೋರಾಟವನ್ನು ದುರ್ಬಲಗೊಳಿಸುತ್ತದೆ ಎಂದು ಮೋದಿ ಸರ್ಕಾರ ಎಣಿಸುತ್ತಿದೆ. ವಾಸ್ತವವಾಗಿ, ಇದು ದೇಶದ ಯುವಕರನ್ನು ಜಾಗೃತಗೊಳಿಸುತ್ತದೆ ಮತ್ತು ಪ್ರಜಾಪ್ರಭುತ್ವದ ಹೋರಾಟಗಳನ್ನು ಬಲಪಡಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, “ದಿಶಾ ರವಿಯ ಬಂಧನ ಪ್ರಜಾಪ್ರಭುತ್ವದ ಮೇಲಿನ ಅಸಾಂವಿಧಾನಿಕ ದಾಳಿಯಾಗಿದೆ. ರೈತರನ್ನು ಬೆಂಬಲಿಸುವುದು ಅಪರಾಧವಲ್ಲ” ಎಂದು ಬರೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, “ಪರಿಸರ ಹೋರಾಟಗಾರ್ತಿ ದಿಶಾ ರವಿಯ ಬಂಧನ ನರೇಂದ್ರ ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವದಲ್ಲಿ ಬಿಟ್ಟಿರುವ ಬಿರುಕನ್ನು ತೋರಿಸುತ್ತಿದೆ. ರೈತರನ್ನು ಬೆಂಬಲಿಸುವುದು ದೇಶದ್ರೋಹ ಪ್ರಕರಣದ ಅಡಿಯಲ್ಲಿ ಹೇಗೆ ಬರುತ್ತದೆ. ದೆಹಲಿ ಪೊಲೀಸರ ರಾಜಕೀಯ ಪ್ರೇರಿತವಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗೆ ಇನ್ನೂ ನೂರಾರು ಜನರು ದಿಶಾ ರವಿಯವರಿಗೆ ಬೆಂಬಲ ಸೂಚಿಸಿದ್ದಾರೆ. ರೈತ ಹೋರಾಟವನ್ನು ದುರ್ಬಲಗೊಳಿಸುವ ಸಲುವಾಗಿ ಕೇಂದ್ರದ ಬಿಜೆಪಿ ಸರ್ಕಾರ ಇಂತಹ ನೀಚ ಕೆಲಸಗಳನ್ನು ಮಾಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ.

ದಿಶಾ ರವಿ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. ಫ್ರೈಡೇಸ್ ಫಾರ್ ಫ್ಯೂಚರ್ ಇಂಡಿಯಾದ ಸಂಸ್ಥಾಪಕರಲ್ಲಿ ಒಬ್ಬರಾದ ದಿಶಾ ರವಿ ಅವರು ವಿವಾದಿತ ಟೂಲ್‌ಕಿಟ್ ಅನ್ನು ಸಂಪಾದಿಸಿ ಹಂಚಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಜನವರಿ 26 ರ ಗಣರಾಜ್ಯೋತ್ಸವದಂದು ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಈ ಟೂಲ್‌ಕಿಟ್‌ನ ಪಾತ್ರವಿದೆ ಎಂದು ಪೊಲೀಸರು ಆಪಾದಿಸಿದ್ದಾರೆ. ವಿಶೇಷ ಸಿಪಿ (ಅಪರಾಧ ಶಾಖೆ) ಪ್ರವೀರ್ ರಂಜನ್, ಪ್ರಾಥಮಿಕ ವಿಚಾರಣೆಯಲ್ಲಿ ವಿವಾದಿತ ಟೂಲ್‌ಕಿಟ್ ಅನ್ನು “ಖಲಿಸ್ತಾನಿ ಪರ ಸಂಸ್ಥೆ” ಪೊಯೆಟಿಕ್ ಜಸ್ಟೀಸ್ ಫೌಂಡೇಶನ್ ರಚಿಸಿದೆ ಎಂದು ಸೂಚಿಸಿದೆ ಎಂದು ಹೇಳಿದ್ದಾರೆ.

ಫ್ರೈಡೆ ಫಾರ್‌ ಫ್ಯೂಚರ್‌‌ ಎಂಬುವುದು ಅಂತಾರಾಷ್ಟ್ರೀಯ ಚಳವಳಿಯಾಗಿದ್ದು, ಇದರಲ್ಲಿ ವಿದ್ಯಾರ್ಥಿಗಳು ಶುಕ್ರವಾರದಂದು ತರಗತಿಯನ್ನು ಬಹಿಷ್ಕರಿಸಿ ಹವಾಮಾನ ಬದಲಾವಣೆಗಳ ವಿರುದ್ಧ ರಾಜಕಾರಣಿಗಳು ಮಾತನಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಾರೆ. ಗ್ರೇಟಾ ಥನ್ಬರ್ಗ್ ಸ್ವೀಡಿಷ್ ಸಂಸತ್ತಿನ ಹೊರಗೆ ಪ್ರತಿಭಟಿಸಿದ ನಂತರ ಇದು ವ್ಯಾಪಕ ಜನಪ್ರಿಯತೆಯನ್ನು ಗಳಿಸಿತು.

ಫೆಬ್ರವರಿ 4 ರಂದು ವಿವಾದಿತ ಟೂಲ್‌ಕಿಟ್‌ ತಯಾರಿಸಿದವರ ವಿರುದ್ದ ದೆಹಲಿ ಸೈಬರ್‌‌‌-ಕ್ರೈಮ್‌ ಸೆಲ್ ಪೊಲೀಸರು‌, ದೇಶದ್ರೋಹ, ಕ್ರಿಮಿನಲ್ ಪಿತೂರಿ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದರು.


ಇದನ್ನೂ ಓದಿ: ಜಮ್ಮುಕಾಶ್ಮೀರದಲ್ಲಿ ಮತ್ತೊಮ್ಮೆ ಗೃಹ ಬಂಧನ: ಮಾಜಿ ಮುಖ್ಯಮಂತ್ರಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...